AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಆರ್​ಸಿಬಿ ಆಟಗಾರರು ಏನಂದ್ರು? ಇಲ್ಲಿದೆ ವಿಡಿಯೋ

ಕೊವಿಡ್ ಕಡಿಮೆ ಆಗಿದ್ದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ. ಹೀಗಾಗಿ, ಐಪಿಎಲ್ ಆಟಗಾರರು ಬಯೋಬಬಲ್​ನಲ್ಲಿದ್ದಾರೆ. ಈ ಸಮಯದಲ್ಲಿ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ ಆಟಗಾರರಿಗೆ ರಿಲ್ಯಾಕ್ಸ್ ಫೀಲ್ ಆಗಿದೆ.

‘ಕೆಜಿಎಫ್: ಚಾಪ್ಟರ್​ 2’ ವೀಕ್ಷಿಸಿದ ಆರ್​ಸಿಬಿ ಆಟಗಾರರು ಏನಂದ್ರು? ಇಲ್ಲಿದೆ ವಿಡಿಯೋ
ಆರ್​​ಸಿಬಿ-ಯಶ್
TV9 Web
| Edited By: |

Updated on: Apr 21, 2022 | 2:11 PM

Share

‘ಕೆಜಿಎಫ್: ಚಾಪ್ಟರ್​ 2’ (KGF Chapter 2) ಜತೆ ಐಪಿಎಲ್ ತಂಡ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (Royal Challengers Bangalore) ಕೈಜೋಡಿಸಿದೆ. ಇತ್ತೀಚೆಗೆ ಆರ್​ಸಿಬಿ ಹಾಗೂ ಎಲ್​​ಎಸ್​ಜಿ ನಡುವಿನ ಪಂದ್ಯವನ್ನು ‘ಕೆಜಿಎಫ್ 2’ನಲ್ಲಿ ನಟಿಸಿದ ಸಂಜಯ್ ದತ್, ರವೀನಾ ಟಂಡನ್, ನಿರ್ಮಾಪಕ ವಿಜಯ್ ಕಿರಗಂದೂರು ವೀಕ್ಷಿಸಿದ್ದರು. ಸಂಜಯ್ ದತ್​ ಜೆರ್ಸಿ ಮೇಲೆ ಅಧೀರ ಎಂದು ಬರೆದುಕೊಂಡಿರುವುದು ಸಾಕಷ್ಟು ಗಮನ ಸೆಳೆದಿತ್ತು. ಸಿನಿಮಾ ಮಂದಿ ಹೇಗೆ ಕ್ರಿಕೆಟ್ ವೀಕ್ಷಿಸಿದ್ದಾರೋ ಅದೇ ರೀತಿ, ಆರ್​ಸಿಬಿ ಆಟಗಾರರು ‘ಕೆಜಿಎಫ್: 2’ ಸಿನಿಮಾ ಕಣ್ತುಂಬಿಕೊಂಡಿದ್ದಾರೆ. ಸಿನಿಮಾ ನೋಡಿ ಎಲ್ಲರೂ ಸಖತ್ ಥ್ರಿಲ್ ಆಗಿದ್ದಾರೆ. ಈ ವಿಡಿಯೋವನ್ನು ಆರ್​ಸಿಬಿ ತಂಡ ಯೂಟ್ಯೂಬ್ ಚಾನೆಲ್​​ನಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ.

ಕೊವಿಡ್ ಕಡಿಮೆ ಆಗಿದ್ದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ. ಹೀಗಾಗಿ, ಐಪಿಎಲ್ ಆಟಗಾರರು ಬಯೋಬಬಲ್​ನಲ್ಲಿದ್ದಾರೆ. ಅಂದರೆ, ಈ ಆಟಗಾರರು ಹೊರಗಿನವರ ಜತೆ ಸಂಪರ್ಕಕ್ಕೆ ಬರುವಂತಿಲ್ಲ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ. ಈ ಸಮಯದಲ್ಲಿ ಸಿನಿಮಾ ನೋಡಿದರೆ ಮನಸ್ಸು ಹಗುರಾಗುತ್ತದೆ. ‘ಕೆಜಿಎಫ್ 2’ ಸಿನಿಮಾ ವೀಕ್ಷಿಸಿದ ಆಟಗಾರರಿಗೂ ರಿಲ್ಯಾಕ್ಸ್ ಫೀಲ್ ಆಗಿದೆ.

ಸಿನಿಮಾ ವೀಕ್ಷಿಸುವುದಕ್ಕೂ ಮೊದಲು, ಹರ್ಷಲ್ ಪಟೇಲ್​, ಮೊಹ್ಮದ್ ಸಿರಾಜ್ ಮೊದಲಾದವರು ಚಿತ್ರದ ಬಗ್ಗೆ ನಿರೀಕ್ಷೆ ಇದೆ ಎಂದು ಹೇಳಿದ್ದರು. ಸಿನಿಮಾ ವೀಕ್ಷಿಸಿದ ನಂತರ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ‘ಪ್ರಶಾಂತ್ ನೀಲ್ ಅವರ ಕೆಲಸ ನಿಜಕ್ಕೂ ಮೆಚ್ಚಿಕೊಳ್ಳುವಂತದ್ದು. ಯಶ್ ಅವರ ಗಡ್ಡ ತುಂಬಾನೇ ಇಷ್ಟವಾಯಿತು’ ಎಂದು ಸಿರಾಜ್ ಹೇಳಿದ್ದಾರೆ. ಮ್ಯಾಕ್ಸ್​ವೆಲ್​, ಹರ್ಷಲ್ ಪಟೇಲ್ ಮೊದಲಾದವರು ಸಿನಿಮಾ ವೀಕ್ಷಿಸಿದ್ದಾರೆ. ‘ಪಾರ್ಟ್​ 3’ ಬರುವ ಬಗ್ಗೆಯೂ ಎರಡನೇ ಚಾಪ್ಟರ್​ ಕೊನೆಯಲ್ಲಿ ಸೂಚನೆ ಸಿಕ್ಕಿದೆ. ಈ ಬಗ್ಗೆಯೂ ಆಟಗಾರರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಕ್ರೀಡೆ ಮತ್ತು ಚಲನಚಿತ್ರ ಮನರಂಜನೆಯ ಪರಿಪೂರ್ಣ ಸಮ್ಮಿಲನ ಆಗಿದೆ. ಈ ಸಹಯೋಗವು ಭರಪೂರ ಮನರಂಜನೆ, ಗ್ಲಾಮರ್, ಚಲನಚಿತ್ರಗಳು, ಕ್ರೀಡೆಗಳ ಅದ್ಭುತ ಸಂಗಮವನ್ನು ಉಂಟುಮಾಡಲಿದೆ. ಕ್ರಿಕೆಟ್ ಮತ್ತು ಚಲನಚಿತ್ರಗಳಲ್ಲಿ ಅತ್ಯುತ್ಸಾಹ ಹೊಂದಿರುವ ದೇಶದಲ್ಲಿ, ಬೆಂಗಳೂರಿನ ಎರಡು ಅತ್ಯಂತ ಪ್ರೀತಿಯ ಕ್ಷೇತ್ರಗಳ ಹಿಂದೆಂದೂ ನೋಡಿರದ ಸಂಯೋಜನೆಯನ್ನು ಈ ಸಹಭಾಗಿತ್ವವು ರೂಪಿಸುತ್ತದೆ’ ಎಂದು ‘ಹೊಂಬಾಳೆ ಫಿಲ್ಮ್ಸ್​’ ಈ ಮೊದಲು ತಿಳಿಸಿತ್ತು.

ಇದನ್ನೂ ಓದಿ: ಮದುವೆ ಆಹ್ವಾನ ಪತ್ರಿಕೆಯಲ್ಲೂ ‘ಕೆಜಿಎಫ್​: ಚಾಪ್ಟರ್​ 2’ ಡೈಲಾಗ್​; ಆದ್ರೆ ಇಲ್ಲಿದೆ ಒಂದು ಟ್ವಿಸ್ಟ್

KGF Chapter 2: ಬಾಕ್ಸಾಫೀಸ್ ಆಯ್ತು.. ಈಗ ಐಎಂಡಿಬಿ ರೇಟಿಂಗ್​ನಲ್ಲೂ ‘ಕೆಜಿಎಫ್ ಚಾಪ್ಟರ್ 2’ ದಾಖಲೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್