AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ; ದೂರು ನೀಡಿದ ವೃಕ್ಷ ಮಾತೆ

ಸಾಲುಮರದ ತಿಮ್ಮಕ್ಕ ಅವರ ಜೀವನ ಕಥೆಯನ್ನು ಆಧರಿಸಿ ‘ವೃಕ್ಷಮಾತೆ’ ಎಂಬ ಸಿನಿಮಾ ನಿರ್ಮಾಣವಾಗುತ್ತಿದೆ. ಆದರೆ, ತಿಮ್ಮಕ್ಕ ಅವರು ಈ ಚಿತ್ರಕ್ಕೆ ತಾವು ಅನುಮತಿ ನೀಡಿಲ್ಲ ಎಂದು ದೂರಿ ದಾಖಲಿಸಿದ್ದಾರೆ. ಚಿತ್ರತಂಡವು ಅವರ ಸಮ್ಮತಿಯಿಲ್ಲದೆ ಚಿತ್ರೀಕರಣ ನಡೆಸುತ್ತಿದೆ ಎಂಬ ಆರೋಪವಿದೆ.ತಿಮ್ಮಕ್ಕ ಅವರ ಸಾಕುಮಗ ಉಮೇಶ್ ಕೂಡ ಚಿತ್ರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ; ದೂರು ನೀಡಿದ ವೃಕ್ಷ ಮಾತೆ
ತಿಮ್ಮಕ್ಕ
ರಾಜೇಶ್ ದುಗ್ಗುಮನೆ
|

Updated on: Jun 16, 2025 | 2:43 PM

Share

ಸಾಲು ಮರದ ತಿಮ್ಮಕ್ಕ (Saalumarada Thimmakka) ಅವರು ಮಾಡಿದ ಸಾಧನೆ ತುಂಬಾನೇ ದೊಡ್ಡದು. ಪರಿಸರ ರಕ್ಷಣೆಯಲ್ಲಿ ಅವರು ನೀಡಿದ ಕೊಡುಗೆಯನ್ನು ಎಲ್ಲರೂ ಸ್ಮರಿಸುತ್ತಾರೆ. ಉಸಿರಿರುವರೆಗೂ ಹಸಿರು ಬೆಳೆಸುವ ಶಪಥವನ್ನು ಅವರು ಮಾಡಿದ್ದಾರೆ. ಈಗ ಸಾಲು ಮರದ ತಿಮ್ಮಕ್ಕನ ಮೇಲೆ ಸಿನಿಮಾ ಮಾಡಲು ತಂಡವೊಂದು ಹೊರಟಿತ್ತು. ಇದಕ್ಕೆ ‘ವೃಕ್ಷ ಮಾತೆ’ ಎಂಬ ಶೀರ್ಷಿಕೆ ಇಡಲಾಗಿದೆ. ಆದರೆ, ಈ ಸಿನಿಮಾ ಮಾಡಬಾರದು ಎಂದು ಸ್ವತಃ ತಿಮ್ಮಕ್ಕ ಅವರೇ ಫಿಲ್ಮ್ ಚೇಂಬರ್​ಗೆ ಬಂದು ದೂರು ಕೊಟ್ಟಿದ್ದಾರೆ.

‘ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ‘ವೃಕ್ಷಮಾತೆ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ದಿಲೀಪ್ ಕುಮಾರ್ ಎಚ್.ಆರ್., ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ, ಒರಟ ಶ್ರೀ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಒರಟ ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಸಿದ್ದೇಶ್ ಅವರು ಬರೆದಿರುವ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಕೃತಿಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ. ಆದರೆ, ಇದಕ್ಕೆ ಸಾಲು ಮರದ ತಿಮ್ಮಕ್ಕ ಅವರೇ ವಿರೋಧ ಹೊರಹಾಕಿದ್ದಾರೆ.

ಎರಡು ದಿನಗಳ ಹಿಂದೆ ಚಿತ್ರತಂಡ ಸಿನಿಮಾದ ಶೂಟಿಂಗ್ ಮಾಡುತ್ತಿತ್ತು. ಈ ವೇಳೆ ತಂಡವನ್ನು ಸ್ಟೇಷನ್​ಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ‘ವೃಕ್ಷಮಾತೆ’ ಸಿನಿಮಾಗೆ ಸಾಲು ಮರದ ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಅವರಿಂದ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಈಗ ಫಿಲ್ಮ್​ ಚೇಂಬರ್​ಗೆ ಆಗಮಿಸಿ ಸಾಲು ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ.

ಇದನ್ನೂ ಓದಿ
Image
‘ಹೆಸರ ಜೊತೆ ಅಕ್ಕ ಸೇರಿದ್ರೆ ಅರ್ಥವೇ ಬೇರೆಯಾಗುತ್ತೆ’; ದೀಪಿಕಾ ಬೇಸರ
Image
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

ಇದನ್ನೂ ಓದಿ: ‘ಸಾಲುಮರದ ತಿಮ್ಮಕ್ಕ’ನ ಸಿನಿಮಾಕ್ಕೆ ಸಾಕು ಮಗ ಸಮಸ್ಯೆ?

ಉಮೇಶ್ ಹೇಳಿಕೆ

ಸಾಲುಮರದ ತಿಮ್ಮಕ್ಕ ಅವ್ರ ಸಾಕು ಮಗ ಉಮೇಶ್ ಈ ಬಗ್ಗೆ ಮಾತನಾಡಿದ್ದಾರೆ. ‘ಸಾಲುಮರದ ತಿಮ್ಮಕ್ಕ ಅವ್ರ ಬಯೋಪಿಕ್ ಮಾಡೋದಾಗಿ ಸಾಕಷ್ಟು ನಿರ್ದೇಶಕರು ಬಂದಿದ್ದರು. ಆದರೆ, ನಾವು ಮಾಡೋದು ಬೇಡ ಎಂದು ಹೇಳಿದ್ದೇವೆ. ದಿಲೀಪ್ ಕೂಡ ಸಿನಿಮಾ ಮಾಡುತ್ತೇನೆ ಎಂದಿದ್ದರು. ಅವರಿಗೂ ಬೇಡ ಎಂದು ಹೇಳಿದ್ದೆವು. ಈ ತಂಡಕ್ಕೆ ನಾವು ಸಿನಿಮಾ ಮಾಡೋಕೆ ಬಿಡುವುದಿಲ್ಲ’ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತು

‘ಸಾಲುಮರದ ತಿಮ್ಮಕ್ಕ ಇವತ್ತು ಬಂದು ದೂರು ಕೊಟ್ಟಿದ್ದಾರೆ. ನಮ್ಮ ಅನುಮತಿ ಇಲ್ಲದೇ ಸಿನಿಮಾ ಮಾಡ್ತಿದಾರೆ ಎಂದು ಹೇಳಿದ್ದಾರೆ. ಇಲ್ಲಿ ವೃಕ್ಷಮಾತೆ ಸಿನಿಮಾ ರಿಜಿಸ್ಟರ್ ಆಗಿಲ್ಲ. ಸಿನಿಮಾ ತಂಡವನ್ನು ಕರೆದು ಮಾತನಾಡುತ್ತೇವೆ. ಸಾಲುಮರದ ತಿಮ್ಮಕ್ಕ ಅವ್ರಿಗೆ ನಾವು ಸ್ಪಂದಿಸುತ್ತೇವೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.