AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಅಸಭ್ಯ ಮೆಸೇಜ್ ಮಾಡಿದವರಿಗೂ, ಮಾಡಿಸಿದವರಿಗೂ ಶಿಕ್ಷೆ ಆಗಬೇಕು: ರಾಕ್​ಲೈನ್ ವೆಂಕಟೇಶ್

ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ ಅವರಿಗೆ ದರ್ಶನ್ ಫ್ಯಾನ್ಸ್ ಅಶ್ಲೀಲವಾಗಿ ಸಂದೇಶಗಳನ್ನು ಕಳಿಸಿದ್ದಾರೆ. ಅಂಥವರಿಗೆ ಪಾಠ ಕಲಿಸಲು ರಮ್ಯಾ ಅವರು ಈಗಾಗಲೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಕೂಡ ದರ್ಶನ್ ಅಭಿಮಾನಿಗಳ ವರ್ತನೆಯನ್ನು ಖಂಡಿಸಿದ್ದಾರೆ. ರಾಕ್​ಲೈನ್ ವೆಂಕಟೇಶ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾಗೆ ಅಸಭ್ಯ ಮೆಸೇಜ್ ಮಾಡಿದವರಿಗೂ, ಮಾಡಿಸಿದವರಿಗೂ ಶಿಕ್ಷೆ ಆಗಬೇಕು: ರಾಕ್​ಲೈನ್ ವೆಂಕಟೇಶ್
Darshan, Ramya, Rockline Venkatesh
ಮದನ್​ ಕುಮಾರ್​
|

Updated on: Jul 31, 2025 | 5:55 PM

Share

ನಟಿ ರಮ್ಯಾ (Ramya) ಅವರಿಗೆ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಸಂದೇಶ ಕಳಿಸಿದ್ದರ ಬಗ್ಗೆ ಚಿತ್ರರಂಗದ ಹಲವು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರು ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದಾರೆ. ಮನವಿ ಸ್ವೀಕರಿಸಿದ ಬಳಿಕ ರಾಕ್​ಲೈನ್ ವೆಂಕಟೇಶ್ ಅವರು ಮಾಧ್ಯಮಗಳ ಎದುರು ಮಾತನಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡುವವರಿಗೆ ರಾಕ್​ಲೈನ್ ವೆಂಕಟೇಶ್ (Rockline Venkatesh) ಅವರು ಎಚ್ಚರಿಕೆ ನೀಡಿದ್ದಾರೆ.

‘ರಮ್ಯಾ ವಿಷಯದಲ್ಲಿ ನಿಜವಾದ ಫ್ಯಾನ್ಸ್ ಪೇಜ್​ಗಳಿಂದ ಮೆಸೇಜ್ ಬರುತ್ತಿದ್ದರೆ ಮಾಡಿದವರಿಗೂ, ಮಾಡಿಸುತ್ತಾ ಇರುವವರಿಗೂ ಶಿಕ್ಷೆ ಆಗಬೇಕು. ಅದರಲ್ಲಿ ಎರಡನೇ ಮಾತಿಲ್ಲ. ನಿಮ್ಮ ಮನೆಯಲ್ಲೂ ಹೆಣ್ಮಕ್ಕಳು ಇದ್ದಾರೆ. ನೀವು ಬೇರೆ ಹೆಣ್ಮಕ್ಕಳನ್ನು ಬೈಯ್ಯುವ ಬದಲು ಮೊದಲು ನಿಮ್ಮ ಮನೆಯಲ್ಲಿ ಇರುವ ಹೆಣ್ಮಕ್ಕಳನ್ನು ಕಾಪಾಡಿಕೊಳ್ಳಿ. ಅವರನ್ನು ಮೊದಲು ತೃಪ್ತಿಪಡಿಸಿ, ಸಂತೋಷವಾಗಿ ಇಟ್ಟುಕೊಳ್ಳಿ. ನಿಮ್ಮ ಬೈಗುಳದಲ್ಲಿ ಸಾಕಷ್ಟು ಅರ್ಥ ಇದೆ. ಅದು ನಿಮ್ಮ ಮನೆಯ ಹೆಣ್ಮಕ್ಕಳಿಗೂ ಅನ್ವಯಿಸುತ್ತದೆ’ ಎಂದು ರಾಕ್​ಲೈನ್ ವೆಂಕಟೇಶ್ ಹೇಳಿದರು.

‘ನಾಳೆ ಯಾವ ಸ್ಟಾರ್ ನಟ ಕೂಡ ನಿಮ್ಮನ್ನು ಬಂದು ಕಾಪಾಡಲ್ಲ. ಅದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ನನಗೆ ತುಂಬ ಜನ ಅಭಿಮಾನಿಗಳು ಈ ರೀತಿ ಬೈಯ್ದಿದ್ದಾರೆ. ನಾನು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಗಾಳಿಯಲ್ಲಿ ಗುಂಡು ಹೊಡೆಯುವವರನ್ನು ನಾನು ಕೇರ್ ಮಾಡಲ್ಲ. ಎದುರು ನಿಂತು ಮಾತನಾಡುವವರಿಗೆ ನಾನು ಗೌರವ ಕೊಡುತ್ತೇನೆ. ಅವನು ಕೆಟ್ಟದಾಗಿ ಬೈಯ್ದರೂ ಅವನಿಗೆ ಗೌರವ ಕೊಟ್ಟು ಏನಪ್ಪ ನಿನ್ನ ಸಮಸ್ಯೆ ಅಂತ ಕೇಳುತ್ತೇನೆ’ ಎಂದಿದ್ದಾರೆ ರಾಕ್​ಲೈನ್ ವೆಂಕಟೇಶ್.

ಇದನ್ನೂ ಓದಿ
Image
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
Image
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
Image
ದರ್ಶನ್ ಅಭಿಮಾನಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಮ್ಯಾ
Image
ನಟ ದರ್ಶನ್ ಅಭಿಮಾನಿಗಳ ಕಮೆಂಟ್ ನೋಡಿ ರಮ್ಯಾ ಖಡಕ್ ಪ್ರತಿಕ್ರಿಯೆ

‘ಇಷ್ಟು ಜನ ಮಾತನಾಡುವವರಿಗೆ ಎದುರು ನಿಂತು ಮಾತನಾಡೋಕೆ ಹೇಳಿ. ಎಂಥ ಹೀರೋನೇ ಆಗಿರಲಿ. ಆ ಹೀರೋನ ಸಪೋರ್ಟ್ ಮಾಡಿಕೊಂಡು ನಿಲ್ಲುತ್ತೇವೆ ಎಂಬ ನಿಜವಾದ ಫ್ಯಾನ್ಸ್ ನೀವಾಗಿದ್ದರೆ ಮುಂದೆ ಬನ್ನಿ. ಈ ಕಾರಣಕ್ಕೋಸ್ಕರ ಪೋಸ್ಟ್ ಮಾಡಿದ್ದು ಅಂತ ಒಪ್ಪಿಕೊಳ್ಳಿ. ಗಂಡಸಿನ ಥರ ಎದುರು ಬಂದು ನಿಂತರೆ ನಾನು ಮೆಚ್ಚುತ್ತೇನೆ. ಗೊತ್ತಿಲ್ಲದೇ ತಪ್ಪು ಮಾಡಿದ್ದಾರೆ ಅಂತ ರಮ್ಯಾ ಅವರ ಬಳಿ ನಾನೇ ಮನವಿ ಮಾಡಿ, ಕ್ರಮ ತೆಗೆದುಕೊಳ್ಳಬೇಡಿ ಎನ್ನುತ್ತೇನೆ. ಇದೆಲ್ಲ ಇಲ್ಲದೇ ಹಾಗೆಯೇ ಮುಂದುವರಿಯುವುದಾದರೆ ಕಾನೂನಿನ ಮೂಲಕ ಬುದ್ಧಿ ಕಲಿಸುತ್ತೇವೆ’ ಎಂದು ರಾಕ್​ಲೈನ್ ವೆಂಕಟೇಶ್ ಹೇಳಿದ್ದಾರೆ.

ಇದನ್ನೂಓದಿ: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್: ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು?

‘ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾಮಾ ಹರೀಶ್ ಅವರು ಕಲಾವಿದರ ಸಂಘಕ್ಕೆ ಮನವಿ ಕೊಟ್ಟಿದ್ದಾರೆ. ಈ ಘಟನೆಯನ್ನು ಇಷ್ಟು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋದವರಿಗೆ ಶಿಕ್ಷೆ ಆಗಲೇಬೇಕು. ಸೋಶಿಯಲ್ ಮೀಡಿಯಾವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಎಲ್ಲರಿಗೂ ಮನಸಾಕ್ಷಿ ಇದೆ. ಅದಕ್ಕೆ ನಾವು ಗೌರವ ನೀಡಬೇಕು. ನಿಮ್ಮ ಮನೆಯಲ್ಲಿ ಇರುವ ಹೆಣ್ಮಕ್ಕಳಿಗೆ ಈ ರೀತಿ ಬೈದರೆ ಸುಮ್ಮನೆ ಇರುತ್ತೀರಾ? ನಿಜವಾದ ಫ್ಯಾನ್ಸ್ ಈ ರೀತಿ ಮಾಡುತ್ತಿದ್ದಾರಾ ಅಥವಾ ಆ ನಾಯಕ ನಟರ ಹೆಸರು ಬಳಸಿಕೊಂಡು ಈ ರೀತಿ ಮಾಡುತ್ತಿದ್ದಾರಾ ಎಂಬುದು ಪತ್ತೆ ಆಗಬೇಕು’ ಎಂದಿದ್ದಾರೆ ರಾಕ್​ಲೈನ್ ವೆಂಕಟೇಶ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ