AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪೇಂದ್ರ ಇಲ್ಲ ಅಂದ್ರೆ ನಾನಿಲ್ಲ’; ಅವಾರ್ಡ್ ಪಡೆದು ಗುರುವ ನೆನೆದ ಸಾಧು ಕೋಕಿಲ

ಜೀ ಕನ್ನಡದ ಕಾಮಿಡಿ ಅವಾರ್ಡ್ಸ್‌ನಲ್ಲಿ ಹಾಸ್ಯ ಚಕ್ರವರ್ತಿ ಪ್ರಶಸ್ತಿ ಪಡೆದ ಸಾಧು ಕೋಕಿಲ ಅವರು ತಮ್ಮ ಯಶಸ್ಸಿಗೆ ಗುರು ಉಪೇಂದ್ರರ ಕೊಡುಗೆಯನ್ನು ಸ್ಮರಿಸಿದ್ದಾರೆ. "ಉಪೇಂದ್ರ ಇಲ್ಲದಿದ್ದರೆ ನಾನಿಲ್ಲ" ಎಂದು ಹೇಳುವ ಮೂಲಕ ಅವರು ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. "ಶ್" ಚಿತ್ರದ ಮೂಲಕ ನಟನೆಯನ್ನು ಆರಂಭಿಸಿದ ಸಾಧು ಕೋಕಿಲ, ಇಂದು ಕನ್ನಡ ಚಿತ್ರರಂಗದ ಪ್ರಮುಖ ಹಾಸ್ಯ ನಟರಾಗಿದ್ದಾರೆ.

‘ಉಪೇಂದ್ರ ಇಲ್ಲ ಅಂದ್ರೆ ನಾನಿಲ್ಲ’; ಅವಾರ್ಡ್ ಪಡೆದು ಗುರುವ ನೆನೆದ ಸಾಧು ಕೋಕಿಲ
ಸಾಧು-ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on: Feb 05, 2025 | 7:56 PM

Share

ಸಾಧು ಕೋಕಿಲ ಅವರು ಹಾಸ್ಯ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡರೆ ಥಿಯೇಟರ್ ರೂಫ್ ಕಿತ್ತು ಹೋಗುವ ರೀತಿಯಲ್ಲಿ ಸಿಳ್ಳೆ ಬೀಳುತ್ತದೆ. ಸ್ಟಾರ್ ಹೀರೋಗೆ ಇರುವಷ್ಟೇ ಕ್ರೇಜ್ ಅವರ ಮೇಲೂ ಇದೆ. ಈಗ ಸಾಧು ಕೋಕಿಲ ಅವರು ತಮ್ಮ ಗುರುವನ್ನು ನೆನೆದಿದ್ದಾರೆ. ಇಲ್ಲಿಯವರೆಗೆ ಬಂದು ನಿಲ್ಲಲು ಕಾರಣ ಆದ ಉಪೇಂದ್ರ ಅವರಿಗೆ ಧನ್ಯವಾದ ಹೇಳಿದ್ದಾರೆ.

ಜೀ ಕನ್ನಡ ವಾಹಿನಿ ‘ಜೀ ಎಂಟರ್​ಟೇನರ್ಸ್ ಕಾಮಿಡಿ ಅವಾರ್ಡ್ಸ್ 2025’ ನಡೆಸುತ್ತಿದೆ. ಇದರ ಶೂಟಿಂಗ್ ಪೂರ್ಣಗೊಂಡಿದ್ದು, ಈ ವಾರಾಂತ್ಯದಲ್ಲಿ ಇದು ಪ್ರಸಾರ ಕಾಣಲಿದೆ. ಜೀ ಕನ್ನಡದಲ್ಲಿ ರಾತ್ರಿ 9 ಗಂಟೆಗೆ ಈ ಪ್ರಶಸ್ತಿ ಕಾರ್ಯಕ್ರಮ ಪ್ರಸಾರ ಕಾಣಲಿದೆ. ಅವಾರ್ಡ್ ಸ್ವೀಕರಿಸಿದ ಸಾಧು ಕೋಕಿಲ ಅವರು ಉಪೇಂದ್ರ ಅವರನ್ನು ನೆನಪಿಸಿಕೊಂಡರು.

‘ಜೀ ಎಂಟರ್​ಟೇನರ್ಸ್​ ಕಾಮಿಡಿ ಅವಾರ್ಡ್ಸ್ 2025’ನಲ್ಲಿ ‘ಹಾಸ್ಯ ಚಕ್ರವರ್ತಿ ನರಸಿಂಹರಾಜು ಪ್ರಶಸ್ತಿ’ ಸಾಧು ಕೋಕಿಲ ಅವರಿಗೆ ಸಿಕ್ಕಿದೆ. ಇದನ್ನು ಉಮೇಶ್ ಅವರು ಸಾಧು ಕೋಕಿಲಾಗೆ ನೀಡಿದರು. ಈ ಅವಾರ್ಡ್ ಸ್ವೀಕರಿಸಿ ಮಾತನಾಡಿದ ಸಾಧು ಕೋಕಿಲ ಅವರು, ‘ನಾನಾಗಿರಬಹುದು, ಮನೋಹರ್ ಆಗಿರಬಹುದು, ಗುರು ಕಿರಣ್ ಆಗಿರಬಹುದು, ನಮ್ಮಲ್ಲಿದ್ದ ಟ್ಯಾಲೆಂಟ್ ತೆಗೆದಿದ್ದು ಅವರೇ’ ಎಂದು ಸಾಧು ಕೋಕಿಲ ಹೇಳಿದರು.

View this post on Instagram

A post shared by Zee Kannada (@zeekannada)

‘ಮ್ಯೂಸಿಕ್ ಡೈರೆಕ್ಟರ್ ಮಾಡಿದ್ದು ಅವರೇ, ಹಾಸ್ಯ ನಟನಾಗಿ ಮಾಡಿದ್ದೂ ಅವರೇ, ಡೈರೆಕ್ಷನ್ ಮಾಡ್ಸಿದ್ದೂ ಅವರೇ. ಉಪೇಂದ್ರ ಇಲ್ಲ ಅಂದ್ರೆ ನಾನು ಇಲ್ಲ’ ಎಂದು ಹೆಮ್ಮೆಯಿಂದ ಸಾಧು ಕೋಕಿಲ ಅವರು ಹೇಳಿಕೊಂಡರು.

ಇದನ್ನೂ ಓದಿ: ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ; ಸಾಧು ನಹೀ ಡಾಕ್ಟರ್ ಸಾಧು ಬೋಲೋ

ಸಾಧು ಕೋಕಿಲ ಅವರು ‘ಶ್​’ ಚಿತ್ರಕ್ಕೆ ಮ್ಯೂಸಿಕ್ ಕೊಟ್ಟರು. ಈ ವೇಳೆ ಅಲ್ಲಿ ಅತಿಥಿ ಪಾತ್ರ ಮಾಡಿದ್ದರು. ಅಲ್ಲಿಂದ ಅವರ ನಟನಾ ವೃತ್ತಿ ಆರಂಭ ಆಯಿತು. ಆ ಬಳಿಕ ಅವರು ಹಾಸ್ಯನಟನಾಗಿ ಹೆಚ್ಚು ಗುರುತಿಸಿಕೊಂಡರು. ಅವರು ಕನ್ನಡ ಚಿತ್ರರಂಗದ ಬೇಡಿಕೆಯ ಕಾಮಿಡಿಯನ್. ಇತ್ತೀಚೆಗೆ ರಿಲೀಸ್ ಆದ ಉಪೇಂದ್ರ ನಟನೆಯ ‘ಯುಐ’ ಚಿತ್ರದಲ್ಲಿ ಸಾಧು ಕೋಕಿಲ ಅವರು ಬಣ್ಣ ಹಚ್ಚಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!