AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ಪರ ಭಾಷೆಯಿಂದ ನಟಿ ರುಕ್ಮಿಣಿ ವಸಂತ್​ಗೆ ಬರುತ್ತಿದೆ ಭರ್ಜರಿ ಆಫರ್​

ವಿಜಯ್ ಸೇತುಪತಿ ನಟನೆಯ 51ನೇ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿ ಆಗಿದ್ದಾರೆ. ಇದು ಅವರ ನಟನೆಯ ಮೊದಲ ಚಿತ್ರವಾಗಿದೆ. ಈ ಚಿತ್ರದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಇದಲ್ಲದೆ, ಶಿವಕಾರ್ತಿಕೇಯ ನಟನೆಯ 23ನೇ ಚಿತ್ರಕ್ಕೂ ರುಕ್ಮಿಣಿ ನಾಯಕಿ ಆಗಿದ್ದಾರೆ. ಅವರನ್ನು ಹುಡುಕಿ ಹಲವು ಸಿನಿಮಾ ಆಫರ್​ಗಳು ಬರುತ್ತಿವೆ.

Rukmini Vasanth: ಪರ ಭಾಷೆಯಿಂದ ನಟಿ ರುಕ್ಮಿಣಿ ವಸಂತ್​ಗೆ ಬರುತ್ತಿದೆ ಭರ್ಜರಿ ಆಫರ್​
ರುಕ್ಮಿಣಿ
ರಾಜೇಶ್ ದುಗ್ಗುಮನೆ
|

Updated on: Feb 16, 2024 | 11:06 AM

Share

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ‘ಸೈಡ್ ಎ’ ಹಾಗೂ ‘ಸೈಡ್ ಬಿ’ ಚಿತ್ರದಿಂದ ನಟಿ ರುಕ್ಮಿಣಿ ವಸಂತ್ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಈ ಸಿನಿಮಾದಲ್ಲಿ ರುಕ್ಮಿಣಿ (Rukmini Vasanth) ಅವರ ನಟನೆ ಗಮನ ಸೆಳೆದಿದೆ. ಅವರು ಭಾವನಾತ್ಮಕವಾಗಿ ಎಲ್ಲರನ್ನೂ ಸೆಳೆದುಕೊಂಡಿದ್ದಾರೆ. ಈ ಚಿತ್ರ ತೆಲುಗಿನಲ್ಲೂ ಡಬ್ ಆಗಿ ರಿಲೀಸ್ ಆಗಿತ್ತು. ಹೀಗಾಗಿ ಪರ ರಾಜ್ಯದಲ್ಲೂ ಗಮನ ಸೆಳೆದರು ರುಕ್ಮಿಣಿ. ಈ ಕಾರಣಕ್ಕೆ ಪರ ಭಾಷೆಗಳಿಂದ ಅವರನ್ನು ಹಲವು ಆಫರ್​ಗಳು ಹುಡುಕಿ ಬರುತ್ತಿವೆ.

ರುಕ್ಮಿಣಿ ಅವರ ಬೇಡಿಕೆ ಭರ್ಜರಿಯಾಗಿ ಏರಿಕೆ ಆಗಿದೆ. ಅವರು ಶ್ರೀಮುರಳಿ ನಟನೆಯ ‘ಭಗೀರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಚಿತ್ರಕ್ಕೂ ರುಕ್ಮಿಣಿ ನಾಯಕಿ ಆಗಿದ್ದಾರೆ. ಈ ಎರಡೂ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇದರ ಜೊತೆಗೆ ಅವರಿಗೆ ಎರಡು ತಮಿಳು ಸಿನಿಮಾ ಕೂಡ ಸಿಕ್ಕಿದೆ.

ವಿಜಯ್ ಸೇತುಪತಿ ನಟನೆಯ 51ನೇ ಚಿತ್ರಕ್ಕೆ ರುಕ್ಮಿಣಿ ನಾಯಕಿ. ಇದು ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಇದಲ್ಲದೆ, ಶಿವಕಾರ್ತಿಕೇಯ ನಟನೆಯ 23ನೇ ಸಿನಿಮಾಗೂ ರುಕ್ಮಿಣಿ ನಾಯಕಿ ಆಗಿದ್ದಾರೆ. ಈ ಚಿತ್ರಕ್ಕೆ ಎಆರ್​ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಸಿನಿಮಾ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಎಲ್ಲವನ್ನೂ ಅಳೆದು ತೂಗಿ ಅವರು ಒಪ್ಪಿಕೊಳ್ಳುತ್ತಿದ್ದಾರೆ.

ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿ ಆಗಲಿದ್ದಾರೆ ಎಂದು ಸುದ್ದಿ ಹರಡಿತ್ತು. ಈ ವಿಚಾರಕ್ಕೆ ಅವರ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿತ್ತು. ‘ನಾನು ವಿಜಯ್ ಜೊತೆ ಸಿನಿಮಾ ಮಾಡುತ್ತಿಲ್ಲ. ಅದು ಕೇವಲ ವದಂತಿ’ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್-ಬಿನಲ್ಲಿ ಈ ದೃಶ್ಯಗಳ ಗಮನಿಸಿದಿರಾ?

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಹೇಮಂತ್ ರಾವ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಎರಡು ಭಾಗಗಳಲ್ಲಿ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರ ಸದ್ಯ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?