AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್​ಗೆ ಜೊತೆಯಾದ ರುಕ್ಮಿಣಿ ವಸಂತ್; ಕನಕವತಿ ಪೋಸ್ಟರ್ ರಿಲೀಸ್

Rukmini Vasanth In Kantara: ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿರುವ 'ಕಾಂತಾರ: ಚಾಪ್ಟರ್ 1' ಚಿತ್ರದ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಅವರ ಪಾತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಸುದ್ದಿಯಿಂದ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ರುಕ್ಮಿಣಿ ವಸಂತ್ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್​ಗೆ ಜೊತೆಯಾದ ರುಕ್ಮಿಣಿ ವಸಂತ್; ಕನಕವತಿ ಪೋಸ್ಟರ್ ರಿಲೀಸ್
ಕನಕವತಿ
ರಾಜೇಶ್ ದುಗ್ಗುಮನೆ
|

Updated on:Aug 08, 2025 | 11:18 AM

Share

‘ಕಾಂತಾರ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ ಆಗಿದ್ದರು. ಈ ಚಿತ್ರದ ಮೂಲಕ ಅವರಿಗೆ ಬೇಡಿಕೆ ಹೆಚ್ಚಿತು. ಈ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ​ಗೆ ನಾಯಕಿ ಯಾರು ಎಂಬ ವಿಚಾರ ಈವರೆಗೆ ರಿವೀಲ್ ಆಗಿರಲಿಲ್ಲ. ಈಗ ಈ ವಿಷಯದ ಬಗ್ಗೆ ತಂಡದಿಂದ ಅಧಿಕೃತ ಅಪ್​ಡೇಟ್ ಸಿಕ್ಕಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಕನಕವತಿ ಪಾತ್ರದ ಪೋಸ್ಟರ್ ರಿಲೀಸ್ ಆಗಿದೆ. ಈ ಪಾತ್ರದಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ.

‘ಕಾಂತಾರ: ಚಾಪ್ಟರ್ 1’ ರಿಲೀಸ್​ಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿವೆ. ಹೀಗಾಗಿ, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಆರಂಭಿಸಲು ತಂಡ ರೆಡಿ ಆಗಿದೆ. ಇದರ ಭಾಗವಾಗಿ ಸಿನಿಮಾದ ನಾಯಕಿ ಪಾತ್ರದ ಪರಿಚಯವನ್ನು ನೀಡಲಾಗಿದೆ. ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿ ಎಂಬ ವಿಚಾರ ತಿಳಿದು ಅನೇಕರಿಗೆ ಖುಷಿ ಆಗಿದೆ.

ಇದನ್ನೂ ಓದಿ
Image
ಮಾಲಿವುಡ್​ನ ಶ್ರೀಮಂತ ನಟ ಫಹಾದ್ ಫಾಸಿಲ್ ಆಸ್ತಿ ಎಷ್ಟು?
Image
‘ಸು ಫ್ರಮ್ ಸೋ’ ಚಿತ್ರಕ್ಕೆ ಎರಡು ವಾರ; ವಿಶ್ವ ಬಾಕ್ಸ್ ಆಫೀಸ್​ ಲೆಕ್ಕ
Image
‘ಹಣ ಕೊಟ್ಟು ಟ್ರೋಲ್ ಮಾಡಿಸಿದರು, ಬೆಳೆಯದಂತೆ ತಡೆದರು’; ರಶ್ಮಿಕಾ ಮಂದಣ್ಣ
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ರುಕ್ಮಿಣಿ ವಸಂತ್ ಅವರು ಚಿತ್ರದಲ್ಲಿ ಯುವರಾಣಿ ರೀತಿ ಕಾಣಿಸಿದ್ದಾರೆ. ಅವರ ಪಾತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಪೋಸ್ಟರ್ ಹಿಂಭಾಗ ನೋಡಿದರೆ ಅದು ರಾಜರ ಆಸ್ಥಾನದ ರೀತಿಯೇ ಕಾಣಿಸುತ್ತದೆ. ಅಲ್ಲದೆ, ಇದು ಕದಂಬರ ಕಾಲದ ಕಥೆ ಆಗಿರುವುದರಿಂದ ರುಕ್ಮಿಣಿ ರಾಣಿ ಅಥವಾ ಯುವ ರಾಣಿಯ ಪಾತ್ರ ಮಾಡಿದ್ದರೂ ಅಚ್ಚರಿ ಏನಿಲ್ಲ.

ಕನಕವತಿ ಪೋಸ್ಟರ್

‘ಕಾಂತಾರ: ಚಾಪ್ಟರ್ 1’ ಚಿತ್ರದ ನಾಯಕಿ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಂತೆ ಆಗಿದೆ. ರುಕ್ಮಿಣಿ ವಸಂತ್ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಹೀಗಾಗಿ, ರುಕ್ಮಿಣಿ ಅವರು ಈ ಚಿತ್ರದ ಭಾಗವಾಗುತ್ತಿದ್ದಾರೆ ಎಂದಾಗ ಸಹಜವಾಗಿಯೇ ನಿರೀಕ್ಷೆ ಕೂಡ ಹೆಚ್ಚಿದೆ.

ರುಕ್ಮಿಣಿ ವಸಂತ್ ಅವರು ಈಗಾಗಲೇ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಅವರಿಗೆ ಸಾಕಷ್ಟು ಖ್ಯಾತಿ ನೀಡಿತು. ಆ ಬಳಿಕ ಗಣೇಶ್, ಶ್ರೀಮುರಳಿ, ಶಿವರಾಜ್​ಕುಮಾರ್ ಜೊತೆ ನಟಿಸಿದರು. ಈವರೆಗೆ ಅವರು ‘ಕಾಂತಾರ’ದ ಭಾಗವಾಗಿದ್ದಾರೆ ಎಂಬ ವಿಚಾರ  ಎಲ್ಲಿಯೂ ರಿವೀಲ್ ಆಗಿರಲಿಲ್ಲ.

ಇದನ್ನೂ ಓದಿ: ‘ಕಾಂತಾರ’ ಚಿತ್ರಕ್ಕೆ ಬರಲಿದೆ ಮತ್ತೊಂದು ಪಾರ್ಟ್? ಟಾಲಿವುಡ್​ ಖ್ಯಾತ ಹೀರೋಗೆ ಮಣೆ?

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಷಬ್ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಅಕ್ಟೋಬರ್ 2ರಂದು ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:38 am, Fri, 8 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು