AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Janaki Death: ಹಾಡು ನಿಲ್ಲಿಸಿದ ‘ಗಾನಕೋಗಿಲೆ’; ಖ್ಯಾತ ಗಾಯಕಿ ಎಸ್. ಜಾನಕಿ ನಿಧನ

S Janaki Passes Away: ಖ್ಯಾತ ಹಿರಿಯ ಗಾಯಕಿ 'ಗಾನಕೋಗಿಲೆ' ಎಸ್. ಜಾನಕಿ (88) ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ಕೊನೆಯುಸಿರೆಳೆದಿದ್ದಾರೆ. ಈ ವರ್ಷದ ಜನವರಿಯಲ್ಲಿ ಅವರ ಪುತ್ರ ಮುರಳಿ ಕೃಷ್ಣ ಅವರ ನಿಧನದಿಂದ ಜಾನಕಿ ಅವರು ತೀವ್ರ ಪುತ್ರಶೋಕ ಎದುರಿಸುತ್ತಿದ್ದರು.

S Janaki Death: ಹಾಡು ನಿಲ್ಲಿಸಿದ 'ಗಾನಕೋಗಿಲೆ'; ಖ್ಯಾತ ಗಾಯಕಿ ಎಸ್. ಜಾನಕಿ ನಿಧನ
ಜಾನಕಿ
ರಾಜೇಶ್ ದುಗ್ಗುಮನೆ
|

Updated on:Jul 13, 2026 | 12:10 PM

Share

ಮುಖ್ಯಾಂಶಗಳು

  • ಹಾಡು ನಿಲ್ಲಿಸಿದ ಗಾನಕೋಗಿಲೆ
  • ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದ ಎಸ್. ಜಾನಕಿ!
  • ಧ್ವನಿ ಬದಲಾವಣೆಯ ಮಾಂತ್ರಿಕತೆ

ಹಿರಿಯ ಗಾಯಕಿ ಎಸ್. ಜಾನಕಿ ಅವರು ಇಂದು (ಜುಲೈ 11) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಅವರು ಹಾಡಿದ್ದರು. ಅವರ ಸಾವು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ವರ್ಷ ಜನವರಿಯಲ್ಲಿ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ನಿಧನ ಹೊಂದಿದ್ದರು. ಆ ಬಳಿಕ ಪುತ್ರ ಶೋಕ ಅತಿಯಾಗಿ ಕಾಡಿತ್ತು. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಜಾನಕಿ ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು. 1938ರ ಏಪ್ರಿಲ್ 23ರಂದು ಜನಿಸಿದರು. ಅವರು ತೆಲುಗಿನವರು ಹೆಚ್ಚು ಪ್ರಸಿದ್ಧಿ ಪಡೆದು ಕನ್ನಡಿಗರ ಮನೆಮನಗಳಿಗೆ ಹತ್ತಿರವಾದದ್ದು ಕನ್ನಡ ಹಾಡುಗಳ ಮೂಲಕ. ಕನ್ನಡ ಭಾಷೆಯನ್ನು ಅತ್ಯಂತ ಸ್ಪಷ್ಟವಾಗಿ ಉಚ್ಚರಿಸುತ್ತಾ, ಇಲ್ಲಿನದ್ದೇ ಧ್ವನಿ ಎನ್ನುವಂತೆ ಅವರು ಸಾವಿರಾರು ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಜಾನಕಿ ಅಮ್ಮನ ಸಾಧನೆ:

70-80ರ ದಶಕದಲ್ಲಿ ಜಾನಕಿ ಅವರು ಸಾಕಷ್ಟು ಹಾಡುಗಳನ್ನು ಹಾಡಿದರು. ಅವರಷ್ಟು ಜನಪ್ರಿಯತೆ ಪಡೆದ ಮತ್ತೊಬ್ಬರು ಕನ್ನಡದಲ್ಲಿ ಇರಲಿಲ್ಲ. ವರನಟ ಡಾ. ರಾಜ್‌ಕುಮಾರ್ ಹಾಗೂ ಎಸ್. ಜಾನಕಿ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದ ಗೋಲ್ಡನ್ ಎರಾ. ‘ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ’ ಮುಂತಾದ ನೂರಾರು ಸದಾಹಸಿರು ಯುಗಳ ಗೀತೆಗಳನ್ನು ಇವರು ನೀಡಿದ್ದಾರೆ.

ಎಸ್‌ಪಿಬಿ-ಜಾನಕಿ ಮ್ಯಾಜಿಕ್: ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಧ್ವನಿಯಲ್ಲಿ ಮೂಡಿಬಂದ ರೋಮ್ಯಾಂಟಿಕ್ ಹಾಡುಗಳು ಇಂದಿಗೂ ಯುವಕರ ನೆಚ್ಚಿನ ಹಾಡುಗಳಾಗಿವೆ.

ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಇರುವ ಅತಿ ದೊಡ್ಡ ವಿಶೇಷ ಶಕ್ತಿಯೆಂದರೆ ಅದು ಧ್ವನಿ ಬದಲಾವಣೆ . ಸಣ್ಣ ಮಗುವಿನ ಧ್ವನಿಯಿಂದ ಹಿಡಿದು ಪ್ರೌಢ ಮಹಿಳೆಯ ಧ್ವನಿಯವರೆಗೆ, ಕೇವಲ ಗಾಯನದ ಮೂಲಕವೇ ನಟನೆಯ ಭಾವನೆಗಳನ್ನು ತರುತ್ತಿದ್ದ ಅದ್ಭುತ ಗಾಯಕಿ ಇವರು. ಕನ್ನಡ ಚಿತ್ರರಂಗದಲ್ಲಿ ಅವರು ಹಾಡಿದ ಸದಾಹಸಿರು ಗೀತೆಗಳಿಗೆ ಕರ್ನಾಟಕ ಸರ್ಕಾರವು ಹಲವು ಬಾರಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಇಷ್ಟೇ ಅಲ್ಲದೆ, ಎಸ್​. ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿ, ಗೌರವ ಡಾಕ್ಟರೇಟ್, ತಮಿಳುನಾಡು ರಾಜ್ಯ ಸರ್ಕಾರದಿಂದ ಕಲೈಮಾಮಣಿ ಪ್ರಶಸ್ತಿ,  ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಹಾಗೂ 2013ರಲ್ಲಿ ಪದ್ಮಭೂಷಣ ಪ್ರಶಸ್ತಿ ಸಿಕ್ಕಿದೆ.

ಅಂತ್ಯ ಸಂಸ್ಕಾರದ ವಿವರ

ಭಾನುವಾರ ಮೈಸೂರಿ‌ನಲ್ಲಿ ಜಾನಕಿ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಲಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ನವೀನ್ ಫಾರಂಹೌಸ್​ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುತ್ತದೆ. ಮೈಸೂರಲ್ಲೇ ಅಂತ್ಯಸಂಸ್ಕಾರ ಆಗಬೇಕು ಎಂಬುದು ಅವರ ಇಚ್ಛೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:21 pm, Sat, 11 July 26

Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?