AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತದವರ ಅಬ್ಬರಕ್ಕೆ ಮಂಕಾದ ಬಾಲಿವುಡ್​; ಅವರಿಗೆ ಕಾಡುತ್ತಿದೆ ಅಭದ್ರತೆ?

ಹಲವು ವರ್ಷಗಳ ಹಿಂದೆ ಬಾಲಿವುಡ್​ ಚಿತ್ರಗಳು ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತಿದ್ದವು. ಹಲವು ಹಿಂದಿ ಸಿನಿಮಾಗಳು ಬೇರೆಬೇರೆ ಭಾಷೆಗೆ ಡಬ್​ ಆದವು. ಆದರೆ, ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡುತ್ತಿವೆ.

ದಕ್ಷಿಣ ಭಾರತದವರ ಅಬ್ಬರಕ್ಕೆ ಮಂಕಾದ ಬಾಲಿವುಡ್​; ಅವರಿಗೆ ಕಾಡುತ್ತಿದೆ ಅಭದ್ರತೆ?
ಯಶ್​- ಅಲ್ಲು ಅರ್ಜುನ್​-ಜ್ಯೂ.ಎನ್​ಟಿಆರ್​
TV9 Web
| Edited By: |

Updated on: Mar 30, 2022 | 1:43 PM

Share

ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ ಜೋರಾಗಿದೆ. ಹಿಂದಿ ಚಿತ್ರರಂಗದಲ್ಲೂ ನಮ್ಮ ಸಿನಿಮಾಗಳು ಪಾರುಪತ್ಯ ಸಾಧಿಸುತ್ತಿವೆ. ಬಾಲಿವುಡ್ ​ ಸಿನಿಮಾಗಳಿಗಿಂತ (Bollywood Movie) ಹಿಂದಿಗೆ ಡಬ್​ ಆಗಿ ತೆರೆಕಾಣುತ್ತಿರುವ ದಕ್ಷಿಣ ಭಾರತದ ಸಿನಿಮಾಗಳು (South Indian Movies) ಬಾಕ್ಸ್​ ಆಫೀಸ್​ನಲ್ಲಿ ಹೆಚ್ಚಿನ ಕಲೆಕ್ಷನ್​ ಮಾಡುತ್ತಿವೆ. ಇದರಿಂದ ಸಹಜವಾಗಿಯೇ ಬಾಲಿವುಡ್ ಮಂದಿಗೆ ಅಭದ್ರತೆ ಕಾಡೋಕೆ ಆರಂಭವಾಗಿದೆ ಎನ್ನುವ ಮಾತು ಕೇಳಿಬಂದಿದೆ. ಈ ಮಧ್ಯೆ ಬಾಲಿವುಡ್​ ಸಿನಿಮಾಗಳು ಒಳ್ಳೆಯ ಕಮಾಯಿ ಮಾಡುತ್ತಿಲ್ಲ. ಇದರಿಂದ ಬಾಲಿವುಡ್​ ಮಂಕಾಗಿದೆ.

ಹಲವು ವರ್ಷಗಳ ಹಿಂದೆ ಬಾಲಿವುಡ್​ ಚಿತ್ರಗಳು ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತಿದ್ದವು. ಹಲವು ಹಿಂದಿ ಸಿನಿಮಾಗಳು ಬೇರೆಬೇರೆ ಭಾಷೆಗೆ ಡಬ್​ ಆದವು. ಆದರೆ, ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡುತ್ತಿವೆ. ಹಲವು ಚಿತ್ರಗಳು 100 ಕೋಟಿ ಕ್ಲಬ್ ಸೇರುತ್ತಿವೆ.

ರಾಜಮೌಳಿ ನಿರ್ದೇಶನದ ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾಗಳು ಹಿಂದಿ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತು. ಆ ಬಳಿಕ ಹಲವು ದಕ್ಷಿಣ ಭಾರತದ ಸಿನಿಮಾಗಳು ಹಿಂದಿಗೆ ಡಬ್ ಆಗಿ ತೆರೆಕಂಡವು. ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾ ಕಾನ್ಸೆಪ್ಟ್​ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದೆ.

ಕನ್ನಡದ ‘ಕೆಜಿಎಫ್​’ ಸಿನಿಮಾ ಹಿಂದಿ ಬಾಕ್ಸ್ ಆಫೀಸ್​ನಲ್ಲಿ 44 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು. ಕನ್ನಡದ ಚಿತ್ರವೊಂದು ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ಮಾಡಿದ್ದು ಅದೇ ಮೊದಲು. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ತೆಲುಗಿನ ‘ಪುಷ್ಪ’ ಸಿನಿಮಾ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 100 ಕೋಟಿ ಗಳಿಸಿದೆ. ಮಾರ್ಚ್​ 25ರಂದು ರಿಲೀಸ್​ ಆದ ‘ಆರ್​ಆರ್​ಆರ್​’ ಸಿನಿಮಾ ಹಿಂದಿ ಬಾಕ್ಸ್ ಆಫೀಸ್​ನಲ್ಲಿ ಒಂದು ವಾರ ಕಳೆಯುವುದರೊಳಗೆ 100 ಕೋಟಿ ಕ್ಲಬ್​ ಸೇರಿದೆ. ಈ ಚಿತ್ರ ಅನಾಯಾಸವಾಗಿ 200 ಕೋಟಿ ಗಳಿಸಲಿದೆ.

ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ತೆರೆಕಂಡ ಕೆಲವೇ ಕೆಲವು ಬಾಲಿವುಡ್​ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿವೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’, ಕಬೀರ್ ಖಾನ್ ನಿರ್ದೇಶನದ ‘83’ ಚಿತ್ರಗಳು 100 ಕೋಟಿ ರೂಪಾಯಿ ಗಳಿಸಿ ವ್ಯವಹಾರ ನಿಲ್ಲಿಸಿದವು. ಇತ್ತೀಚೆಗೆ ತೆರೆಗೆ ಬಂದ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ 200 ಕೋಟಿ ರೂಪಾಯಿ ಗಳಿಸಿ ಕಮಾಲ್ ಮಾಡಿದೆ. ಇದನ್ನು ಬಿಟ್ಟು ಮತ್ತಾವುದೇ ಹೇಳಿಕೊಳ್ಳುವಂತಹ ಸಿನಿಮಾ ಬಂದಿಲ್ಲ.

ದಕ್ಷಿಣ ಭಾರತದ ಸಿನಿಮಾಗಳು ಬಾಲಿವುಡ್​ನಲ್ಲಿ ಸದ್ದು ಮಾಡುತ್ತಿರುವುದಕ್ಕೆ ಅಲ್ಲಿನ ನಟ, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಅಭದ್ರತೆ ಕಾಡುತ್ತಿದೆ ಎನ್ನಲಾಗುತ್ತಿದೆ. ಇನ್ನು, ದಕ್ಷಿಣ ಭಾರತದ ಹಿಟ್​ ಚಿತ್ರಗಳನ್ನು ರಿಮೇಕ್ ಮಾಡೋಕೆ ಬಾಲಿವುಡ್​ ಮಂದಿ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಲ್ಲಿ ಸಿದ್ಧಗೊಳ್ಳುತ್ತಿರುವ ಕಥೆಯನ್ನು ಜನರು ಏಕೆ ಇಷ್ಟಪಡುತ್ತಿಲ್ಲ ಎಂಬುದು ಅಲ್ಲಿನ ನಿರ್ದೇಶಕರಿಗೆ ಯಕ್ಷ ಪ್ರಶ್ನೆಯಾಗಿದೆ. ಈ ಬಗ್ಗೆ ನಟ ಸಲ್ಮಾನ್​ ಖಾನ್​ ಕೂಡ ಮಾತನಾಡಿದ್ದರು.

ಇದನ್ನೂ ಓದಿ: RRR Box Office Collection: ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ‘ಆರ್​ಆರ್​ಆರ್​’ ಅಬ್ಬರ; ವಿಶ್ವಾದ್ಯಂತ ಧೂಳೆಬ್ಬಿಸಿತು ರಾಜಮೌಳಿ ಸಿನಿಮಾ

ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್​ಆರ್​ಆರ್​’ ನಿರ್ದೇಶಕನ 5 ಸೂತ್ರಗಳು

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ