AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Sadhu Kokila: ಸಾಧು ಕೋಕಿಲ ಅಂದ್ರೆ ಕಾಮಿಡಿ ಅಷ್ಟೇ ಅಲ್ಲ! ಅಪ್ರತಿಮ ಕಲಾವಿದನಿಗೆ ಇದೆ ಇನ್ನೂ 4 ಟ್ಯಾಲೆಂಟ್​ಗಳು

Sadhu Kokila: ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಅವರಿಗೆ ಇಂದು (ಮಾ.24) ಜನ್ಮದಿನ ಸಂಭ್ರಮ. ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಕಾಮಿಡಿ ಹೊರತಾಗಿ ಇನ್ನೂ 4 ವಿಚಾರಗಳಲ್ಲಿ ಸಾಧು ಸೈ ಎನಿಸಿಕೊಂಡಿದ್ದಾರೆ ಎಂಬುದು ಅನೇಕರಿಗೆ ತಿಳಿದಿಲ್ಲ.

Happy Birthday Sadhu Kokila: ಸಾಧು ಕೋಕಿಲ ಅಂದ್ರೆ ಕಾಮಿಡಿ ಅಷ್ಟೇ ಅಲ್ಲ! ಅಪ್ರತಿಮ ಕಲಾವಿದನಿಗೆ ಇದೆ ಇನ್ನೂ 4 ಟ್ಯಾಲೆಂಟ್​ಗಳು
ಸಾಧು ಕೋಕಿಲ
ಮದನ್​ ಕುಮಾರ್​
|

Updated on:Mar 24, 2021 | 12:52 PM

Share

ಸಿನಿಮಾದಲ್ಲಿ ಸಾಧು ಕೋಕಿಲ ಕಾಣಿಸಿಕೊಂಡರೆ ಸಾಕು ಅಭಿಮಾನಿಗಳು ಬಿದ್ದ ಬಿದ್ದು ನಗುತ್ತಾರೆ. ಅವರ ಎಕ್ಸ್​ಪ್ರೆಷನ್​ಗಳಿಗೆ ಎಂಥವರೂ ನಕ್ಕು ನಗಲೇಬೇಕು. ಅಷ್ಟರಮಟ್ಟಿಗೆ ಮೋಡಿ ಮಾಡುತ್ತಾರೆ ಈ ಕಲಾವಿದ. ಆ ಕಾರಣದಿಂದಲೇ ಸಾಧು ಈಗಲೂ ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ಹಾಸ್ಯ ನಟನಾಗಿ ಉಳಿದುಕೊಂಡಿದ್ದಾರೆ. ಆದರೆ ಸಾಧು ಕೋಕಿಲ ಎಂದರೆ ಬರೀ ಕಾಮಿಡಿ ಮಾತ್ರವಲ್ಲ. ಸಿನಿಮಾ ಕ್ಷೇತ್ರದಲ್ಲಿ ಅವರದ್ದು ಬಹುಮುಖ ಪ್ರತಿಭೆ.

ಸ್ಯಾಂಡಲ್​ವುಡ್​ನ ಯಶಸ್ವಿ ನಿರ್ದೇಶಕ! ಬರೀ ಕಾಮಿಡಿ ಮಾಡಿಕೊಂಡು ಸಾಧು ಕೋಕಿಲ ಸುಮ್ಮನೆ ಕುಳಿತಿಲ್ಲ. ಸ್ಯಾಂಡಲ್​ವುಡ್​ನಲ್ಲಿ ಅವರು ಓರ್ವ ಯಶಸ್ವಿ ನಿರ್ದೇಶಕ ಕೂಡ ಹೌದು. ಉಪೇಂದ್ರ, ದರ್ಶನ್, ಸುದೀಪ್​, ಶಿವರಾಜ್​ಕುಮಾರ್​ ಅವರಂತಹ ಸ್ಟಾರ್​ ಕಲಾವಿದರಿಗೆ ಆ್ಯಕ್ಷನ್​-ಕಟ್​ ಹೇಳಿದ ಖ್ಯಾತಿ ಸಾಧುಗೆ ಸಲ್ಲುತ್ತದೆ. ಉಪೇಂದ್ರ ನಟನೆಯ ‘ರಕ್ತ ಕಣ್ಣೀರು’, ಶಿವರಾಜ್​ಕುಮಾರ್​ ನಟನೆಯ ‘ರಾಕ್ಷಸ’. ದರ್ಶನ್​ ಅಭಿನಯದ ‘ಸುಂಟರಗಾಳಿ’, ಶೌರ್ಯ, ಸುದೀಪ್​ ಅವರ ಮಿಸ್ಟರ್​ ತೀರ್ಥ ಮುಂತಾದವುಗಳಿಗೆ ನಿರ್ದೇಶನ ಮಾಡಿದ್ದು ಇದೇ ಸಾಧು ಕೋಕಿಲ.

ಗಾಯಕನಾಗಿಯೂ ಸಾಧು ಸೂಪರ್​ ತಮ್ಮ ವಿಭಿನ್ನವಾದ ಧ್ವನಿಯಿಂದ ಕಾಮಿಡಿ ಮಾಡುವ ಸಾಧು ಕೋಕಿಲ ಅವರು ತುಂಬ ಚೆನ್ನಾಗಿ ಹಾಡು ಹೇಳುತ್ತಾರೆ ಕೂಡ. ಗಾಯಕನಾಗಿಯೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ‘ಎದೆಗಾರಿಕೆ’ ಸಿನಿಮಾದ ‘ನೀನೊಂದು ಮುಗಿಯದ ಮೌನ…’ ಹಾಡನ್ನು ಕೇಳಿ ಸಿನಿ ಸಂಗೀತಪ್ರಿಯರು ತಲೆದೂಗಿದ್ದಾರೆ. ಅದಕ್ಕೆ ಧ್ವನಿ ನೀಡುವ ಮೂಲಕ ಸಾಧುಕೋಕಿಲ ಅವರು ಕೇಳುಗರ ಹೃದಯ ಕದ್ದಿದ್ದಾರೆ.

ಸಂಗೀತ ನಿರ್ದೇಶನಕ್ಕೂ ಸಾಧು ಸೈ ಸಾಧು ಕೋಕಿಲ ಅವರೊಬ್ಬ ಬಹುಬೇಡಿಕೆಯ ಸಂಗೀತ ನಿರ್ದೇಶಕ. ನಟನೆಯ ಜೊತೆಜೊತೆಗೆ ಹಲವಾರು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುವ ಮೂಲಕ ಸಾಧು ಫೇಮಸ್​ ಆಗಿದ್ದಾರೆ. ಇಂತಿ ನಿನ್ನ ಪ್ರೀತಿಯ, ಎಚ್​2ಒ, ಶ್​, ರಕ್ತ ಕಣ್ಣೀರು, ಲಾಲಿ ಹಾಡು ಮುಂತಾದ ಸಿನಿಮಾಗಳಿಗೆ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಕ್ಷಸ ಮತ್ತು ಇಂತಿ ನಿನ್ನ ಪ್ರೀತಿಯ ಸಿನಿಮಾಗಳ ಸಂಗೀತ ನಿರ್ದೇಶನಕ್ಕೆ ಸಾಧುಗೆ ರಾಜ್ಯ ಪ್ರಶಸ್ತಿ ಸಿಕ್ಕಿದೆ! ಹಲವು ಚಿತ್ರಗಳಿಗೆ ಹಿನ್ನೆಲೆ ಸಂಗೀತ ನೀಡಿದ್ದಾರೆ.

ನಿರ್ಮಾಣದಲ್ಲಿಯೂ ತೊಡಗಿರುವ ಸಾಧು! ಕನ್ನಡ ಚಿತ್ರರಂಗದಲ್ಲಿ ಓರ್ವ ನಿರ್ಮಾಪಕನಾಗಿಯೂ ಸಾಧು ಕೋಕಿಲ ಗುರುತಿಸಿಕೊಂಡಿದ್ದಾರೆ. 90. ನಂ.1 ಮುಂತಾದ ಸಿನಿಮಾಗಳಿಗೆ ಅವರು ಬಂಡವಾಳ ಹೂಡಿದ್ದರು. ಈಗ ಧಾರಾವಾಹಿ ನಿರ್ಮಾಣಕ್ಕೂ ಸಾಧು ಕೋಕಿಲ ಕೈ ಹಾಕಿದ್ದಾರೆ. ಉದಯ ವಾಹಿನಿಯಲ್ಲಿ ಮಾ.15ರಿಂದ ಪ್ರಸಾರ ಆಗುತ್ತಿರುವ ‘ಗೌರಿಪುರದ ಗಯ್ಯಾಳಿಗಳು’ ಧಾರಾವಾಹಿಗೆ ಸಾಧು ಕೋಕಿಲ ನಿರ್ಮಾಪಕ. ಕೆಲವು ರಿಯಾಲಿಟಿ ಶೋಗಳಿಗೆ ಜಡ್ಡ್​ ಆಗಿಯೂ ಸಾಧು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Kannada Serial: ಧಾರಾವಾಹಿ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದ ಸಾಧು ಕೋಕಿಲ! ಕಾಮಿಡಿ ಕಲಾವಿದನ ಹೊಸ ಸಾಹಸ

Published On - 11:57 am, Wed, 24 March 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ