Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ಖ್ಯಾತ ತೆಲುಗು ನಟನ ಸಿನಿಮಾದಿಂದ ಹೊರಬಂದ ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ ಅವರ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಯಶಸ್ಸಿನಿಂದಾಗಿ ಅವರಿಗೆ ಕನ್ನಡ ಮತ್ತು ಟಾಲಿವುಡ್‌ನಿಂದ ಅನೇಕ ಆಫರ್‌ಗಳು ಬರುತ್ತಿವೆ. ಆದರೆ, ಸ್ಟಾರ್ ಹೀರೋ ಜೊತೆಗಿನ ಚಿತ್ರಕ್ಕೆ ಅವರು ನಿರಾಕರಿಸಿದ್ದಾರೆ. 'ರೌಡಿ ಜನಾರ್ಧನ್' ಚಿತ್ರದಲ್ಲಿ ನಟಿಸಲು ಅವರಿಗೆ ಆಸಕ್ತಿ ಇದ್ದರೂ, ಡೇಟ್ಸ್ ಸಮಸ್ಯೆಯಿಂದ ಹಿಂದೆ ಸರಿದಿದ್ದಾರೆ.

Rukmini Vasanth: ಖ್ಯಾತ ತೆಲುಗು ನಟನ ಸಿನಿಮಾದಿಂದ ಹೊರಬಂದ ರುಕ್ಮಿಣಿ ವಸಂತ್
ರುಕ್ಮಿಣಿ ವಸಂತ್
Follow us
ರಾಜೇಶ್ ದುಗ್ಗುಮನೆ
|

Updated on:Mar 07, 2025 | 7:06 AM

ಕನ್ನಡದ ಖ್ಯಾತ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಚಿತ್ರರಂಗದಲ್ಲಿ ಅವರು ಬ್ಯಾಕ್ ಟು ಬ್ಯಾಕ್ ಆಫರ್ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ. ರಕ್ಷಿತ್ ಶೆಟ್ಟಿ ನಟನೆಯ ಈ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರುಕ್ಮಿಣಿ ವಸಂತ್ ಬೇರೆ ಬೇರೆ ಆಫರ್​ಗಳನ್ನು ಪಡೆದುಕೊಂಡರು. ಈಗ ಅವರಿಗೆ ಟಾಲಿವುಡ್​ನಿಂದಲೂ ಆಫರ್ ಬರುತ್ತಿದೆ. ಈ ಪೈಕಿ ಸ್ಟಾರ್ ಹೀರೋನ ಚಿತ್ರದಲ್ಲಿ ನಟಿಸೋಕೆ ರುಕ್ಮಿಣಿ ವಸಂತ್ ನೋ ಎಂದಿದ್ದಾರೆ ಎಂಬ ವರದಿ ಹರಿದಾಡಿದೆ.

ವಿಜಯ್ ದೇವರಕೊಂಡ ಅವರು ‘ಕಿಂಗ್​ಡಮ್’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಗೌತಮ್ ತಿನ್ನನುರಿ ಅವರು ನಿರ್ದೇಶನ ಮಾಡಿದ್ದಾರೆ. ಇದರ ಜೊತೆಗೆ ಅವರು ‘ರೌಡಿ ಜನಾರ್ಧನ್’ ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಆಗಬೇಕಿದೆ. ರವಿ ಕಿರಣ್ ಕೋಲಾ ಅವರು ಈ ಚಿತ್ರ ನಿರ್ದೇಶನ ಮಾಡಬೇಕಿದೆ. ದಿಲ್ ರಾಜು ಅವರು ಈ ಚಿತ್ರಕ್ಕೆ ಹಣ ಹೂಡುತ್ತಾ ಇದ್ದಾರೆ. ರುಕ್ಮಿಣಿ ವಸಂತ್ ಅವರು ಈ ಚಿತ್ರದಲ್ಲಿ ನಟಿಸಬೇಕಿತ್ತು.

ರುಕ್ಮಿಣಿ ವಸಂತ್ ಅವರಿಗೆ ಈ ಸಿನಿಮಾದಲ್ಲಿ ನಟಿಸೋ ಆಸಕ್ತಿ ಇತ್ತು. ಆದರೆ, ಡೇಟ್ ಹೊಂದಿಸಲು ಸಾಧ್ಯವಾಗಿಲ್ಲ ಎಂದು ವರದಿ ಆಗಿದೆ. ರುಕ್ಮಿಣಿ ವಸಂತ್ ಅವರು ನಟ ಜೂನಿಯರ್ ಎನ್​ಟಿಆರ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಸಿನಿಮಾ ‘NTR31’ನಲ್ಲಿ ನಟಿಸಬೇಕಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ರುಕ್ಮಿಣಿ ‘ರೌಡಿ ಜನಾರ್ಧನ್’ ಸಿನಿಮಾದಿಂದ ಹೊರ ಹೋಗಿದ್ದಾರಂತೆ.

ಇದನ್ನೂ ಓದಿ
Image
ಅಂಬರೀಷ್ ಆಸೆ ಈಡೇರಿಸಿದ ರಾಕಿ ಭಾಯ್; ಅಭಿಷೇಕ್ ಮಗನಿಗೆ ವಿಶೇಷ ಉಡುಗೊರೆ
Image
‘ಪಾರ್ಟಿ ಅನ್ನೋದು ವೈಯಕ್ತಿಕ’; ಕಿಚ್ಚ ಸುದೀಪ್ ಅವರ ಆಲೋಚೆನೆಯೇ ಬೇರೆ
Image
ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವು ನೀಡಿದ ಪ್ರೇಮಿ: ಆ ವ್ಯಕ್ತಿ ಮೇಲೆ ಅನುಮಾನ
Image
ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

ಇದನ್ನೂ ನೋಡಿ: ರುಕ್ಮಿಣಿ ವಸಂತ್ ವಿಡಿಯೋನ ಹೇಗೆಲ್ಲ ವೈರಲ್ ಮಾಡ್ತಿದ್ದಾರೆ ನೋಡಿ ಫ್ಯಾನ್ಸ್

ರುಕ್ಮಿಣಿ ವಸಂತ್ ಅವರು ‘ಬೀರ್​ಬಲ್’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಇದಾದ ಬಳಿಕ ಅವರು ಒಂದು ಹಿಂದಿ ಸಿನಿಮಾ ಮಾಡಿದರು. 2023ರಲ್ಲಿ ರಿಲೀಸ್ ಆದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಪ್ರಿಯಾ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಸದ್ಯ ಅವರ ಬಳಿ ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾ ಇದೆ. ಕನ್ನಡದಲ್ಲಿ ಅವರಿಗೆ ಬೇಡಿಕೆ ಇದೆ. ಕನ್ನಡದಲ್ಲಿ ಸಿನಿಮಾಗಳನ್ನು ಒಪ್ಪಿ ಅವರು ನಟಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Fri, 7 March 25

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ