AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

Upendra: ಚಿತ್ರರಂಗದಲ್ಲಿ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಲು ಉಪೇಂದ್ರ ಮುಂದಾಗಿದ್ದು, ಅವರಿಗೆ ಅನೇಕ ಸೆಲೆಬ್ರಿಟಿಗಳು ಸಾಥ್​ ನೀಡುತ್ತಿದ್ದಾರೆ. ಸಾಧುಕೋಕಿಲ, ಬಿ. ಸರೋಜಾದೇವಿ, ಪವನ್​ ಒಡೆಯರ್​, ಶೋಭರಾಜ್​ ಮುಂತಾದವರು ದೇಣಿಗೆ ನೀಡಿದ್ದಾರೆ.

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು
ಸರೋಜಾದೇವಿ - ಉಪೇಂದ್ರ -ಸಾಧುಕೋಕಿಲ
ಮದನ್​ ಕುಮಾರ್​
|

Updated on: May 11, 2021 | 2:53 PM

Share

ಕೊರೊನಾ ವೈರಸ್​ ವೇಗವಾಗಿ ಹಬ್ಬುತ್ತಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಜಾರಿ ಆಗಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ನಿಂತಿದೆ. ಆದ್ದರಿಂದ ಬಣ್ಣದ ಲೋಕದಲ್ಲಿ ಕೆಲಸ ಮಾಡುವ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ದಿನದ ಖರ್ಚುಗಳನ್ನು ನಿಭಾಯಿಸುವುದು ಕೂಡ ಕಷ್ಟ ಆಗಿದೆ. ಅಂಥವರಿಗೆ ಸಹಾಯ ಮಾಡಲು ಉಪೇಂದ್ರ ಮಂದೆ ಬಂದಿದ್ದಾರೆ. ಅವರ ಜೊತೆಗೆ ಕನ್ನಡ ಚಿತ್ರರಂಗದ ಅನೇಕರು ಕೈ ಜೋಡಿಸಿದ್ದಾರೆ.

‘ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೊವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ. ನಿಮ್ಮ ಉಪ್ಪಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ತಿಳಿಸುವ ಮೂಲಕ ಉಪೇಂದ್ರ ಈ ಕೆಲಸವನ್ನು ಸೋಮವಾರ (ಮೇ10) ಆರಂಭಿಸಿದರು.

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಅನೇಕರು ಕೈ ಜೋಡಿಸಿದ್ದಾರೆ. ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅಗತ್ಯ ಇರುವವರಿಗೆ ನೆರವು ತಲುಪುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ ‘ಬಿ. ಸರೋಜಮ್ಮ ಅವರು ನಾಲ್ಕು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದಾರೆ. ಸಹಕಲಾವಿದರಿಗೆ ಕಿಟ್ ಕೊಡುವ ಜವಾಬ್ದಾರಿ ನಾನು ತೆಗೆದುಕೊಂಡಿರುವುದರಿಂದ ಅಮ್ಮ ಕೊಡುತ್ತಿರುವ ಹಣವನ್ನು ಸಾಧುಕೋಕಿಲರವರ ನೇತೃತ್ವದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವವರಿಗೆ ನೀಡಲು ತಿಳಿಸಿದ್ದಾರೆ’ ಎಂದು ಉಪೇಂದ್ರ ಹೇಳಿದ್ದಾರೆ.

‘ನಟ ಸಾಧುಕೋಕಿಲ ಅವರು ಎರಡೂವರೆ ಲಕ್ಷ ರೂಪಾಯಿ ಮೊತ್ತದಲ್ಲಿ ದಿನಸಿ ಕಿಟ್​ಗಳನ್ನು ಆರ್ಕೆಸ್ಟ್ರಾ ಕಲಾವಿದರಿಗೆ ಹಂಚಲು ಮುಂದೆ ಬಂದಿದ್ದಾರೆ. ವಿತರಣೆಯ ವಿವರಗಳನ್ನು ಸದ್ಯದಲ್ಲೇ ತಿಳಿಸುತ್ತಾರೆ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಪವನ್​ ಒಡೆಯರ್​ 20 ಸಾವಿರ ರೂಪಾಯಿ ನೀಡಿದ್ದಾರೆ. ನಟ ಶೋಭ್​ರಾಜ್​ ಅವರು 10 ಸಾವಿರ ರೂ. ಕೊಟ್ಟಿದ್ದಾರೆ. ಹೀಗೆ ಅನೇಕರು ತಮ್ಮ ತಮ್ಮ ಅಳಿಲು ಸೇವೆ ಮೂಲಕ ಚಿತ್ರರಂಗದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗುತ್ತಿದ್ದಾರೆ.

ಇದನ್ನೂ ಓದಿ: 

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?