AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷಣಕ್ಷಣಕೂ ಕ್ಷೀಣಿಸುತಿದೆ ಗಾನ ಗಂಧರ್ವನ ಆರೋಗ್ಯ.. ಹೃದಯಬಡಿತ ಕ್ಷೀಣ

ಚೆನ್ನೈ:ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನಗಾರುಡಿಗ SPB ಅವರ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ. ಕೊರೊನಾ ಸೋಂಕು ಧೃಡಪಟ್ಟ ನಂತರ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೋವಿಡ್ ಸೋಂಕಿನಿಂದಾಗಿ ಎಸ್ಪಿಬಿ ಅವರ ಶ್ವಾಸಕೋಶದಲ್ಲಿ ರಕ್ತಸ್ರಾವ ಜಾಸ್ತಿಯಾಗಿದೆ. ಇದರಿಂದಾಗಿ ಆಸ್ಪತ್ರೆಯ ವೈದ್ಯರು ಅಂತಾರಾಷ್ಟ್ರೀಯ ವೈದ್ಯರ ಸಲಹೆಯಂತೆ ಎಸ್ಪಿಬಿ ಅವರ ದೇಹಕ್ಕೆ ಬಿಳಿ ರಕ್ತಕಣಗಳನ್ನು ಇಂಜೆಕ್ಟ್ ಮಾಡುತ್ತಿದ್ದಾರೆ. ದೇಹದಲ್ಲಿ ಬಿಳಿ ರಕ್ತಕಣಗಳು ಇದ್ದರೆ ಮಾತ್ರ ಆರೋಗ್ಯ […]

ಕ್ಷಣಕ್ಷಣಕೂ ಕ್ಷೀಣಿಸುತಿದೆ ಗಾನ ಗಂಧರ್ವನ ಆರೋಗ್ಯ.. ಹೃದಯಬಡಿತ ಕ್ಷೀಣ
ಸಾಧು ಶ್ರೀನಾಥ್​
|

Updated on:Aug 21, 2020 | 6:15 PM

Share

ಚೆನ್ನೈ:ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನಗಾರುಡಿಗ SPB ಅವರ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸುತ್ತಿದೆ.

ಕೊರೊನಾ ಸೋಂಕು ಧೃಡಪಟ್ಟ ನಂತರ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಕೋವಿಡ್ ಸೋಂಕಿನಿಂದಾಗಿ ಎಸ್ಪಿಬಿ ಅವರ ಶ್ವಾಸಕೋಶದಲ್ಲಿ ರಕ್ತಸ್ರಾವ ಜಾಸ್ತಿಯಾಗಿದೆ. ಇದರಿಂದಾಗಿ ಆಸ್ಪತ್ರೆಯ ವೈದ್ಯರು ಅಂತಾರಾಷ್ಟ್ರೀಯ ವೈದ್ಯರ ಸಲಹೆಯಂತೆ ಎಸ್ಪಿಬಿ ಅವರ ದೇಹಕ್ಕೆ ಬಿಳಿ ರಕ್ತಕಣಗಳನ್ನು ಇಂಜೆಕ್ಟ್ ಮಾಡುತ್ತಿದ್ದಾರೆ.

ದೇಹದಲ್ಲಿ ಬಿಳಿ ರಕ್ತಕಣಗಳು ಇದ್ದರೆ ಮಾತ್ರ ಆರೋಗ್ಯ ಸುಧಾರಣೆಯಾಗಲಿದೆ ಎನ್ನಲಾಗಿದೆ. ಹೀಗಾಗಿ ಎಸ್ಪಿಬಿ ಅವರ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಹೆಚ್ಚಾಗಿದ್ದರಿಂದ, ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಲು ಸಾಧ್ಯವಾಗುತ್ತಿಲ್ಲವೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈಗಾಗಲೇ ಶ್ವಾಸಕೋಶದಲ್ಲಿ ರಕ್ತಸ್ರಾವವಾಗುತ್ತಿರುವುದರಿಂದ ಬಳಲಿರುವ ಎಸ್ಪಿಬಿ ಅವರಿಗೆ, ಈಗ ಹೃದಯ ಸಮಸ್ಯೆ ಕೂಡ ಪ್ರಾರಂಭವಾಗಿದೆ. ಎಸ್ಪಿಬಿಯವರ ಹೃದಯಬಡಿತ ಕ್ಷಣದಿಂದ ಕ್ಷಣಕ್ಕೆ ಕಡಿಮೆಯಾಗುತ್ತಿರುವುದರಿಂದ, ಆಸ್ಪತ್ರೆಯ ವೈದ್ಯರು ಹಾಗೂ ಅಂತರಾಷ್ಟ್ರೀಯ ವೈದ್ಯರು ಎಮರ್ಜೆನ್ಸಿ ಟ್ರೀಟ್ಮೆಂಟ್ ಶುರುಮಾಡಿದ್ದಾರೆ.

Published On - 5:21 pm, Fri, 21 August 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ