AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ರಿಲೀಸ್​ ಆದ ಸಿನಿಮಾ ಸಂಜೆ ಲೀಕ್​! ಸ್ಟಾರ್​ ನಟನ ಚಿತ್ರಕ್ಕೆ ಪೈರಸಿ ಕಾಟ

ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಹಾಕಿ ಸಿದ್ಧಪಡಿಸಿದ ಸಿನಿಮಾ ಕ್ಷಣಮಾತ್ರದಲ್ಲಿ ಲೀಕ್​ ಮಾಡಿಬಿಡುತ್ತಾರೆ. ಈ ಮೂಲಕ ಸಾವಿರಾರು ಜನರ ಶ್ರಮವನ್ನು ವ್ಯರ್ಥಮಾಡಿ ಬಿಡುತ್ತಾರೆ ಕಳ್ಳರು.

ಬೆಳಗ್ಗೆ ರಿಲೀಸ್​ ಆದ ಸಿನಿಮಾ ಸಂಜೆ ಲೀಕ್​! ಸ್ಟಾರ್​ ನಟನ ಚಿತ್ರಕ್ಕೆ ಪೈರಸಿ ಕಾಟ
ಚಿತ್ರಮಂದಿರ
ರಾಜೇಶ್ ದುಗ್ಗುಮನೆ
| Edited By: |

Updated on: Mar 11, 2021 | 8:13 PM

Share

ಪೈರಸಿ ಅನ್ನೋದು ಚಿತ್ರರಂಗಕ್ಕೆ ಶಾಪವಾಗಿ ಮಾರ್ಪಟ್ಟಿದೆ. ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಹಾಕಿ ಸಿದ್ಧಪಡಿಸಿದ ಸಿನಿಮಾ ಕ್ಷಣಮಾತ್ರದಲ್ಲಿ ಲೀಕ್​ ಮಾಡಿಬಿಡುತ್ತಾರೆ. ಈ ಮೂಲಕ ಸಾವಿರಾರು ಜನರ ಶ್ರಮವನ್ನು ವ್ಯರ್ಥಮಾಡಿ ಬಿಡುತ್ತಾರೆ. ಈಗಲೂ ಹಾಗೆಯೇ ಆಗಿದೆ. ಇಂದು ರಿಲೀಸ್​ ಆದ ಸ್ಟಾರ್​ ನಟನ ಚಿತ್ರಕ್ಕೆ ಪೈರಸಿ ಕಾಟ ಎದುರಾಗಿದೆ. ಬಾಲಿವುಡ್​ ನಟ ರಾಜ್​ಕುಮಾರ್​ ರಾವ್​ ಹಾಗೂ ಜಾಹ್ನವಿ ಕಪೂರ್​ ನಟನೆಯ ‘ರೂಹಿ’ ಚಿತ್ರ ರಿಲೀಸ್​ ಆದ ದಿನವೇ ಸೋರಿಕೆ ಆಗಿದೆ. Tamilrockers, Movierulz, Telegramಗಳಲ್ಲಿ ಈ ಸಿನಿಮಾದ ಪ್ರಿಂಟ್​ ಹರಿದಾಡಿದೆ. ಇದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಾರರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದ ಈ ಚಿತ್ರಕ್ಕೆ ಪೈರಸಿ ತೀವ್ರ ಹಿನ್ನಡೆ ಉಂಟು ಮಾಡಿದೆ. ಈ ಮೊದಲು ತೆರೆಕಂಡಿದ್ದ  ರಾಜ್​ಕುಮಾರ್​ ರಾವ್​ ನಟನೆಯ ಸ್ತ್ರೀ ಸಿನಿಮಾ ಹಾರರ್​ ಕಾಮಿಡಿ ಶೈಲಿಯಲ್ಲೇ ಮೂಡಿ ಬಂದಿತ್ತು. ಇದೇ ಮಾದರಿಯಲ್ಲಿ ರೂಹಿ ಸಿನಿಮಾ ಇದೆ ಎಂದು ಹೇಳಲಾಗುತ್ತಿದೆ.

ಶ್ರೀದೇವಿ ಮಗಳಾಗಿರುವ ಜಾಹ್ನವಿ ಚಿತ್ರದ ನಾಯಕಿ. ಅವರ ಸಿನಿಮಾಗೆ ಪದೇ ಪದೇ ಹಿನ್ನಡೆ ಉಂಟಾಗುತ್ತಲೇ ಇದೆ. ಈ ಮೊದಲು ಕಾರ್ಗಿಲ್​ ಸಿನಿಮಾಗೆ ಕಥೆ ತಿರುಚಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದರಿಂದ ಚಿತ್ರಕ್ಕೆ ಹಿನ್ನಡೆ ಉಂಟಾಗಿತ್ತು. ಈಗ ಪೈರಸಿ ವಿಚಾರ ಜಾಹ್ನವಿ ಸಿನಿಮಾಗೆ ಏಟು ನೀಡಿದೆ.

Tamilrockers ಸೇರಿ ಸಾಕಷ್ಟು ಸೈಟ್​ಗಳು ಸಿನಿಮಾ ಪೈರಸಿಯಲ್ಲೇ ತೊಡಗಿಕೊಂಡಿವೆ. ಇವರು ಎಲ್ಲಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವ ವಿಚಾರ ಇಲ್ಲಿಯವರೆಗೆ ಬಯಲಾಗಿಲ್ಲ. ಅಷ್ಟೇ ಅಲ್ಲ, ಈ ಸೈಟ್​ಗಳ ವಿರುದ್ಧ ಅದೆಷ್ಟೋ ಕೇಸ್​ಗಳು ಕೂಡ ದಾಖಲಾಗಿವೆ ಎನ್ನುವ ಮಾಹಿತಿಯೂ ಸಿಕ್ಕಿದೆ.

ಇದನ್ನೂ ಓದಿ:

2.74 ಲಕ್ಷ ಬೆಲೆಯ ಉಡುಪು ಧರಿಸಿದ ನಟಿ ಜಾಹ್ನವಿ ಕಪೂರ್

Roberrt Kannada Movie Review: ಒಂದೇ ಟಿಕೆಟ್​ನಲ್ಲಿ ದರ್ಶನ್​ ಫ್ಯಾನ್ಸ್​ಗೆ ರಾಬರ್ಟ್​ ಮತ್ತು ರಾಘವನ ಡಬಲ್​ ಧಮಾಕಾ!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್