AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚೋಳ’ ಟೀಸರ್​ನಲ್ಲಿ ಆ್ಯಕ್ಷನ್​ ಅಬ್ಬರ; ಉತ್ತರ ಕರ್ನಾಟಕದಿಂದ ಬಂದ ಮತ್ತೋರ್ವ ಹೀರೋ ಅಂಜನ್​

‘ಚೋಳ’ ಎಂದರೆ ಐತಿಹಾಸಿಕ ಕಥೆಯುಳ್ಳ ಸಿನಿಮಾ ಅಲ್ಲ. ಇದು ಪಕ್ಕಾ ಮಾಸ್​ ಮಸಾಲಾ ಸಿನಿಮಾ ಎಂಬುದು ಟೀಸರ್​ ಮೂಲಕ ಗೊತ್ತಾಗಿದೆ. ಇದರಲ್ಲಿ ಅಂಜನ್ ಅವರ ಆ್ಯಕ್ಷನ್​ ಗಮನ ಸೆಳೆಯುತ್ತಿದೆ. ಟೀಸರ್​ ನೋಡಿದ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ​‘ಚೋಳ’ ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

‘ಚೋಳ’ ಟೀಸರ್​ನಲ್ಲಿ ಆ್ಯಕ್ಷನ್​ ಅಬ್ಬರ; ಉತ್ತರ ಕರ್ನಾಟಕದಿಂದ ಬಂದ ಮತ್ತೋರ್ವ ಹೀರೋ ಅಂಜನ್​
ಅಂಜನ್​
Follow us
ಮದನ್​ ಕುಮಾರ್​
|

Updated on: Aug 20, 2023 | 2:45 PM

ಕರ್ನಾಟಕದ ಎಲ್ಲ ಭಾಗಗಳಿಂದ ಹೊಸ ಪ್ರತಿಭೆಗಳು ಚಿತ್ರರಂಗಕ್ಕೆ ಬರಬೇಕು ಎಂದು ಕೆಲವೇ ದಿನಗಳ ಹಿಂದೆ ರಕ್ಷಿತ್​ ಶೆಟ್ಟಿ ಹೇಳಿದ್ದರು. ಅದರಲ್ಲೂ ಉತ್ತರ ಕರ್ನಾಟಕ (North Karnataka) ಭಾಗದಿಂದ ಹೊಸ ತಂಡಗಳು ಬಂದು ಸಿನಿಮಾ ಮಾಡಬೇಕು ಎಂದು ಕೂಡ ಅವರು ಹೇಳಿದ್ದರು. ಈಗಾಗಲೇ ನಟ ನವೀನ್​ ಶಂಕರ್​ ಅವರು ಉತ್ತರ ಕರ್ನಾಟಕದ ಸೊಗಡಿನ ‘ಕ್ಷೇತ್ರಪತಿ’ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ಈಗ ಆ ಭಾಗದಿಂದ ಮತ್ತೋರ್ವ ಹೀರೋ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಅವರ ಹೆಸರು ಅಂಜನ್​. ‘ರೂರಲ್​ ಸ್ಟಾರ್​’ ಅಂಜನ್ (Rural Star Anjan)​ ಎಂದರೆ ಜನರಿಗೆ ಚೆನ್ನಾಗಿ ತಿಳಿಯುತ್ತದೆ. ಅವರ ಹೊಸ ಸಿನಿಮಾಗೆ ‘ಚೋಳ’ (Chola) ಎಂದು ಹೆಸರು ಇಡಲಾಗಿದೆ. ಈಗ ಈ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ಈ ಟೀಸರ್​ ಗಮನ ಸೆಳೆಯುತ್ತಿದೆ.

ಅಂಜನ್​ ಅವರು ‘ಚೋಳ’ ಸಿನಿಮಾ ಮಾಡುತ್ತಾರೆ ಎಂದಾಗ ಜನರಿಗೆ ಕುತೂಹಲ ಮೂಡಿತ್ತು. ಆದರೆ ಆ ಸಿನಿಮಾ ಹೇಗಿರಬಹುದು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಈಗ ಟೀಸರ್​ ಬಿಡುಗಡೆ ಆಗಿದ್ದು, ‘ಚೋಳ’ ಸಿನಿಮಾದ ಆ್ಯಕ್ಷನ್​ ಝಲಕ್​ ಕಾಣಿಸಿದೆ. ಸುರೇಶ್​ ಡಿ.ಎಂ. ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಸೃಷ್ಟಿ ಎಂಟರ್ ಪ್ರೈಸಸ್’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಟೀಸರ್​ ನೋಡಿದ ಸಿನಿಪ್ರಿಯರು ಮೆಚ್ಚುಗೆ ಸೂಚಿಸಿದ್ದಾರೆ. ಅಂಜನ್​​ ಅವರ ಆ್ಯಕ್ಷನ್​ ಬಗ್ಗೆ ಭರವಸೆಯ ಮಾತುಗಳು ಕೇಳಿಬರುತ್ತಿವೆ. ಉತ್ತರ ಕರ್ನಾಟಕದ ಸಿನಿಪ್ರಿಯರು ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ.

‘ಚೋಳ’ ಸಿನಿಮಾ ಟೀಸರ್​:

‘ಚೋಳ’ ಸಿನಿಮಾದಲ್ಲಿ ದಿಶಾ ಪಾಂಡೆ, ಪ್ರತಿಭಾ, ದಿನೇಶ್ ಮಂಗಳೂರು, ಬಾಲ ರಾಜವಾಡಿ, ಮನಮೋಹನ್ ರಾಯ್, ವರ್ಧನ್ ಮುಂತಾದವರು ನಟಿಸುತ್ತಿದ್ದಾರೆ. ಅವರ ಪಾತ್ರಗಳ ಝಲಕ್​ ಕೂಡ ಈ ಟೀಸರ್​ನಲ್ಲಿ ಕಾಣಿಸಿದೆ. ಸಂದೀಪ್ ಹೊನ್ನಾಳಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಿವಕುಮಾರ್ ಎ. ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ ಬಹುತೇಕ ಚಿತ್ರೀಕರಣ ಮುಗಿದಿದೆ. ಕೆಲವೇ ದೃಶ್ಯಗಳ ಶೂಟಿಂಗ್​ ಬಾಕಿ ಇದೆ. ಟೀಸರ್​ ಮೂಲಕ ‘ಚೋಳ’ ಬಗ್ಗೆ ಕೌತುಕ ಮೂಡಿದೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಹೊಸ ತಂಡಗಳು ಬರಬೇಕು, ಉತ್ತರ ಕರ್ನಾಟಕದ ಮಂದಿಗೆ ರಕ್ಷಿತ್ ಮನವಿ

ಈ ಟೀಸರ್​ನಲ್ಲಿ ಅಂಜನ್​ ಅವರ ಮಾಸ್​ ಲುಕ್​ ಗಮನ ಸೆಳೆದಿದೆ. ‘ಚೋಳ’ ಸಿನಿಮಾ ಮೇಕಿಂಗ್​ ಹೇಗಿದೆ ಎಂಬುದಕ್ಕೂ ಇದರಲ್ಲಿ ಉತ್ತರ ಸಿಕ್ಕಿದೆ. ಉತ್ತರ ಕರ್ನಾಟಕದ ಹೊಸ ಹೀರೋನ ಆ್ಯಕ್ಷನ್​ ಅವತಾರ ಕಂಡು ನೆಟ್ಟಿಗರು ವಾವ್​ ಎಂದಿದ್ದಾರೆ. ಒಟ್ಟಿನಲ್ಲಿ ಈ ಟೀಸರ್​ಗೆ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಅಲ್ಟಿಮೇಟ್​ ಶಿವು ಮತ್ತು ರಾಜ ಅವರು ಈ ಸಿನಿಮಾಗೆ ಸಾಹಸ ನಿರ್ದೇಶನ ಮಾಡಿದ್ದಾರೆ. ಲವ್​ ಮತ್ತು ರೌಡಿಸಂ ಕುರಿತ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ‘ಚೋಳ’ ಎಂದರೆ ಐತಿಹಾಸಿಕ ಕಥೆಯುಳ್ಳ ಸಿನಿಮಾ ಅಲ್ಲ. ಇದು ಪಕ್ಕಾ ಮಾಸ್​ ಮಸಾಲಾ ಸಿನಿಮಾ ಎಂಬುದು ಟೀಸರ್​ ಮೂಲಕ ಗೊತ್ತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?