AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಿಂದ ಬಿಡುಗಡೆ ಆಯ್ತು 2 ಭಾಷೆಯ ವಿಶೇಷ ಹಾಡು

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ, ಭರತ್ ಕುಮಾರ್, ರಿಯಾ ಸಚ್ ದೇವ್ ಅವರು ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದ ಹಾಡುಗಳು ‘ಲಹರಿ ಮ್ಯೂಸಿಕ್’ ಮೂಲಕ ಇತ್ತೀಚೆಗೆ ಬಿಡುಗಡೆ ಆಗಿವೆ.

‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಿಂದ ಬಿಡುಗಡೆ ಆಯ್ತು 2 ಭಾಷೆಯ ವಿಶೇಷ ಹಾಡು
Mokshitha Pai, Bharath Kumar, Riya Sachdev
ಮದನ್​ ಕುಮಾರ್​
|

Updated on: Jul 17, 2026 | 7:09 PM

Share

‘ರುಕ್ಮಿಣಿ ರಾಧಾಕೃಷ್ಣ’ (Rukhmini Radhakrishna) ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ‘ಉಮೇಶ್ ಫಿಲ್ಮ್ಸ್’ ಬ್ಯಾನರ್ ಮೂಲಕ ಎನ್. ಹನುಮಂತರಾಜು, ಎನ್.ಹೆಚ್. ಉಮೇಶ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾಗೆ ಪ್ರಾಣ್ ಸುವರ್ಣ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ (Bharath Kumar) ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ನಟಿಯರಾದ ಮೋಕ್ಷಿತಾ ಪೈ (Mokshitha Pai) ಹಾಗೂ ರಿಯಾ ಸಚ್ ದೇವ್ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ. ‘ರುಕ್ಮಿಣಿ ರಾಧಾಕೃಷ್ಣ’ ಚಿತ್ರಕ್ಕೆ ಸುನಾದ್ ಗೌತಮ್ ಅವರು ಸಂಗೀತ ನೀಡಿದ್ದು, 2 ಹಾಡುಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.

ಲಹರಿ ವೇಲು ಅವರು ‘ರುಕ್ಮಿಣಿ ರಾಧಾಕೃಷ್ಣ’ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ‘ಈ ಸಿನಿಮಾದಲ್ಲಿ 5 ಸುಮಧುರ ಹಾಡುಗಳಿವೆ. ಅವುಗಳನ್ನು ಅಷ್ಟೇ ಸುಂದರವಾಗಿ ಚಿತ್ರಿಸಲಾಗಿದೆ. ನಾನು ಕೂಡ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದೇನೆ’ ಎಂದು ಲಹರಿ ವೇಲು ಅವರು ಹೇಳಿದರು. ಹಿರಿಯ ಗೀತರಚನಕಾರ ಕೆ. ಕಲ್ಯಾಣ್ ಅವರು ಸಾಹಿತ್ಯ ಬರೆದಿದ್ದಾರೆ.

ಮೆಚ್ಚುಗೆ ಸೂಚಿಸಿದ ಕೆ. ಕಲ್ಯಾಣ್:

ಸುದ್ದಿಗೋಷ್ಠಿ ವೇಳೆ ಕೆ. ಕಲ್ಯಾಣ್ ಮಾತನಾಡಿದರು. ‘ನಿರ್ಮಾಪಕರಲ್ಲಿರುವ ಸಿದ್ದತೆ, ನಿರ್ದೇಶಕರಲ್ಲಿರುವ ಬದ್ದತೆ ಈ ಹಾಡುಗಳಲ್ಲಿ ಎದ್ದು ಕಾಣುತ್ತದೆ. ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುತ್ತದೆ. ಹಾಗಾಗಿ ತಮಿಳು, ಕನ್ನಡ ಸೇರಿಸಿ ಒಂದು ಹಾಡನ್ನು ರಚಿಸಿದ್ದೇನೆ’ ಎಂದು ಅವರು ಹೇಳಿದರು. ಈ ಸಿನಿಮಾದ ಕಥೆ ತುಂಬಾ ವಿಶೇಷವಾಗಿದೆ ಎಂದು ಸಂಗೀತ ನಿರ್ದೇಶಕ ಸುನಾದ್ ಗೌತಮ್ ಅವರ ಹೇಳಿದ್ದಾರೆ.

‘ಲಹರಿ’ ಸಂಸ್ಥೆಗೆ ಆಡಿಯೋ ಹಕ್ಕುಗಳು:

ನಾಯಕ ನಟ ಭರತ್ ಕುಮಾರ್ ಮಾತನಾಡಿ, ‘ಒಳ್ಳೆಯ ಮೊತ್ತ ನೀಡಿ ಲಹರಿ ಸಂಸ್ಥೆಯು ಆಡಿಯೋ ಖರೀದಿ ಮಾಡಿದೆ. 2 ಭಾಷೆಯ ಸಾಂಗ್ ಬೇಕು ಎಂದಾಗ ಕೆ. ಕಲ್ಯಾಣ್ ಅವರು ಅದಕ್ಕೆ ತಕ್ಕಂತೆ ಸಾಲುಗಳನ್ನು ಪೋಣಿಸಿದರು. ರಾಧಾ ಪಾತ್ರವನ್ನು ಪಾರು ಖ್ಯಾತಿಯ ಮೋಕ್ಷಿತಾ ಮಾಡಿದರೆ ಚೆನ್ನಾಗಿರುತ್ತೆ ಎಂದು ನಮ್ಮಮ್ಮ ಸಲಹೆ ಕೊಟ್ಟರು. ನಿರ್ಮಪಕರಿಬ್ಬರೂ ನನ್ನ ಸಹೋದರರಿದ್ದಂತೆ’ ಎಂದು ಹೇಳಿದರು.

ಇದನ್ನೂ ಓದು: ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?

ರಾಧಾ ಪಾತ್ರ ಸಿಕ್ಕಿದ್ದಕ್ಕೆ ಮೋಕ್ಷಿತಾಗೆ ಖುಷಿ:

ತಮ್ಮ ಪಾತ್ರದ ಬಗ್ಗೆ ನಟಿ ಮೋಕ್ಷಿತಾ ಪೈ ಅವರಿಗೆ ಬಹಳ ಖುಷಿ ಇದೆ. ‘ಕಥೆ ಹೇಳಲು ನಿರ್ಮಾಪಕರ ಜತೆ ಭರತ್ ಕೂಡ ಬಂದಿದ್ದರು. ನಿಮಗೆ ಯಾವ ಪಾತ್ರ ಬೇಕು ಎಂದಾಗ ನಾನು ರಾಧಾ ಪಾತ್ರವನ್ನೇ ಸೆಲೆಕ್ಟ್ ಮಾಡಿಕೊಂಡೆ. ಆ ಪಾತ್ರದ ತೀವ್ರತೆ ನನಗೆ ಬಹಳ ಇಷ್ಟವಾಯಿತು. ಕುಂಭಕೋಣಂನಲ್ಲಿ ಈ ಹಾಡನ್ನು ಚಿತ್ರೀಕರಿಸಿದ್ದೇವೆ’ ಎಂದು ಅವರು ಹೇಳಿದರು. ರುಕ್ಮಿಣಿ ಪಾತ್ರವನ್ನು ನಟಿ, ಮಾಡೆಲ್ ರಿಯಾ ಸಚ್ ದೇವ್ ಅವರು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​