ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನೆಗೆಟಿವ್ ಪಾತ್ರ ನಿರ್ವಹಿಸಿದ್ದರೂ, ಅಭಿಮಾನಿಗಳು ಅವರನ್ನು ಒಪ್ಪಿಕೊಂಡಿದ್ದಾರೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಪಾತ್ರ ಮಾಡುವುದು ಅಪಾಯಕಾರಿ ಎಂದಿದ್ದರೂ, ಜನರಿಂದ ದ್ವೇಷ ಬಾರದಿರುವುದು ಅವರಿಗೆ ಸಂತಸ ತಂದಿದೆ. ಆ ಬಗ್ಗೆ ಇಲ್ಲಿದೆ ವಿವರ .

ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್
ರುಕ್ಮಿಣಿ
Edited By:

Updated on: Dec 19, 2025 | 7:34 AM

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರನ್ನು ಜನರು ಒಪ್ಪಿಕೊಂಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದರು. ಈ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾ ಬಳಿಕವೂ ಅವರನ್ನು ಯಾರೂ ಹೇಟ್ ಮಾಡಿಲ್ಲ. ಇದಕ್ಕೆ ಅವರು ಸಂತಸ ಹೊರಹಾಕಿದರು. ಬಾಲಿವುಡ್​​ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ನಟಿಯರು ಕ್ಯೂಟ್ ಕ್ಯೂಟ್ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಆದರೆ, ಹಾಗೆ ಕಾಣಿಸಿಕೊಂಡಿಲ್ಲ ಎಂದಾಗ ಕೆಲವೊಮ್ಮೆ ಫ್ಯಾನ್ಸ್​ಗೆ ಬೇಸರ ಆಗೋದನ್ನು ನೀವ ಕಾಣಬಹುದು. ಅದರಲ್ಲೂ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಂಡರೆ ಫ್ಯಾನ್ಸ್ ಸಹಿಸುವುದೇ ಇಲ್ಲ. ಆದರೆ, ರುಕ್ಮಿಣಿ ವಿಷಯದಲ್ಲಿ ಆ ರೀತಿ ಆಗಿಲ್ಲ. ಈ ವಿಷಯದಲ್ಲಿ ಅವರಿಗೆ ಖುಷಿ ಇದೆ. ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ರಿಪೋರ್ಟರ್ ರೌಂಡ್​​ಟೇಬಲ್​​ನಲ್ಲಿ ಕನ್ನಡತಿ ರುಕ್ಮಿಣಿ ವಸಂತ್

‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದೆ. ಈ ರೀತಿಯ ಪಾತ್ರ ಪ್ರಯೋಗವನ್ನು ವೃತ್ತಿಜೀವನದ ಆರಂಭದಲ್ಲಿ ಮಾಡುವುದು ಅಪಾಯಕಾರಿ. ಜನರು ನಾನು ನೆಗೆಟಿವ್ ಪಾತ್ರ ಮಾಡಿದರೂ ನನ್ನನ್ನು ಪ್ರೀತಿಸಿದ್ದಾರೆ. ಅವರು ದ್ವೇಷಿಸಲಿಲ್ಲ. ನನ್ನ ಪಾತ್ರ ವಿಲನ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ’ ಎಂದು ರುಕ್ಮಿಣಿ ಖುಷಿಯಿಂದ ಹೇಳಿಕೊಂಡಿದ್ದಾರೆ.

ರುಕ್ಮಿಣಿ ವಸಂತ್ ಅವರು ತಮ್ಮ ವೃತ್ತಿ ಜೀವನದ ಉದ್ದಕ್ಕೂ ನಿರ್ವಹಿಸಿ ಪಾತ್ರಗಳಲ್ಲಿ ಒಂದು ಪ್ಯಾಟರ್ನ್ ಇದೆ. ಅವರು ಯಾವುದೇ ಸಿನಿಮಾ ಮಾಡಿದರೂ ಕಥಾ ನಾಯಕ ಅವರಿಗೆ ಸಿಗೋದಿಲ್ಲ. ಈ ಹಿಂದಿನ ಹಲವು ಸಿನಿಮಾಗಳಲ್ಲಿ ಅವರು ನಡೆದಿವೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ಹಾಗೆಯೇ ಆಗಿದೆ. ಇದರಲ್ಲಿ ಕಥಾ ನಾಯಕನೇ ರುಕ್ಮಿಣಿಯನ್ನು ಸಾಯಿಸುತ್ತಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us