ಆತ್ಮಹತ್ಯೆ ಮಾಡಿಕೊಂಡ ಜಗದೀಶ್​ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ

ಪವಿತ್ರಾ ಗೌಡ ಅವರು ಮನೆ ಖರೀದಿಸುವಾಗ ಸೌಂದರ್ಯಾ ಜಗದೀಶ್​ ಬಳಿ 2 ಕೋಟಿ ರೂಪಾಯಿ ಹಣ ಪಡೆದಿದ್ದರು. ಈ ವರ್ಷ ಜಗದೀಶ್​ ಆತ್ಮಹತ್ಯೆ ಮಾಡಿಕೊಂಡರು. ‘ಪವಿತ್ರಾ ಗೌಡಗೆ ನಮ್ಮ ಮನೆಯವರು ಯಾಕೆ ಹಣ ನೀಡಿದ್ದರು ಎಂಬುದು ನನಗೆ ಗೊತ್ತಿಲ್ಲ. ಅದಕ್ಕೂ ನಮ್ಮ ಯಜಮಾನರ ಸಾವಿಗೂ ಸಂಬಂಧ ಇಲ್ಲ. ಈಗ ಬ್ಯಾಂಕ್​ ವಿವರ ತೆಗೆಸುತ್ತಿದ್ದೇನೆ’ ಎಂದು ಸೌಂದರ್ಯಾ ಜಗದೀಶ್​ ಪತ್ನಿ ರೇಖಾ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಜಗದೀಶ್​ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ
ಪವಿತ್ರಾ ಗೌಡ, ಸೌಂದರ್ಯಾ ಜಗದೀಶ್​
Follow us
| Updated By: ಮದನ್​ ಕುಮಾರ್​

Updated on: Jun 24, 2024 | 4:55 PM

ನಟಿ ಪವಿತ್ರಾ ಗೌಡ (Pavithra Gowda) ಅವರು ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಜಾರಿಯಲ್ಲಿ ಇರುವಾಗಲೇ ಹಲವು ಬಗೆಯ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಈ ವರ್ಷ ನಿರ್ಮಾಪಕ ಸೌಂದರ್ಯಾ ಜಗದೀಶ್​ (Soundarya Jagadeesh) ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಅವರ ಜೊತೆ ದರ್ಶನ (Darshan), ಪವಿತ್ರಾ ಗೌಡ ಒಡನಾಟ ಹೊಂದಿದ್ದರು. ಅಚ್ಚರಿ ಏನೆಂದರೆ, ಸೌಂದರ್ಯಾ ಜಗದೀಶ್​ ಅವರ ಬ್ಯಾಂಕ್​ ಖಾತೆಯಿಂದ ಪವಿತ್ರಾ ಗೌಡ ಅವರ ಖಾತೆಗೆ ಬರೋಬ್ಬರಿ 2 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ.

ಸೌಂದರ್ಯಾ ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಆರ್ಥಿಕ ಸಂಕಷ್ಟ ಕೂಡ ಕಾರಣ ಎನ್ನಲಾಗಿದೆ. ಹೀಗಿರುವಾಗ ಅವರು ಪವಿತ್ರಾ ಗೌಡಗೆ 2 ಕೋಟಿ ರೂಪಾಯಿ ನೀಡಿದ್ದು ಯಾಕೆ ಎಂಬುದು ನಿಗೂಢವಾಗಿಯೇ ಉಳಿದುಕೊಂಡಿದೆ. ಇನ್ನೊಂದು ಶಾಕಿಂಗ್​ ವಿಚಾರ ಇದೆ. ಪವಿತ್ರಾ ಗೌಡಗೆ ಸೌಂದರ್ಯಾ ಜಗದೀಶ್​ ಅವರು ಇಷ್ಟು ದೊಡ್ಡ ಮೊತ್ತದ ಹಣ ನೀಡಿದ್ದರ ಬಗ್ಗೆ ಜಗದೀಶ್​ ಕುಟುಂಬದಬರಿಗೆ ಮಾಹಿತಿಯೇ ಇಲ್ಲ!

2017ರ ನವೆಂಬರ್​​ನಲ್ಲಿ ಸೌಂದರ್ಯಾ ಜಗದೀಶ್ ಅವರ ಖಾತೆಯಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಒಂದು ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿತ್ತು. ನಂತರ 2018ರ ಜನವರಿಯಲ್ಲಿ ಮತ್ತೊಂದು ಕೋಟಿ ರೂಪಾಯಿಯನ್ನು ಪವಿತ್ರಾ ಗೌಡ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಪವಿತ್ರಾ ಗೌಡ ಮನೆ ಖರೀದಿ ಮಾಡುವ ಸಮಯದಲ್ಲಿ ಈ ಹಣವನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಈ ಹಣವನ್ನು ಸೌಂದರ್ಯಾ ಜಗದೀಶ್​ ನೀಡಿದ್ದರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ಈ ಘಟನೆ ಬಗ್ಗೆ ಸೌಂದರ್ಯಾ ಜಗದೀಶ್​ ಅವರ ಪತ್ನಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ. ‘ನಮಗೆ ಟಿವಿ ನೋಡಿದ ನಂತರವೇ ಈ ಬಗ್ಗೆ ತಿಳಿಯಿತು. ನಾವು ಈಗಾಗಲೇ ನೋವಿನಲ್ಲಿ ಇದ್ದೇವೆ. ಅದರ ನಡುವೆ ಇದೇನಪ್ಪಾ ಅಂತ ಬೇಸರ ಆಯ್ತು. ಬಳಿಕ ನಾನು ವಿವರ ಪಡೆದುಕೊಂಡೆ. ಜಗದೀಶ್​ ಅವರ ಪಾರ್ಟ್ನರ್​ ಆದಂತಹ ಸುರೇಶ್​ ಮತ್ತು ಹೊಂಬಣ್ಣ ಕುರಿತ ಡೆಟ್​ನೋಟ್​ ಬಗ್ಗೆ ತನಿಖೆ ನಡೆಯುತ್ತಿದೆ. ಈಗ ಬ್ಯಾಂಕ್​ ಸ್ಟೇಟ್​ಮೆಂಟ್​ ತೆಗೆಸುತ್ತಿದ್ದೇನೆ. ಪವಿತ್ರಾಗೆ ಹಣ ನೀಡಿದ್ದರಿಂದ ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಂಡರು ಎಂಬುದೆಲ್ಲ ಸುಳ್ಳು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಪಾರ್ಟರ್​ ಕಾರಣದಿಂದ’ ಎಂದು ರೇಖಾ ಜಗದೀಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ