AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

ಅಂದು ಏನು ನಡೆಯಿತು ಎಂಬುದನ್ನು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ವಿವರಿಸಿದ್ದಾರೆ. ‘ಜನವರಿ 3ರಂದು ಸೆಲೆಬ್ರಿಟಿಗಳು ಕಾಟೇರ ಸಿನಿಮಾವನ್ನು ನೋಡಿಕೊಂಡು ವಾಪಸ್​ ಹೊರಟಾಗ ಲೇಟ್​ ಆಗಿತ್ತು. ಊಟ ಮಾಡಿಕೊಂಡು ಹೋಗಿ ಅಂತ ಎಲ್ಲರಿಗೂ ನಾನೇ ಮನವಿ ಮಾಡಿಕೊಂಡೆ’ ಎಂದು ರಾಕ್​ಲೈನ್​ ವೆಂಕಟೇಶ್ ಹೇಳಿದ್ದಾರೆ.

‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ
ರಾಕ್​ಲೈನ್​ ವೆಂಕಟೇಶ್​
ಮದನ್​ ಕುಮಾರ್​
|

Updated on: Jan 12, 2024 | 6:20 PM

Share

ಕೆಲವೇ ದಿನಗಳ ಹಿಂದೆ ‘ಕಾಟೇರ’ (Kaatera) ಸಿನಿಮಾದ ಸೆಲೆಬ್ರಿಟಿ ಶೋ ನಡೆದ ಬಳಿಕ ಚಿತ್ರತಂಡದವರು ಬೆಂಗಳೂರಿನ ಖಾಸಗಿ ಪಬ್​ನಲ್ಲಿ ಪಾರ್ಟಿ ಮಾಡಿದ್ದರು. ಅವಧಿ ಮೀರಿ ಪಾರ್ಟಿ ಮಾಡಿ, ನಿಯಮ ಉಲ್ಲಂಘಿಸಿದ್ದಕ್ಕಾಗಿ ಅನೇಕರಿಗೆ ನೋಟಿಸ್​ ಜಾರಿ ಮಾಡಲಾಗಿತ್ತು. ‘ಕಾಟೇರ’ ಸಿನಿಮಾದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ (Rockline Venkatesh)​, ನಾಯಕ ನಟ ದರ್ಶನ್​ ಹಾಗೂ ಇತರೆ ಸೆಲೆಬ್ರಿಟಿಗಳಿಗೆ ಸುಬ್ರಹ್ಮಣ್ಯ ನಗರ ಪೊಲೀಸರು ನೋಟಿಸ್​ ನೀಡಿದ್ದರು. ಈ ಪ್ರಕರಣಕ್ಕೆ ​ಸಂಬಂಧಿಸಿದಂತೆ ಇಂದು (ಜ.12) ದರ್ಶನ್​ (Darshan), ರಾಕ್​ಲೈನ್​ ವೆಂಕಟೇಶ್, ಡಾಲಿ ಧನಂಜಯ್, ಚಿಕ್ಕಣ್ಣ ಸೇರಿದಂತೆ ಹಲವರು ವಿಚಾರಣೆಗೆ ಹಾಜರಾಗಿದ್ದಾರೆ. ಬಳಿಕ ರಾಕ್​ಲೈನ್​ ವೆಂಕಟೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಂದು ಏನು ನಡೆಯಿತು ಎಂಬುದನ್ನು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ವಿವರಿಸಿದ್ದಾರೆ. ‘ಜನವರಿ 3ರಂದು ಸೆಲೆಬ್ರಿಟಿ ಶೋ ಆಯೋಜನೆ ಮಾಡಿದ್ದೆವು. ಆ ಸಂದರ್ಭದಲ್ಲಿ ಚಿತ್ರರಂಗದ ಗಣ್ಯ ವ್ಯಕ್ತಿಗಳನ್ನು ನಾವು ಕರೆಸಿದ್ದೆವು. ಸಿನಿಮಾ ನೋಡಿಕೊಂಡು ವಾಪಸ್​ ಹೊರಟಾಗ ಲೇಟ್​ ಆಗಿತ್ತು. ಊಟ ಮಾಡಿಕೊಂಡು ಹೋಗಿ ಅಂತ ಎಲ್ಲರಿಗೂ ನಾನೇ ಮನವಿ ಮಾಡಿಕೊಂಡೆ’ ಎಂದು ರಾಕ್​ಲೈನ್​ ವೆಂಕಟೇಶ್ ಹೇಳಿದ್ದಾರೆ.

ಇದನ್ನೂ ಓದಿ: ‘ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ’: ‘ಕಾಟೇರ’ ಗೆಲ್ಲಿಸಿದ ಪ್ರೇಕ್ಷಕರಿಗೆ ದರ್ಶನ್​ ಧನ್ಯವಾದ

‘ದರ್ಶನ್​ ಹೊರಟಿದ್ದರು. ಅಭಿಷೇಕ್​, ಸತೀಶ್​, ಧನಂಜಯ್​ ಅವರೆಲ್ಲ ಇದ್ದಾಗ ಜೆಟ್​ ಲ್ಯಾಗ್​ ಪಬ್​ ಮಾಲೀಕರಿಗೆ ನಾನು ಮನವಿ ಮಾಡಿಕೊಂಡೆ. ನಿಮ್ಮ ಹೋಟೆಲ್​ನಲ್ಲಿ ಊಟಕ್ಕೆ ವ್ಯವಸ್ಥೆ ಮಾಡಿಕೊಡಿ ಅಂತ ಕೇಳಿಕೊಂಡೆ. ಪಾರ್ಟಿ ಮಾಡಬೇಕು ಎಂಬ ಉದ್ದೇಶ ನಮಗೆ ಇರಲಿಲ್ಲ. ದರ್ಶನ್​ ಅವರಿಗೆ ಫೋನ್​ ಮಾಡಿದೆ. ಅವರು ಕೂಡ ಬಂದರು. ಅಷ್ಟು ಹೊತ್ತಿಗಾಗಲೇ ಜೆಟ್​ ಲ್ಯಾಗ್​ ಸಿಬ್ಬಂದಿ ಹೊರಟಿದ್ದರು. ಪಾಪ, ಅವರನ್ನು ಮತ್ತೆ ಕರೆಸಿದ್ದರಿಂದ ಅವರು ಊಟ, ತಿಂಡಿ ಕೊಡುವುದು ಲೇಟ್​ ಆಯಿತು’ ಎಂದಿದ್ದಾರೆ ರಾಕ್​ಲೈನ್​ ವೆಂಕಟೇಶ್.

‘ಲೇಟ್​ ಆಗಿದ್ದು ಹೊರತುಪಡಿಸಿದರೆ, ಯಾವುದೇ ಚಿಕ್ಕ ಗಲಾಟೆ, ಗಲಭೆ ಕೂಡ ಆಗಿಲ್ಲ. ಊಟ ಮಾಡಿಕೊಂಡು ನಾವು ಹೊರಟಿದ್ದೇವೆ. ಅಕ್ಕ-ಪಕ್ಕದವರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗದಂತೆ ದರ್ಶನ್​ ಗಮನ ಹರಿಸಿದರು. ಆ ಸಂದರ್ಭದಲ್ಲಿ ಪೊಲೀಸರು ಅಥವಾ ಅಬಕಾರಿ ಅಧಿಕಾರಿಗಳು ನಮ್ಮನ್ನು ಏನೂ ಕೇಳಲಿಲ್ಲ. ಇಷ್ಟೇ ನಡೆದಿದ್ದು. ಅಬಕಾರಿ ಇಲಾಖೆಯ ನಿಯಮಗಳು ಉಲ್ಲಂಘನೆ ಆಗಿದ್ದರೆ ನಾವು ತಲೆ ಬಾಗಲೇಬೇಕು. ಅದರಲ್ಲಿ ಎರಡನೇ ಮಾತಿಲ್ಲ. ಆದರೆ ನಾವು ಗ್ರಾಹಕರು. ಮೊದಲ ಸಲ ಗ್ರಾಹಕರಿಗೆ ನೋಟಿಸ್​ ಕೊಟ್ಟು ಠಾಣೆಗೆ ಕರೆಸಿದ್ದಾರೆ. ಇದು ಎಷ್ಟು ಸರಿಯೋ ನಮಗೆ ಗೊತ್ತಿಲ್ಲ’ ಎಂದು ರಾಕ್​ಲೈನ್​ ವೆಂಕಟೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು