AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಜುಲೈ 5ರಂದು ‘ಕನ್ನಡತಿ’ ಹೀರೋ ಕಿರಣ್ ರಾಜ್ ಜನ್ಮದಿನಕ್ಕೆ ಸಿಗಲಿದೆ ‘ರಾನಿ’ ಟೀಸರ್​ ಗಿಫ್ಟ್​

Ronny Kannada Movie: ಸೆಟ್ಟೇರಿದ ದಿನದಿಂದಲೂ ‘ರಾನಿ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದ ಈ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ.

Kiran Raj: ಜುಲೈ 5ರಂದು ‘ಕನ್ನಡತಿ’ ಹೀರೋ ಕಿರಣ್ ರಾಜ್ ಜನ್ಮದಿನಕ್ಕೆ ಸಿಗಲಿದೆ ‘ರಾನಿ’ ಟೀಸರ್​ ಗಿಫ್ಟ್​
ಕಿರಣ್ ರಾಜ್
ಮದನ್​ ಕುಮಾರ್​
|

Updated on: Jun 25, 2023 | 10:30 AM

Share

ಕಿರುತೆರೆಯಲ್ಲಿ ಮಿಂಚಿದ ಬಳಿಕ ನಟ ಕಿರಣ್ ರಾಜ್​ (Kiran Raj) ಅವರು ಹಿರಿತೆರೆಯಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ಹೀರೋ ಆಗಿ ನಟಿಸಿದ್ದರು. ಇತ್ತೀಚೆಗೆ ಆ ಸೀರಿಯಲ್​ ಅಂತ್ಯವಾಯ್ತು. ಈಗ ಕಿರಣ್​ ರಾಜ್​ ಅವರು ಸಂಪೂರ್ಣವಾಗಿ ಸಿನಿಮಾಗಳ ಮೇಲೆ ಗಮನ ಹರಿಸಿದ್ದಾರೆ. ಅವರು ನಟಿಸುತ್ತಿರುವ ‘ರಾನಿ’ ಸಿನಿಮಾ (Ronny Kannada Movie) ಹಲವು ಕಾರಣಗಳಿಂದಾಗಿ ನಿರೀಕ್ಷೆ ಸೃಷ್ಟಿ ಮಾಡಿದೆ. ಕಿರುತೆರೆ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರುವ ಕಿರಣ್​ ರಾಜ್​ ಅವರು ದೊಡ್ಡ ಪರದೆಯಲ್ಲೂ ಮೋಡಿ ಮಾಡುವ ಪ್ರಯತ್ನದಲ್ಲಿದ್ದಾರೆ. ಅವರ ಜನ್ಮದಿನದ (Kiran Raj Birthday) ಪ್ರಯುಕ್ತ ‘ರಾನಿ’ ಟೀಸರ್​ ಬಿಡುಡೆ ಆಗಲಿದೆ. ಆ ದಿನಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೆಟ್ಟೇರಿದ ದಿನದಿಂದಲೂ ‘ರಾನಿ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದ ಈ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ. ಈ ಸಿನಿಮಾದ ಹೀರೋ ಕಿರಣ್ ರಾಜ್ ಅವರು ದುಬೈಗೆ ಹೋಗಿ 13,000 ಅಡಿ ಎತ್ತರದಿಂದ ಸ್ಕೈಡೈವ್ ಮಾಡುವ ಮೂಲಕ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದರು. ಅವರ ಈ ಸಾಹಸ ಕಂಡು ಅಭಿಮಾನಿಗಳು ಶಹಭಾಷ್​​ ಎಂದಿದ್ದರು. ಆನಂತರ ಬಿಡುಗಡೆ ಆದ ‘ರಾನಿ’ ಪೋಸ್ಟರ್​​ನಿಂದ ಇನ್ನಷ್ಟು ಹೈಪ್​ ಹೆಚ್ಚಿತ್ತು. ಹೀಗೆ ಟೀಸರ್​ ಮೂಲಕ ಕುತೂಹಲ ಹೆಚ್ಚಿಸಲಾಗುವುದು.

ಜುಲೈ 5ರಂದು ಕಿರಣ್ ರಾಜ್ ಅವರ ಹುಟ್ಟುಹಬ್ಬ. ಆ ದಿನವನ್ನು ಸಂಭ್ರಮದಿಂದ ಆಚರಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆ ಪ್ರಯುಕ್ತ ಅಂದು ‘ರಾನಿ’ ಸಿನಿಮಾ ಟೀಸರ್​ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಕಿರಣ್​ ರಾಜ್​ ಅವರ ಗೆಟಪ್​ ಗಮನ ಸೆಳೆಯುತ್ತಿವೆ. ತುಂಬ ಮಾಸ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಗುರುತೇಜ್​ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಒಂದು ಗಟ್ಟಿ ಕಥಾಹಂದರದೊಂದಿಗೆ ಆ್ಯಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ. ಇದೊಂದು ಗ್ಯಾಂಗ್​ಸ್ಟರ್ ಚಿತ್ರವಾದರೂ ಕುಟುಂಬ ಸಮೇತವಾಗಿ ನೋಡುವಂತಹ ಭಾವನಾತ್ಮಕ ವಿಚಾರಗಳು ಈ ಸಿನಿಮಾದಲ್ಲಿ ಇವೆ’ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kiran Raj: ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ಈಗ ‘ಶೇರ್​’; ಸೆಟ್ಟೇರಿತು ಹೊಸ ಸಿನಿಮಾ

ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ರವಿಶಂಕರ್, ಉಗ್ರಂ ರವಿ, ಮೈಕೋ ನಾಗರಾಜ್, ಬಿ. ಸುರೇಶ, ಉಗ್ರಂ ಮಂಜು, ಮಂಡ್ಯ ರಮೇಶ್, ಸೂರ್ಯ ಕುಂದಾಪುರ, ಸುಜಯ್ ಶಾಸ್ತ್ರಿ, ಗಿರೀಶ್ ಹೆಗ್ಡೆ, ಧರ್ಮಣ್ಣ ಕಡೂರು ಸೇರಿದಂತೆ ಹಲವರು ಈ ಚಿತ್ರದಲ್ಲಿದ್ದಾರೆ. ಸಮೀಕ್ಷಾ, ಅಪೂರ್ವಾ, ರಾಧ್ಯಾ ಅವರು ಈ ಚಿತ್ರದ ಮೂವರು ನಾಯಕಿಯರು. 3 ಡಿಫರೆಂಟ್​ ಪಾತ್ರಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಕಿರಣ್​ ರಾಜ್ ಫ್ಯಾನ್ಸ್​ಗೆ ಡಬಲ್ ಧಮಾಕಾ; ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ನಟ

ಇದೇ ವರ್ಷ ಡಿಸೆಂಬರ್​ ತಿಂಗಳಲ್ಲಿ ‘ರಾನಿ’ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ರಾಘವೇಂದ್ರ ಬಿ. ಕೋಲಾರ್ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೆಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಚಿನ್ ಬಸ್ರೂರ್ ಅವರು ಹಿನ್ನಲೆ ಸಂಗೀತ ನೀಡುತ್ತಿದ್ದಾರೆ. ‘ಸ್ಟಾರ್ ಕ್ರಿಯೇಷನ್’ ಬ್ಯಾನರ್ ಮೂಲಕ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗ್ಡೆ ಅವರು ನಿರ್ಮಾಣ ಮಾಡುತ್ತಿರುವ ಚೊಚ್ಚಲ ಚಿತ್ರ ಇದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು