AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಜುಲೈ 5ರಂದು ‘ಕನ್ನಡತಿ’ ಹೀರೋ ಕಿರಣ್ ರಾಜ್ ಜನ್ಮದಿನಕ್ಕೆ ಸಿಗಲಿದೆ ‘ರಾನಿ’ ಟೀಸರ್​ ಗಿಫ್ಟ್​

Ronny Kannada Movie: ಸೆಟ್ಟೇರಿದ ದಿನದಿಂದಲೂ ‘ರಾನಿ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದ ಈ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ.

Kiran Raj: ಜುಲೈ 5ರಂದು ‘ಕನ್ನಡತಿ’ ಹೀರೋ ಕಿರಣ್ ರಾಜ್ ಜನ್ಮದಿನಕ್ಕೆ ಸಿಗಲಿದೆ ‘ರಾನಿ’ ಟೀಸರ್​ ಗಿಫ್ಟ್​
ಕಿರಣ್ ರಾಜ್
ಮದನ್​ ಕುಮಾರ್​
|

Updated on: Jun 25, 2023 | 10:30 AM

Share

ಕಿರುತೆರೆಯಲ್ಲಿ ಮಿಂಚಿದ ಬಳಿಕ ನಟ ಕಿರಣ್ ರಾಜ್​ (Kiran Raj) ಅವರು ಹಿರಿತೆರೆಯಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ಹೀರೋ ಆಗಿ ನಟಿಸಿದ್ದರು. ಇತ್ತೀಚೆಗೆ ಆ ಸೀರಿಯಲ್​ ಅಂತ್ಯವಾಯ್ತು. ಈಗ ಕಿರಣ್​ ರಾಜ್​ ಅವರು ಸಂಪೂರ್ಣವಾಗಿ ಸಿನಿಮಾಗಳ ಮೇಲೆ ಗಮನ ಹರಿಸಿದ್ದಾರೆ. ಅವರು ನಟಿಸುತ್ತಿರುವ ‘ರಾನಿ’ ಸಿನಿಮಾ (Ronny Kannada Movie) ಹಲವು ಕಾರಣಗಳಿಂದಾಗಿ ನಿರೀಕ್ಷೆ ಸೃಷ್ಟಿ ಮಾಡಿದೆ. ಕಿರುತೆರೆ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರುವ ಕಿರಣ್​ ರಾಜ್​ ಅವರು ದೊಡ್ಡ ಪರದೆಯಲ್ಲೂ ಮೋಡಿ ಮಾಡುವ ಪ್ರಯತ್ನದಲ್ಲಿದ್ದಾರೆ. ಅವರ ಜನ್ಮದಿನದ (Kiran Raj Birthday) ಪ್ರಯುಕ್ತ ‘ರಾನಿ’ ಟೀಸರ್​ ಬಿಡುಡೆ ಆಗಲಿದೆ. ಆ ದಿನಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೆಟ್ಟೇರಿದ ದಿನದಿಂದಲೂ ‘ರಾನಿ’ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದ ಈ ಸಿನಿಮಾದಲ್ಲಿ ಒಂದಷ್ಟು ವಿಶೇಷತೆಗಳಿವೆ. ಈ ಸಿನಿಮಾದ ಹೀರೋ ಕಿರಣ್ ರಾಜ್ ಅವರು ದುಬೈಗೆ ಹೋಗಿ 13,000 ಅಡಿ ಎತ್ತರದಿಂದ ಸ್ಕೈಡೈವ್ ಮಾಡುವ ಮೂಲಕ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದರು. ಅವರ ಈ ಸಾಹಸ ಕಂಡು ಅಭಿಮಾನಿಗಳು ಶಹಭಾಷ್​​ ಎಂದಿದ್ದರು. ಆನಂತರ ಬಿಡುಗಡೆ ಆದ ‘ರಾನಿ’ ಪೋಸ್ಟರ್​​ನಿಂದ ಇನ್ನಷ್ಟು ಹೈಪ್​ ಹೆಚ್ಚಿತ್ತು. ಹೀಗೆ ಟೀಸರ್​ ಮೂಲಕ ಕುತೂಹಲ ಹೆಚ್ಚಿಸಲಾಗುವುದು.

ಜುಲೈ 5ರಂದು ಕಿರಣ್ ರಾಜ್ ಅವರ ಹುಟ್ಟುಹಬ್ಬ. ಆ ದಿನವನ್ನು ಸಂಭ್ರಮದಿಂದ ಆಚರಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆ ಪ್ರಯುಕ್ತ ಅಂದು ‘ರಾನಿ’ ಸಿನಿಮಾ ಟೀಸರ್​ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಕಿರಣ್​ ರಾಜ್​ ಅವರ ಗೆಟಪ್​ ಗಮನ ಸೆಳೆಯುತ್ತಿವೆ. ತುಂಬ ಮಾಸ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಗುರುತೇಜ್​ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಒಂದು ಗಟ್ಟಿ ಕಥಾಹಂದರದೊಂದಿಗೆ ಆ್ಯಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ. ಇದೊಂದು ಗ್ಯಾಂಗ್​ಸ್ಟರ್ ಚಿತ್ರವಾದರೂ ಕುಟುಂಬ ಸಮೇತವಾಗಿ ನೋಡುವಂತಹ ಭಾವನಾತ್ಮಕ ವಿಚಾರಗಳು ಈ ಸಿನಿಮಾದಲ್ಲಿ ಇವೆ’ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: Kiran Raj: ‘ಕನ್ನಡತಿ’ ಸೀರಿಯಲ್​ ನಟ ಕಿರಣ್​ ರಾಜ್​ ಈಗ ‘ಶೇರ್​’; ಸೆಟ್ಟೇರಿತು ಹೊಸ ಸಿನಿಮಾ

ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ರವಿಶಂಕರ್, ಉಗ್ರಂ ರವಿ, ಮೈಕೋ ನಾಗರಾಜ್, ಬಿ. ಸುರೇಶ, ಉಗ್ರಂ ಮಂಜು, ಮಂಡ್ಯ ರಮೇಶ್, ಸೂರ್ಯ ಕುಂದಾಪುರ, ಸುಜಯ್ ಶಾಸ್ತ್ರಿ, ಗಿರೀಶ್ ಹೆಗ್ಡೆ, ಧರ್ಮಣ್ಣ ಕಡೂರು ಸೇರಿದಂತೆ ಹಲವರು ಈ ಚಿತ್ರದಲ್ಲಿದ್ದಾರೆ. ಸಮೀಕ್ಷಾ, ಅಪೂರ್ವಾ, ರಾಧ್ಯಾ ಅವರು ಈ ಚಿತ್ರದ ಮೂವರು ನಾಯಕಿಯರು. 3 ಡಿಫರೆಂಟ್​ ಪಾತ್ರಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಕಿರಣ್​ ರಾಜ್ ಫ್ಯಾನ್ಸ್​ಗೆ ಡಬಲ್ ಧಮಾಕಾ; ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ ನಟ

ಇದೇ ವರ್ಷ ಡಿಸೆಂಬರ್​ ತಿಂಗಳಲ್ಲಿ ‘ರಾನಿ’ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ರಾಘವೇಂದ್ರ ಬಿ. ಕೋಲಾರ್ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೆಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಸಚಿನ್ ಬಸ್ರೂರ್ ಅವರು ಹಿನ್ನಲೆ ಸಂಗೀತ ನೀಡುತ್ತಿದ್ದಾರೆ. ‘ಸ್ಟಾರ್ ಕ್ರಿಯೇಷನ್’ ಬ್ಯಾನರ್ ಮೂಲಕ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗ್ಡೆ ಅವರು ನಿರ್ಮಾಣ ಮಾಡುತ್ತಿರುವ ಚೊಚ್ಚಲ ಚಿತ್ರ ಇದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ