AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಹಲವು ಹೊಸ ಪ್ರಯತ್ನ; ರಿಲೀಸ್ ಆಗುತ್ತಿರುವ ಸಿನಿಮಾಗಳು ಯಾವವು?

ಈ ವಾರ ಕನ್ನಡ ಚಿತ್ರರಂಗದಲ್ಲಿ ಮೂರು ಹೊಸ ಚಿತ್ರಗಳು ತೆರೆಕಾಣುತ್ತಿವೆ. ‘ಫಾರೆಸ್ಟ್’,‘ರುದ್ರ ಗರುಡ ಪುರಾಣ’ ಮತ್ತು ‘ರಾಯಲ್’ ಚಿತ್ರಗಳು ಪ್ರೇಕ್ಷಕರ ಮುಂದೆ ಬರುತ್ತಿವೆ. ‘ಫಾರೆಸ್ಟ್’ ಆ್ಯಕ್ಷನ್, ಕಾಮಿಡಿ ಮತ್ತು ಹಾರರ್ ಅಂಶಗಳನ್ನು ಹೊಂದಿದೆ. ‘ರಾಯಲ್’ ಚಿತ್ರಕ್ಕೆ ದರ್ಶನ್ ಸಹೋದರ ದಿನಕರ್ ನಿರ್ದೇಶನ ಮಾಡಿದ್ದಾರೆ.

ಈ ವಾರ ಹಲವು ಹೊಸ ಪ್ರಯತ್ನ; ರಿಲೀಸ್ ಆಗುತ್ತಿರುವ ಸಿನಿಮಾಗಳು ಯಾವವು?
ಈ ವಾರ ರಿಲೀಸ್​ ಆಗುತ್ತಿರೋ ಸಿನಿಮಾಗಳು
TV9 Web
| Edited By: |

Updated on: Jan 22, 2025 | 11:52 AM

Share

ಶುಕ್ರವಾರ ಮತ್ತೆ ಬಂದಿದೆ. ಜನವರಿ 26 ಗಣರಾಜ್ಯೋತ್ಸವ ಭಾನುವಾರ ಬಂದ ಹಿನ್ನೆಲೆಯಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್​ಗೆ ಮುಂದಾಗುತ್ತಿಲ್ಲ. ಕನ್ನಡ ಮಾತ್ರವಲ್ಲದೆ, ಈ ವಾರ ಬಾಲಿವುಡ್​​ನಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ. ಹಾಗಾದರೆ ಕನ್ನಡದಲ್ಲಿ ಯಾವೆಲ್ಲ ಸಿನಿಮಾ ರಿಲೀಸ್ ಆಗುತ್ತಿದೆ? ಪರಭಾಷೆಯಲ್ಲಿ ಬಿಡುಗಡೆ ಕಾಣುತ್ತಿರುವ ಸಿನಿಮಾಗಳು ಯಾವವು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಫಾರೆಸ್ಟ್’

‘ಫಾರೆಸ್ಟ್’ ಹೆಸರಿನ ಕನ್ನಡ ಸಿನಿಮಾ ಜನವರಿ 24ರಂದು ತೆರೆಗೆ ಬರುತ್ತಿದೆ. ಆ್ಯಕ್ಷನ್, ಕಾಮಿಡಿ, ಹಾರರ್ ಹಾಗೂ ಥ್ರಿಲ್ ಅಂಶಗಳು ಈ ಚಿತ್ರದಲ್ಲಿ ಇವೆ. ಈ ಚಿತ್ರದಲ್ಲಿ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರು ನಂದನ್, ಶರಣ್ಯಾ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರ ಮೋಹನ್ ನಿರ್ದೇಶನದ ಈ ಚಿತ್ರಕ್ಕೆ ಎನ್​ಎಂ ಕಾಂತರಾಜ್ ಬಂಡವಾಳ ಹೂಡಿದ್ದಾರೆ. ಧರ್ಮ ವಿಶ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ರುದ್ರ ಗರುಡ ಪುರಾಣ

ರಿಷಿ, ಪ್ರಿಯಾಂಕಾ ಕುಮಾರ್, ವಿನೋದ್ ಆಳ್ವಾ, ಅವಿನಾಶ್, ಕೆಎಸ್ ಶ್ರೀಧರ್, ಶಿವರಾಜ್​ ಕೆಆರ್​ ಪೇಟೆ ಮೊದಲಾದವರು ನಟಿಸಿರೋ ‘ರುದ್ರ ಗರುಡ ಪುರಾಣ’ ಈ ವಾರ (ಜನವರಿ 24 ) ತೆರೆಗೆ ಬರುತ್ತಿದೆ. ಕೆಎಸ್ ನಂದೀಶ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದು, ಅಶ್ವಿನಿ ವಿಜಯ್ ಲೋಹಿತ್, ವಿಜಯ್ ಲೋಹಿತ್ ನಿರ್ಮಾಣ ಮಾಡಿದ್ದಾರೆ.

ರಾಯಲ್

ಕಿರುತೆರೆ ಮೂಲಕ ಫೇಮಸ್ ಆದವರು ವಿರಾಟ್. ಅವರ ನಟನೆಯ ‘ರಾಯಲ್’ ಜನವರಿ 14ರಂದು ರಿಲೀಸ್ ಆಗುತ್ತಿದೆ. ಸಂಜನಾ ಆನಂದ್, ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ದರ್ಶನ್ ಸಹೋದರ ದಿನಕರ್ ತೂಗುದೀಪ ಅವರು ಈ ಚಿತ್ರ ನಿರ್ದೇಶನ ಮಾಡಿದ್ದು ನಿರೀಕ್ಷೆ ಇದೆ. ಜಯಣ್ಣ ಹಾಗೂ ಭೋಗೇಂದ್ರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ 18 ಶೂಟ್​ಗೆ ತಡವಾಗಿ ಬಂದ ಸಲ್ಮಾನ್; ಸಿಟ್ಟಿನಿಂದ ಹೊರ ನಡೆದ ಅಕ್ಷಯ್ ಕುಮಾರ್?

ಬಾಲಿವುಡ್​ನಲ್ಲಿ

ಬಾಲಿವುಡ್​ನಲ್ಲಿ ಅಕ್ಷಯ್ ಕುಮಾರ್ ನಟನೆಯ ‘ಸ್ಕೈ ಫೋರ್ಸ್’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಈ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಅಕ್ಷಯ್ ಕುಮಾರ್ ಅವರು ಈ ಚಿತ್ರದ ಮೂಲಕ ಗೆಲುವು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?