AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಅತ್ತೆಯಿಂದ ಗಾಯಕ ಲಕ್ಕಿ ಅಲಿ ವಿರುದ್ಧ ದೂರು, ಪ್ರಕರಣ ರದ್ದು ಮಾಡಿದ ಹೈಕೋರ್ಟ್

Rohini Sindhuri: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಐಎಎಸ್ ಅಧಿಕಾರಿ ಸುಧೀರ್ ರೆಡ್ಡಿ ಹಾಗೂ ಗಾಯಕ ಲಕ್ಕಿ ಅಲಿ ನಡುವೆ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಕೆಂಚೇನಹಳ್ಳಿ ಬಳಿ ಜಮೀನಿನ ಕುರಿತು ವಿವಾದ ನಡೆಯುತ್ತಿದೆ. ಇದೀಗ ರೋಹಿಣಿ ಸಿಂಧೂರಿಯ ಅತ್ತೆ ಲಕ್ಕಿ ಅಲಿ ವಿರುದ್ಧ ನೀಡಿರುವ ದೂರು ಕುರಿತಂತೆ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ರೋಹಿಣಿ ಸಿಂಧೂರಿ ಅತ್ತೆಯಿಂದ ಗಾಯಕ ಲಕ್ಕಿ ಅಲಿ ವಿರುದ್ಧ ದೂರು, ಪ್ರಕರಣ ರದ್ದು ಮಾಡಿದ ಹೈಕೋರ್ಟ್
ರೋಹಿಣಿ ಸಿಂಧೂರಿ-ಲಕ್ಕಿ ಅಲಿ
ಮಂಜುನಾಥ ಸಿ.
| Updated By: Digi Tech Desk|

Updated on:Dec 12, 2024 | 5:59 PM

Share

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕುಟುಂಬ ಹಾಗೂ ಗಾಯಕ ಲಕ್ಕಿ ಅಲಿ ಅವರ ನಡುವೆ ಜಮೀನಿಗೆ ಸಂಬಂಧಿಸಿದ ವಿವಾದ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ರೋಹಿಣಿ ಸಿಂಧೂರಿ ಅವರ ಅತ್ತೆ ಬುಜ್ಜಮ್ಮ ಎಂಬುವರು ಗಾಯಕ ಲಕ್ಕಿ ಅಲಿ ವಿರುದ್ಧ ದೂರು ದಾಖಲಿಸಿದ್ದರು. ಲಕ್ಕಿ ಅಲಿ ಕಡೆಯವರು ತಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ, ಕಾಂಪೌಂಡ್ ಒಡೆದು, ಗಿಡಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ಕೆಂಚೇನಹಳ್ಳಿಯ ಜಮೀನಿಗೆ ಲಕ್ಕಿ ಅಲಿ ಮತ್ತು ಅವರ ಬೆಂಬಲಿಗ ನುಗ್ಗಿ ಕಾಂಪೌಂಡ್ ಒಡೆದು, ಗಿಡಗಳನ್ನು ನಾಶ ಮಾಡಿದ್ದಾರೆ. ಇದರಿಂದ ನಮಗೆ 75 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ರೋಹಿಣಿ ಸಿಂಧೂರಿ ಅವರ ಅತ್ತೆ ಬುಜ್ಜಮ್ಮ ದೂರು ನೀಡಿದ್ದರು. ದೂರು ಆಧರಿಸಿ ಎಫ್​ಐಆರ್ ಸಹ ದಾಖಲಾಗಿತ್ತು. ಪ್ರಕರಣಕ್ಕೆ ತಡೆ ನೀಡುವಂತೆ ಲಕ್ಕಿ ಅಲಿ ಮತ್ತು ಮೈಲಪನಹಳ್ಳಿ ಶ್ರೀನಿವಾಸ್ ಎಂಬುವರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಇದೀಗ ಪ್ರಕರಣಕ್ಕೆ ತಡೆ ನೀಡಿದೆ.

2016 ರಲ್ಲಿ ಲಕ್ಕಿ ಅವರ ಸಹೋದನಿಂದ ಜಮೀನನ್ನು ರೋಹಿಣಿ ಸಿಂಧೂರಿ ಅವರ ಪತಿ ಸುಧೀರ್ ರೆಡ್ಡಿ ಖರೀದಿ ಮಾಡಿದ್ದರು. ಆ ಜಮೀನಿನ ಪಕ್ಕದಲ್ಲೇ ಲಕ್ಕಿ ಅಲಿ ಅವರಿಗೆ ಸೇರಿದ ಟ್ರಸ್ಟ್ ಹೆಸರಿನಲ್ಲಿ 87 ಎಕರೆ ಜಾಗವಿದೆ. ಈ ಜಮೀನಿಗೆ ಸಂಬಂಧಿಸಿದಂತೆ ಆಗಿನಿಂದಲೂ ಸುಧೀರ್ ರೆಡ್ಡಿ ಹಾಗೂ ಲಕ್ಕಿ ಅಲಿ ನಡುವೆ ಸಿವಿಲ್ ವ್ಯಾಜ್ಯ ನಡೆಯುತ್ತಿದೆ. ರೋಹಿಣಿ ಸಿಂಧೂರಿ ಅಧಿಕಾರ ದುರ್ಬಳಕೆ ಮಾಡಿ ತಮಗೆ ಬೆದರಿಕೆ ಕಿರುಕುಳ ನೀಡಿದ್ದಾರೆ ಎಂದು ಈ ಹಿಂದೆ ಲಕ್ಕಿ ಅಲಿ ಆರೋಪ ಮಾಡಿದ್ದರು.

ಇದನ್ನೂ ಓದಿ:ಖ್ಯಾತ ಗಾಯಕ ಗಂಭೀರ ಆರೋಪ, IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ

ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಸುಧೀರ್ ರೆಡ್ಡಿ, ಖಾಸಗಿ ದಾರಿಯನ್ನು ಸಾರ್ವಜನಿಕ ದಾರಿ ಎಂದು ವಾದಿಸಿ ಗೇಟ್ ತೆರೆಯುವಂತೆ ಒತ್ತಾಯ ಮಾಡಿದ್ದರು. ಪೊಲೀಸರು ಖಾಸಗಿ ವಾಹನಗಳಲ್ಲಿ ಬಂದು ಬೆದರಿಕೆ ಸಹ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ತಮ್ಮ ಬಳಿ ಇರುವುದಾಗಿ ಲಕ್ಕಿ ಅಲಿ ಪರ ವಕೀಲರು ಹೈಕೋರ್ಟ್​ನಲ್ಲಿ ವಾದ ಸಲ್ಲಿಸಿದ್ದಾರೆ. ರೋಹಿಣಿ ಸಿಂಧೂರಿ ಮತ್ತು ಅವರ ಪತಿ ಅಧಿಕಾರ ದುರ್ಬಳಕೆ ಮಾಡಿ, ಲಕ್ಕಿ ಅಲಿಗೆ ಕಿರುಕುಳ ನೀಡಿದ್ದಾರೆ ಎಂದು ವಕೀಲರು ವಾದಿಸಿದರು. ವಾದ ಆಲಿಸಿದ ನ್ಯಾಯಾಲಯವು ಲಕ್ಕಿ ಅಲಿ ಹಾಗೂ ಮೈಲಪನಹಳ್ಳಿ ಶ್ರೀನಿವಾಸ್ ಅವರ ವಿರುದ್ಧ ಪ್ರಕರಣಕ್ಕೆ ತಡೆ ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Thu, 12 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ