AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ

ರಕ್ಷಾ ಜೊತೆ ಪಂಕಜ್​ ನಾರಾಯಣ್​ ಅವರು ಸಪ್ತಪದಿ ತುಳಿದಿದ್ದಾರೆ. ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ
ಪಂಕಜ್ ನಾರಾಯಣ್ - ರಕ್ಷಾ ವಿವಾಹ ಸಮಾರಂಭ
TV9 Web
| Updated By: ಮದನ್​ ಕುಮಾರ್​|

Updated on:Nov 23, 2021 | 2:09 PM

Share

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ (S Narayan) ಅವರ ಮನೆಯಲ್ಲಿ ಶುಭ ಸಮಾರಂಭ ನೆರವೇರಿದೆ. ಅವರ ಪುತ್ರ ಪಂಕಜ್​ ನಾರಾಯಣ್​ (Pankaj Narayan) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ (S Narayan Family) ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಪಂಕಜ್​ ಮತ್ತು ರಕ್ಷಾ ಮದುವೆಯ (Pankaj Narayan Marriage) ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಲೆಬ್ರಿಟಿ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಬೇಕಿತ್ತು. ಆದರೆ ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಅಭಿಮಾನಿಗಳು ಕೂಡ ಸೋಶಿಯಲ್​ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಸ್​. ನಾರಾಯಣ್​ ಹೊಂದಿರುವ ಅನುಭವ ಅಪಾರ. ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. ಅವರ ಮಕ್ಕಳು ಕೂಡ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಪುತ್ರ ಪವನ್​ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್​ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಇದನ್ನೂ ಓದಿ:

ನಿರ್ದೇಶಕ ಎಸ್​. ನಾರಾಯಣ್​ ಹೆಸರಲ್ಲಿ ವಂಚನೆಗೆ ಯತ್ನ; ಹಣ ಕಳೆದುಕೊಳ್ಳಬೇಡಿ ಹುಷಾರ್​

ಮದುವೆಗೂ ಮುನ್ನ ಬುರ್ಕಾ ಧರಿಸುತ್ತಿದ್ದ ದೀಪಿಕಾ; ಯಾರಿಗೂ ತಿಳಿದಿರದ ರಹಸ್ಯ ಈಗ ಬಯಲಾಯ್ತು

Published On - 1:15 pm, Tue, 23 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!