AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಾಧುಕೋಕಿಲ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಅಣ್ಣ ಮಗನಿಗೆ ಕೊರೊನಾ ಪಾಸಿಟಿವ್ ಆಗಿತ್ತು.

ಕೊರೊನಾ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ: ಸಾಧುಕೋಕಿಲ ಎಚ್ಚರಿಕೆ
ಸಾಧು ಕೋಕಿಲ
ಮದನ್​ ಕುಮಾರ್​
| Edited By: |

Updated on:Apr 19, 2021 | 1:38 PM

Share

ಕೊರೊನಾ ವೈರಸ್​ ಕಾಟಕ್ಕೆ ಲಕ್ಷಾಂತರ ಜನರು ತೊಂದರೆ ಅನುಭವಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಪರಿಸ್ಥಿತಿ ಚಿಂತಾಜನಕ ಆಗಿದೆ. ಆಸ್ಪತ್ರೆಗಳಲ್ಲಿ ಬೆಡ್​ ಸಿಗದೇ ಸಾವಿರಾರು ಜನರು ಪರದಾಡುತ್ತಿದ್ದಾರೆ. ದಿನ ಕಳೆದಂತೆಲ್ಲ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಜನರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ನಟ ಸಾಧುಕೋಕಿಲ ಹೇಳಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಸಾಧುಕೋಕಿಲ ಆತಂಕ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಅಣ್ಣ ಮಗನಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಹಾಗಾಗಿ ಇದರ ಸಮಸ್ಯೆ ಏನು ಎಂಬುದನ್ನು ಅವರು ಹತ್ತಿರದಿಂದ ಕಂಡಿದ್ದಾರೆ. ಆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಮ್ಮ ಅಣ್ಣನ ಮಗನಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈಗ ನೆಗೆಟಿಗ್ ಆಗಿದೆ. ಆದರೂ ಅವನಿಗೆ ಉಸಿರಾಟ ತೊಂದರೆ ಆಗುತ್ತಿದೆ. ಒಬ್ಬ ಸೆಲೆಬ್ರಿಟಿಯಾಗಿ ನಾನು ಒಂದು ಆಕ್ಸಿಜನ್ ಪಡಿಯೋಕೆ ಪರದಾಡಿದ್ದೇನೆ. ದಯವಿಟ್ಟು ಎಲ್ಲರೂ ಹುಷಾರಾಗಿರಿ. ಕೊರೊನಾ ವೈರಸ್​ ಬಗ್ಗೆ ಟಿವಿಯಲ್ಲಿ ತೋರಿಸೋದು ಸುಳ್ಳು ಅಂದುಕೊಳ್ಳಬೇಡಿ. ಹಬ್ಬ ಹರಿದಿನ, ಜಾತ್ರೆ ಎಲ್ಲಾ ಬಿಟ್ಟು ಹುಷಾರಾಗಿರಿ’ ಎಂದು ಸಾಧು ಕೋಕಿಲ ಕಿವಿಮಾತು ಹೇಳಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲೂ ಕೊರೊನಾ ಹಬ್ಬುತ್ತಿದೆ. ಇತ್ತೀಚೆಗಷ್ಟೇ ‘ಕೆಮಿಸ್ಟ್ರೀ ಆಫ್​ ಕರಿಯಪ್ಪ’ ಸಿನಿಮಾದ ನಿರ್ಮಾಪಕ ಡಾ. ಡಿ.ಎಸ್​. ಮಂಜುನಾಥ್​ ನಿಧನರಾದರು. ನಟಿ ಸುನೇತ್ರಾ ಪಂಡಿತ್​ ಅವರ ಸಹೋದರಿ ಕೂಡ ಕೊರೊನಾದಿಂದ ಮೃತರಾದರು. ಈ ಎಲ್ಲಾ ಘಟನೆಗಳು ಆತಂಕ ಮೂಡಿಸುತ್ತಿವೆ. ಈ ಸಂದರ್ಭದಲ್ಲಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸಾಧುಕೋಕಿಲ ಹೇಳಿದ್ದಾರೆ.

ಕಾಲಿವುಡ್​ ನಟ ವಿವೇಕ್​ ಅವರು ಏ.17ರಂದು ನಿಧನರಾದರು. ಅವರ ಬಗ್ಗೆ ಸಾಧುಕೋಕಿಲ ಮಾತನಾಡಿದ್ದಾರೆ. ವಿವೇಕ್​ ಅವರನ್ನು ನಾನು ಅನುಸರಿಸುತ್ತಿದ್ದೆ. ಅವರಿಗೆ ಯಾವುದೇ ಕೆಟ್ಟ ಅಭ್ಯಾಸ ಇರಲಿಲ್ಲ. ತುಂಬಾ ಒಳ್ಳೆಯ ಮನುಷ್ಯರಾಗಿದ್ದರು. ಅಂಥವರಿಗೆ ಹೀಗೆ ಆಗಿದ್ದು ಬೇಸರ ಮೂಡಿಸಿದೆ’ ಎಂದು ಸಾಧುಕೋಕಿಲ ಹೇಳಿದ್ದಾರೆ. ಕೊವಿಡ್​ ಲಸಿಕೆ ಪಡೆದ ಮರುದಿನವೇ ವಿವೇಕ್​ ಅವರಿಗೆ ಹೃದಯಾಘಾತ ಆಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದರು.

ಇದನ್ನೂ ಓದಿ: ಸಾಧು ಕೋಕಿಲ ಅಂದ್ರೆ ಕಾಮಿಡಿ ಅಷ್ಟೇ ಅಲ್ಲ! ಅಪ್ರತಿಮ ಕಲಾವಿದನಿಗೆ ಇದೆ ಇನ್ನೂ 4 ಟ್ಯಾಲೆಂಟ್​ಗಳು

Published On - 1:23 pm, Mon, 19 April 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್