AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ

ರಕ್ಷಾ ಜೊತೆ ಪಂಕಜ್​ ನಾರಾಯಣ್​ ಅವರು ಸಪ್ತಪದಿ ತುಳಿದಿದ್ದಾರೆ. ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ
ಪಂಕಜ್ ನಾರಾಯಣ್ - ರಕ್ಷಾ ವಿವಾಹ ಸಮಾರಂಭ
TV9 Web
| Edited By: |

Updated on:Nov 23, 2021 | 2:09 PM

Share

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ (S Narayan) ಅವರ ಮನೆಯಲ್ಲಿ ಶುಭ ಸಮಾರಂಭ ನೆರವೇರಿದೆ. ಅವರ ಪುತ್ರ ಪಂಕಜ್​ ನಾರಾಯಣ್​ (Pankaj Narayan) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ (S Narayan Family) ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಪಂಕಜ್​ ಮತ್ತು ರಕ್ಷಾ ಮದುವೆಯ (Pankaj Narayan Marriage) ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಲೆಬ್ರಿಟಿ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಬೇಕಿತ್ತು. ಆದರೆ ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಅಭಿಮಾನಿಗಳು ಕೂಡ ಸೋಶಿಯಲ್​ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಸ್​. ನಾರಾಯಣ್​ ಹೊಂದಿರುವ ಅನುಭವ ಅಪಾರ. ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. ಅವರ ಮಕ್ಕಳು ಕೂಡ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಪುತ್ರ ಪವನ್​ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್​ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಇದನ್ನೂ ಓದಿ:

ನಿರ್ದೇಶಕ ಎಸ್​. ನಾರಾಯಣ್​ ಹೆಸರಲ್ಲಿ ವಂಚನೆಗೆ ಯತ್ನ; ಹಣ ಕಳೆದುಕೊಳ್ಳಬೇಡಿ ಹುಷಾರ್​

ಮದುವೆಗೂ ಮುನ್ನ ಬುರ್ಕಾ ಧರಿಸುತ್ತಿದ್ದ ದೀಪಿಕಾ; ಯಾರಿಗೂ ತಿಳಿದಿರದ ರಹಸ್ಯ ಈಗ ಬಯಲಾಯ್ತು

Published On - 1:15 pm, Tue, 23 November 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!