AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ?

Rukmini Vasanth: ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ, ಬೇರೆ ಏನೋ ಆಗುವ ಆಸೆ ಇತ್ತು.

ನಟಿ ರುಕ್ಮಿಣಿ ವಸಂತ್ ಆಕಾಂಕ್ಷೆ ಬೇರೆಯೇ ಇತ್ತು: ಚಿತ್ರರಂಗಕ್ಕೆ ಬಂದಿದ್ದು ಹೇಗೆ?
Rukmini Vasanth
ಮಂಜುನಾಥ ಸಿ.
|

Updated on: Dec 25, 2025 | 4:24 PM

Share

ರುಕ್ಮಿಣಿ ವಸಂತ್ (Rukmini Vasanth) ಪ್ರಸ್ತುತ ದಕ್ಷಿಣ ಭಾರತದ ಸ್ಟಾರ್ ನಟಿ. ತಮ್ಮ ನಟನೆ ಮತ್ತು ಸೌಂದರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ರುಕ್ಮಿಣಿ ವಸಂತ್. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ರುಕ್ಮಿಣಿ ಅವರ ನಟನೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪರ ಭಾಷೆಯ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾಗಳಲ್ಲಿ ರುಕ್ಮಿಣಿ ನಟಿಸುತ್ತಿದ್ದಾರೆ. ಇವುಗಳ ನಡುವೆ ಬಾಲಿವುಡ್​​ಗೂ ಸಹ ರುಕ್ಮಿಣಿ ವಸಂತ್ ಕಾಲಿಡುತ್ತಿದ್ದಾರೆ. ಆದರೆ ರುಕ್ಮಿಣಿ ಅವರಿಗೆ ನಟಿ ಆಗುವ ಆಸೆಯೇ ಇರಲಿಲ್ಲ, ಬೇರೆ ಏನೋ ಆಗುವ ಆಸೆ ಇತ್ತು.

ಬಹುತೇಕರಿಗೆ ಗೊತ್ತಿರುವಂತೆ ಭಾರತೀಯ ಸೇನೆಯ ಹೆಮ್ಮೆಯ ಕರ್ನಲ್ ವಸಂತ್ ವೇಣುಗೋಪಾಲ್ ಅವರ ಪುತ್ರಿ ರುಕ್ಮಿಣಿ ವಸಂತ್. ಎಳವೆಯಿಂದ ವಿದ್ಯಾಭ್ಯಾಸದಲ್ಲಿಯೂ ಮುಂದಿದ್ದರಂತೆ ರುಕ್ಮಿಣಿ. ಬಹಳ ವರ್ಷ ಅವರಿಗೆ ತಾವು ಪಶು ವೈದ್ಯರಾಗಬೇಕು ಎಂಬ ಆಸೆ ಇತ್ತಂತೆ. ಪ್ರಾಣಿ ಪ್ರೇಮಿ ಆಗಿದ್ದ ರುಕ್ಮಿಣಿ ಅವರಿಗೆ ತಾವು ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ವೈದ್ಯೆ ಆಗಬೇಕು ಎಂಬ ಆಸೆಯಿತ್ತಂತೆ. ಆದರೆ ಬರ ಬರುತ್ತಾ, ಆ ಕೆಲಸ ಎಷ್ಟು ಕಷ್ಟ ಎಂದು ಅರಿವಾಗಿ ಆ ಆಸೆ ಕೈಬಿಟ್ಟರಂತೆ ನಟಿ.

ಇದನ್ನೂ ಓದಿ:ರುಕ್ಮಿಣಿ ವಸಂತ್ ಮೇಕಪ್ ಹೀಗೆ ನಡೆಯುತ್ತೆ: ವಿಡಿಯೋ ನೋಡಿ

ಅದರ ಬಳಿಕ ಫ್ಯಾಷನ್ ಡಿಸೈನರ್ ಆಗುವ ಆಸೆ ಮೂಡಿತಂತೆ. ಆದರೆ ಆ ಆಸೆಯೂ ಕಮರಿ ಕೊನೆಗೆ ನಟನೆಯತ್ತ ಮನಸ್ಸು ಹೊರಳಿದೆ. ಬಳಿಕ ಅವರು ಲಂಡನ್​​ನ ಪ್ರತಿಷ್ಠಿತ ಡ್ರಾಮಾ ಶಾಲೆಯಾದ ರಾಡಾನಲ್ಲಿ ಅಡ್ಮೀಷನ್ ಪಡೆದರು. ಅಲ್ಲಿ ಹಲವು ವರ್ಷ ಕಲಿತು ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಮೊದಲಿಗೆ ‘ಬೀರ್​​ಬಲ್’ ಸಿನಿಮಾನಲ್ಲಿ ನಟಿಸಿದರು. ಅದರ ಬಳಿಕ ಮತ್ತೊಂದು ಸಿನಿಮಾ ಒಪ್ಪಿಕೊಂಡರಾದರೂ ಅದು ಕೋವಿಡ್ ಕಾರಣಕ್ಕೆ ನಿಂತು ಹೋಯ್ತು. ಬಳಿಕ ಇನ್ನು ಚಿತ್ರರಂಗದಲ್ಲಿ ಉಳಿವಿಲ್ಲ ಎಂದುಕೊಂಡಾಗ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾನಲ್ಲಿ ಅವಕಾಶ ದೊರೆಯಿತು. ಬಳಿಕ ನಡೆದಿದ್ದೆಲ್ಲ ಇತಿಹಾಸ.

ಅಂದಹಾಗೆ ರುಕ್ಮಿಣಿ ಅವರು ನಟಿಯಾಗುವಲ್ಲಿ ಅವರ ತಾಯಿಯ ಪಾತ್ರ ಮಹತ್ವದ್ದಂತೆ. ರುಕ್ಮಿಣಿ ಅವರ ತಾಯಿ ಸ್ವತಃ ನೃತ್ಯ ಕಲಾವಿದೆ. ಅದ್ಭುತವಾಗಿ ನೃತ್ಯ ಮಾಡುವ ಜೊತೆಗೆ ನಾಟಕ ರಚನೆ, ನಿರ್ದೇಶನ ಸಹ ಮಾಡುತ್ತಿದ್ದರಂತೆ. ಎಳವೆಯಲ್ಲಿ ಕೆಲವು ನಾಟಕಗಳಲ್ಲಿಯೂ ರುಕ್ಮಿಣಿ ನಟಿಸಿದ್ದರು. ಬಳಿಕ ತಾಯಿಯ ಮಾರ್ಗದರ್ಶನದಲ್ಲಿ ನೃತ್ಯವನ್ನೂ ಕಲಿತರು. ರಾಡಾನಲ್ಲಿ (ರಾಯಲ್ ಅಕಾಡೆಮಿ ಆಫ್ ಡ್ರಾಮಾ ಆರ್ಟ್ಸ್) ಅಡ್ಮೀಷನ್ ಪಡೆಯುವಲ್ಲಿ ತಾಯಿಯ ಬೆಂಬಲವೂ ಸಾಕಷ್ಟಿದೆ ಎಂದು ರುಕ್ಮಿಣಿ ಇತ್ತೀಚೆಗಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಅಂದಹಾಗೆ ರುಕ್ಮಿಣಿ ವಸಂತ್ ಅವರು ಬೆಂಗಳೂರಿನಲ್ಲಿ ಬ್ಯಾಲೆ ಡ್ಯಾನ್ಸ್ ಸಹ ಕಲಿತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?