AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾನ ಕೇರ್ ಮಾಡೋ ರೀತಿಗೆ ಯಶ್​ನ ಜಂಟಲ್​​ಮನ್ ಎಂದು ಕರೆದ ಬಾಲಿವುಡ್ ಮಂದಿ

ರಾಕಿಂಗ್ ಸ್ಟಾರ್ ಯಶ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ 'ಮನದ ಕಡಲು' ಚಿತ್ರದ ಟ್ರೇಲರ್ ಲಾಂಚ್‌ನಲ್ಲಿ ಪಾಲ್ಗೊಂಡ ಬಳಿಕ, 'ಟಾಕ್ಸಿಕ್' ಚಿತ್ರದ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 'ಟಾಕ್ಸಿಕ್' ಚಿತ್ರದ ಪೋಸ್ಟರ್ ಬಿಡುಗಡೆಯಾಗಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

ರಾಧಿಕಾನ ಕೇರ್ ಮಾಡೋ ರೀತಿಗೆ ಯಶ್​ನ ಜಂಟಲ್​​ಮನ್ ಎಂದು ಕರೆದ ಬಾಲಿವುಡ್ ಮಂದಿ
ಯಶ್ ರಾಧಿಕಾ
ರಾಜೇಶ್ ದುಗ್ಗುಮನೆ
|

Updated on:Mar 27, 2025 | 2:31 PM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದರು. ಅವರು ‘ಮನದ ಕಡಲು’ ಸಿನಿಮಾದ ಟ್ರೇಲರ್ ಲಾಂಚ್​ಗೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಈಗ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಯಶ್ ಅವರ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ಯಶ್ ಜೊತೆ ಅವರ ಪತ್ನಿ ರಾಧಿಕಾ ಪಂಡಿತ್ ಕೂಡ ಜೊತೆಗೆ ಇದ್ದರು.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಘೋಷಣೆ ಮಾಡಿದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಈ ಚಿತ್ರ ಯಾವಾಗ ರಿಲೀಸ್ ಆಗುತ್ತದೆ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ. ಬೆಂಗಳೂರಿನಲ್ಲಿ ಒಂದು ಹಂತದ ಶೂಟ್ ಮುಗಿಸಿದ ಬಳಿಕ ಇಡೀ ತಂಡ ಮುಂಬೈಗೆ ಶಿಫ್ಟ್ ಆಗಿದೆ. ಅಲ್ಲಿ ಚಿತ್ರತಂಡ ಶರವೇಗದಲ್ಲಿ ಚಿತ್ರೀಕರಣ ಮಾಡುತ್ತಿದೆ.

ಇದನ್ನೂ ಓದಿ
Image
ಯಶ್​ನ ಪ್ರೀತಿಸುತ್ತಿದ್ದ ವಿಚಾರವನ್ನು ಈ ನಟಿಯರ ಬಳಿ ಹೇಳಿಕೊಂಡಿದ್ದ ರಾಧಿಕಾ
Image
ಪಿವಿಆರ್​ನಲ್ಲಿ ಸಿನಿಮಾ ಮಾತ್ರವಲ್ಲ, ಪ್ರದರ್ಶನ ಆಗಲಿದೆ ಐಪಿಎಲ್ ಮ್ಯಾಚ್
Image
ದಳಪತಿ ವಿಜಯ್​ಗೆ ಸಂದೇಶ ಕೊಟ್ಟ ಪವನ್ ಕಲ್ಯಾಣ್; ಹೇಳಿದ ಕಿವಿಮಾತೇನು?
Image
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ

ಸದ್ಯ ಯಶ್ ಅವರು ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ‘ಟಾಕ್ಸಿಕ್’ ಚಿತ್ರದ ಶೂಟ್​ಗಾಗಿ ಅವರು ಅಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ. ಯಶ್ ಅವರು ಪಾಪರಾಜಿಗಳನ್ನು ಕಾಣುತ್ತಿದ್ದಂತೆ ಅವರತ್ತ ಕೈ ಬೀಸಿದ್ದಾರೆ. ಅವರೆಲ್ಲರಿಗೂ ನಮಸ್ಕರಿಸಿ ಆ ಬಳಿಕ ಕಾರನ್ನು ಏರಿದ್ದಾರೆ. ಯಶ್ ಜೊತೆ ರಾಧಿಕಾ ಪಂಡಿತ್ ಕೂಡ ಇದ್ದರು ಅನ್ನೋದು ವಿಶೇಷ. ಅವರ ಕೈ ಹಿಡಿದು ಯಶ್ ಬಂದಿದ್ದು, ಯಶ್​ನ ಜಂಟಲ್​ಮೆನ್ ಎಂದು ಪಾಪರಾಜಿಗಳು ಕರೆದಿದ್ದಾರೆ.

ಯಶ್ ಅವರು ಭಾನುವಾರ (ಮಾರ್ಚ್ 23) ಬೆಂಗಳೂರಿನಲ್ಲಿ ಇದ್ದರು. ನಗರದ ಲುಲು ಮಾಲ್​ನಲ್ಲಿ ಆಯೋಜಿಸಿದ್ದ ‘ಮನದ ಕಡಲು’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಯಶ್ ಅತಿಥಿಯಾಗಿ ತೆರಳಿದ್ದರು. ಅವರು ಹೊಸ ಕಲಾವಿದರನ್ನು ಬೆಂಬಲಿಸಿ ಬಂದಿದ್ದಾರೆ. ಇದಾದ ಬೆನ್ನಲ್ಲೇ ಅವರು ಮುಂಬೈಗೆ ಹಾರಿದ್ದಾರೆ.

ಇದನ್ನೂ ಓದಿ: ಯಶ್​ನ ಪ್ರೀತಿಸುತ್ತಿದ್ದ ವಿಚಾರವನ್ನು ಈ ನಟಿಯರ ಬಳಿ ಹೇಳಿಕೊಂಡಿದ್ದ ರಾಧಿಕಾ ಪಂಡಿತ್

ಯಶ್ ಅವರ ನಟನೆಯ ‘ಟಾಕ್ಸಿಕ್’ ಚಿತ್ರದ ಹೊಸ ಪೋಸ್ಟರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಪೋಸ್ಟರ್​ನಲ್ಲಿ ಸಿನಿಮಾ ಮುಂದಿನ ವರ್ಷ ಮಾರ್ಚ್​ 19ರಂದು ರಿಲೀಸ್ ಆಗಲಿದೆ ಎಂಬ ಮಾಹಿತಿ ರಿವೀಲ್ ಆಗಿದೆ. ಇದನ್ನು ಕೇಳಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:47 am, Tue, 25 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು