AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್, ರಿಷಬ್ ಶೆಟ್ಟಿ ಬಗ್ಗೆ ನಟಿ ರುಕ್ಮಿಣಿ ವಸಂತ್ ಹೇಳಿದ್ದೇನು?

Rukmini Vasanth: ನಟಿ ರುಕ್ಮಿಣಿ ವಸಂತ್ ಕನ್ನಡದ ನಟಿ ಈಗ ಪರಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ರುಕ್ಮಿಣಿ ಅವರು ಕನ್ನಡದ ಎರಡೂ ಭಾರಿ ಬಜೆಟ್​​ನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಅದುವೇ ‘ಟಾಕ್ಸಿಕ್’ ಮತ್ತು ‘ಕಾಂತಾರ ಚಾಪ್ಟರ್ 1’. ಇದೀಗ ರುಕ್ಮಿಣಿ ವಸಂತ್ ಯಶ್ ಹಾಗೂ ರಿಷಬ್ ಶೆಟ್ಟಿ ಜೊತೆಗೆ ಕೆಲಸ ಮಾಡಿದ ಅನುಭವ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ. ಇಲ್ಲಿದೆ ನೋಡಿ ವಿವರ....

ಯಶ್, ರಿಷಬ್ ಶೆಟ್ಟಿ ಬಗ್ಗೆ ನಟಿ ರುಕ್ಮಿಣಿ ವಸಂತ್ ಹೇಳಿದ್ದೇನು?
Toxic Kantara
ಮಂಜುನಾಥ ಸಿ.
|

Updated on:Sep 10, 2025 | 3:42 PM

Share

ರುಕ್ಮಿಣಿ ವಸಂತ್ (Rukmini Vasanth), ಪ್ಯಾನ್ ಇಂಡಿಯಾ ಸ್ಟಾರ್ ನಟಿ ಆಗುವ ಎಲ್ಲ ಪ್ರತಿಭೆ, ಅಂದ ಇರುವ ಕನ್ನಡದ ನಟಿ. ಈಗಾಗಲೇ ರುಕ್ಮಿಣಿ ಅವರು ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಅದರಲ್ಲೂ ರುಕ್ಮಿಣಿ ವಸಂತ್ ಪ್ರಸ್ತುತ ಭಾರತದ ಮೂರು ದೊಡ್ಡ ಬಜೆಟ್​​ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’, ರಿಷಬ್ ಶೆಟ್ಟಿ ನಟನೆಯ ‘ಕಾಂತಾರ ಚಾಪ್ಟರ್ 1’ ಮತ್ತು ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’. ಇತ್ತೀಚೆಗೆ ಮಾಧ್ಯಮದ ಕಾನ್​​ಕ್ಲೇವ್ ಒಂದರಲ್ಲಿ ಭಾಗಿ ಆಗಿದ್ದ ರುಕ್ಮಿಣಿ ವಸಂತ್, ಯಶ್ ಮತ್ತು ರಿಷಬ್ ಶೆಟ್ಟಿ ಅವರುಗಳ ಜೊತೆಗೆ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡಿದ್ದಾರೆ.

ಯಶ್ ಜೊತೆಗೆ ನಟಿಸುತ್ತಿರುವ ಅನುಭವದ ಬಗ್ಗೆ ಮಾತನಾಡಿರುವ ನಟಿ ರುಕ್ಮಿಣಿ ವಸಂತ್, ‘ಯಶ್ ಜೊತೆಗೆ ನಟಿಸುವ ಅವಕಾಶ ಸಿಕ್ಕಿದ್ದು ಬಹಳ ಖುಷಿಯ ವಿಚಾರ. ನಾನು ಅವರಿಂದ ಸೆಟ್​​ನಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯುತ್ತಿದ್ದೇನೆ. ಯಶ್ ಹೇಗೆ ಸಿನಿಮಾ ಮಾಡುತ್ತಾರೆ, ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ ಎಂಬುದನ್ನು ನಾನು ಕಲಿಯುತ್ತಿದ್ದೇನೆ’ ಎಂದಿದ್ದಾರೆ ರುಕ್ಮಿಣಿ ವಸಂತ್.

‘ಟಾಕ್ಸಿಕ್’ ಸಿನಿಮಾ ಸೆಟ್​​ನಲ್ಲಿ ನಾನು ಸ್ಪಾಂಜ್ ರೀತಿ ಇದ್ದೇನೆ. ದೊರೆತ ಎಲ್ಲವನ್ನೂ ನಾನು ಶೇಖರಿಸಿಕೊಳ್ಳುತ್ತಿದ್ದೇನೆ, ನನ್ನ ಜ್ಞಾನ ಹೆಚ್ಚು ಮಾಡಿಕೊಳ್ಳುತ್ತಿದ್ದೇನೆ. ‘ಟಾಕ್ಸಿಕ್’ ಕೇವಲ ಸಾಧಾರಣ ಸಿನಿಮಾ ಅಲ್ಲ, ಅದನ್ನೂ ಮೀರಿದ ಒಂದು ಚಳವಳಿ ಅಥವಾ ಕ್ರಾಂತಿಯ ರೀತಿ ಇದೆ. ಅದೊಂದು ಬದಲಾವಣೆ ತರಬಹುದಾದ ಸಿನಿಮಾ ಆಗಿದೆ’ ಎಂದಿದ್ದಾರೆ ರುಕ್ಮಿಣಿ ವಸಂತ್.

ಇದನ್ನೂ ಓದಿ:ರುಕ್ಮಿಣಿ ವಸಂತ್ ಕೈಯಲ್ಲಿದೆ ಮೂರು ದೊಡ್ಡ ಸಿನಿಮಾಗಳು

ಇನ್ನು ‘ಕಾಂತಾರ ಚಾಪ್ಟರ್ 1’ ಸಿನಿಮಾನಲ್ಲಿ ನಟಿಸಿರುವ ಬಗ್ಗೆ ಮಾತನಾಡಿರುವ ರುಕ್ಮಿಣಿ ವಸಂತ್, ‘ರಿಷಬ್ ಶೆಟ್ಟಿ ಅವರದ್ದು ಬಹಳ ವಿಸ್ತಾರವಾದ ಮತ್ತು ಭಾರಿ ಐಶಾರಾಮಿ ಯೋಜನೆ. ಈಗಾಗಲೇ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಮೇಕಿಂಗ್ ವಿಡಿಯೋನಲ್ಲಿ ಅದರ ಝಲಕ್ ನೋಡಿರುತ್ತೀರಿ. ಕಾಂತಾರ ಭಾರಿ ಬಜೆಟ್​​ನ ಸಿನಿಮಾ ಆದರೆ ಅಷ್ಟೇ ನೆಲದ ಜೊತೆಗೆ ನಂಟು ಹೊಂದಿರುವ ಕತೆಯನ್ನು ಒಳಗೊಂಡ ಸಿನಿಮಾ. ಇದೊಂದು ಪಕ್ಕಾ ನೆಲಮೂಲದ ಕತೆಯ ಸಿನಿಮಾ, ಸಿನಿಮಾದ ಸಾಂಸ್ಕೃತಿಕ ಹಿನ್ನೆಲೆ ಅದ್ಭುತವಾಗಿದೆ’ ಎಂದಿದ್ದಾರೆ.

ರುಕ್ಮಿಣಿ ವಸಂತ್, ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರಿಗೆ ಭಾರಿ ಜನಪ್ರಿಯತೆ ಧಕ್ಕಿದೆ. ಈಗಾಗಲೇ ಕೆಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಇದೀಗ ‘ಕಾಂತಾರ 1’, ‘ಟಾಕ್ಸಿಕ್’ ಮತ್ತು ಜೂ ಎನ್​​ಟಿಆರ್ ನಟಿಸಿ, ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Wed, 10 September 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ