AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗಕ್ಕೆ ಬಂದ ಶಿಮ್ಲಾ ಸುಂದರಿ ರೂಪಾಲಿ ಸೂದ್; ‘ವೆಂಕ್ಯಾ’ ಚಿತ್ರಕ್ಕೆ ನಾಯಕಿ

ಸಾಗರ್ ಪುರಾಣಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವೆಂಕ್ಯಾ’ ಚಿತ್ರತಂಡಕ್ಕೆ ನಟಿ ರೂಪಾಲಿ ಸೂದ್​ ಅವರು ಸೇರ್ಪಡೆ ಆಗಿದ್ದಾರೆ. ರೂಪಾಲಿ ಅವರು ಶಿಮ್ಲಾ ಮೂಲದವರು ಎಂಬುದು ವಿಶೇಷ. ‘ವೆಂಕ್ಯಾ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕನ್ನಡ ಚಿತ್ರರಂಗಕ್ಕೆ ಬಂದ ಶಿಮ್ಲಾ ಸುಂದರಿ ರೂಪಾಲಿ ಸೂದ್; ‘ವೆಂಕ್ಯಾ’ ಚಿತ್ರಕ್ಕೆ ನಾಯಕಿ
ಸಾಗರ್​ ಪುರಾಣಿಕ್​, ರೂಪಾಲಿ ಸೂದ್, ಪವನ್​ ಒಡೆಯರ್​
ಮದನ್​ ಕುಮಾರ್​
|

Updated on: Apr 03, 2024 | 8:14 PM

Share

ನಿರ್ದೇಶಕ ಸಾಗರ್ ಪುರಾಣಿಕ್ (Sagar Puranik) ಅವರು ಈ ಮೊದಲು ‘ಡೊಳ್ಳು’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವ ಮೂಲಕ ಗಮನ ಸೆಳೆದಿದ್ದರು. ಆ ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು. ಈಗ ಸಾಗರ್ ಪುರಾಣಿಕ್ ಅವರು ಹೊಸ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ‘ವೆಂಕ್ಯಾ’ (Venkya) ಎಂಬುದು ಈ ಸಿನಿಮಾದ ಶೀರ್ಷಿಕೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ಸಾಗರ್ ಪುರಾಣಿಕ್​ ಅವರು ನಿರ್ದೇಶನ ಮಾಡುವುದರ ಜೊತೆಗೆ ಹೀರೋ ಆಗಿಯೂ ಬಣ್ಣ ಹಚ್ಚಿದ್ದಾರೆ. ಈ ಚಿತ್ರತಂಡದಿಂದ ಒಂದು ಅಪ್​ಡೇಟ್​ ನೀಡಲಾಗಿದೆ. ನಾಯಕಿ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ರೂಪಾಲಿ ಸೂದ್ (Rupali Sood) ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಹೌದು, ‘ವೆಂಕ್ಯಾ’ ಚಿತ್ರತಂಡಕ್ಕೆ ರೂಪಾಲಿ ಸೂದ್​ ಸೇರ್ಪಡೆ ಆಗಿದ್ದಾರೆ. ಇವರು ಶಿಮ್ಲಾ ಸುಂದರಿ ಎಂಬುದು ವಿಶೇಷ. ‘ವೆಂಕ್ಯಾ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿ ಆಗಿದ್ದಾಗಲೇ ರೂಪಾಲಿ ಅವರು ಮಾಡೆಲಿಂಗ್​ನಲ್ಲಿ ಗುರುತಿಸಿಕೊಂಡಿದ್ದರು. ಮಾಡೆಲಿಂಗ್ ಮಾಡುತ್ತಲೇ ಅನೇಕ ಮ್ಯೂಸಿಕ್ ಆಲ್ಬಂಗಳಲ್ಲಿ ಅವರು ನಟಿಸಿದರು. ಹಾರ್ಡಿ ಸಂಧು ಅವರ ಜೊತೆ ‘ಹಾರ್ನ್ ಬ್ಲೋ’ ಸೂಪರ್ ಹಿಟ್ ಹಾಡಿನಲ್ಲಿ ಅವರು ಡ್ಯಾನ್ಸ್​ ಮಾಡಿ ಗಮನ ಸೆಳೆದರು. ಈಗ ಅವರು ‘ವೆಂಕ್ಯಾ’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಉತ್ತರಕಾಂಡ’ ಚಿತ್ರಕ್ಕೆ ‘ಶೈತಾನ್’ ಸಿನಿಮಾ ಸಂಗೀತ ಸಂಯೋಜಕ; ಕನ್ನಡಕ್ಕೆ ಬಂದ ಅಮಿತ್ ತ್ರಿವೇದಿ

ಹಿಮಾಚಲದ ಪಹಾಡಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರೂಪಾಲಿ ಸೂದ್​ ಅವರು ‘ವೆಂಕ್ಯಾ’ ಸಿನಿಮಾದ ಚಿತ್ರೀಕರಣದಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿರುವ ಅವರು, ‘ಇತ್ತೀಚೆಗೆ ನಾವು ಮನಾಲಿಯ ಮುಂದೆ ಕೈಲಾಂಗ್ನಲ್ಲಿ ಪರ್ವತಗಳ ನಡುವೆ ಸುಂದರ ಲೊಕೇಷನ್​ನಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದ್ದೇವೆ. ನನ್ನ ವೃತ್ತಿಜೀವನಕ್ಕೆ ಇದು ಅದ್ಭುತ ಪ್ರಾರಂಭ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಷಿಯ ‘ರಾಮನ ಅವತಾರ’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ರಾಷ್ಟ್ರ ಪ್ರಶಸ್ತಿ ಪಡೆದ ‘ಡೊಳ್ಳು’ ಚಿತ್ರಕ್ಕೆ ಬಂಡವಾಳ ಹೂಡಿದ್ದ ಪವನ್ ಒಡೆಯರ್ ಅವರು ‘ವೆಂಕ್ಯಾ’ ಚಿತ್ರಕ್ಕೂ ಸಾಥ್ ನೀಡಿದ್ದಾರೆ. ‘ಒಡೆಯರ್ ಫಿಲ್ಮ್ಸ್’ ಮೂಲಕ ಮೂಡಿಬರುತ್ತಿರುವ ಈ ಸಿನಿಮಾಗೆ ಅವಿನಾಶ್ ವಿ. ರೈ ಹಾಗೂ ಮೋಹನ್ ಲಾಲ್ ಮೆನನ್ ಅವರು ಸಹ ಹಣ ಹಾಕಿದ್ದಾರೆ. ಉತ್ತರ ಕರ್ನಾಟಕ ಭಾಗದ ಕಥೆಯನ್ನು ಆಧರಿಸಿ ಈ ಸಿನಿಮಾ ಮೂಡಿಬರುತ್ತಿದೆ. ‘ವೆಂಕ್ಯಾ’ ಚಿತ್ರಕ್ಕೆ ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಶ್ರೀನಿಧಿ ಡಿ.ಎಸ್. ಅವರು ಬರೆದಿದ್ದಾರೆ. ಪ್ರಣವ್ ಮುಲೆ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಹೇಮಂತ್ ಜೋಯಿಸ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು