AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ

Sai Pallavi | Ramya Divya Spandana: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ನಟಿ ಸಾಯಿ ಪಲ್ಲವಿ ಹೇಳಿದ ಮಾತಿಗೆ ಪರ-ವಿರೋಧ ವ್ಯಕ್ತವಾಗುತ್ತಿದೆ. ರಮ್ಯಾ ಅವರು ಸಾಯಿ ಪಲ್ಲವಿಯ ಪರವಾಗಿ ನಿಂತಿದ್ದಾರೆ.

Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
ಸಾಯಿ ಪಲ್ಲವಿ, ರಮ್ಯಾ ದಿವ್ಯಾ ಸ್ಪಂದನಾ
Follow us
TV9 Web
| Updated By: ಮದನ್​ ಕುಮಾರ್​

Updated on:Jun 16, 2022 | 1:03 PM

ನಟಿ ರಮ್ಯಾ (Ramya Divya Spandana) ಅವರು ಸಮಾಜದ ಅನೇಕ ಆಗುಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಇರುತ್ತಾರೆ. ಈಗ ಅವರು ಸಾಯಿ ಪಲ್ಲವಿ ಪರವಾಗಿ ಬ್ಯಾಟ್​ ಬೀಸಿದ್ದಾರೆ. ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದ ವೇಳೆ ಸಾಯಿ ಪಲ್ಲವಿ (Sai Pallavi) ನೀಡಿದ ಒಂದು ಹೇಳಿಕೆ ವಿವಾದಕ್ಕೆ ಕಾರಣ ಆಗಿದೆ. ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದು ಹೇಳಿರುವ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರಿಗೆ ‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ ಬೆಂಬಲ ನೀಡಿದ್ದಾರೆ. ಈ ಕುರಿತು ರಮ್ಯಾ (Ramya) ಟ್ವೀಟ್​ ಮಾಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ. ಇದು ಹಲವು ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ.

ರಾಣಾ ದಗ್ಗುಬಾಟಿ ಜೊತೆ ‘ವಿರಾಟ ಪರ್ವಂ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅಭಿನಯಸಿದ್ದಾರೆ. ಈ ಚಿತ್ರದ ಪ್ರಚಾರದ ಸಲುವಾಗಿ ಅವರು ಇತ್ತೀಚೆಗೆ ನೀಡಿದ ಒಂದು ಸಂದರ್ಶನದಿಂದ ವಿವಾದ ಸೃಷ್ಟಿ ಆಗಿದೆ. ‘ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಲಾಯಿತು ಎಂದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೀವು ಒಂದು ಧಾರ್ಮಿಕ ಸಂಘರ್ಷ ಎಂದು ನೋಡುವುದಾದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ಒಬ್ಬ ಮುಸ್ಲಿಂ ಡ್ರೈವರ್​ ಮೇಲೆ ಹಲ್ಲೆ ಮಾಡಲಾಯಿತು ಹಾಗೂ ಜೈ ಶ್ರೀರಾಮ್​ ಎಂದು ಹೇಳುವಂತೆ ಬಲವಂತ ಮಾಡಲಾಯಿತು. ಈ ಎರಡು ಘಟನೆಗಳ ನಡುವೆ ವ್ಯತ್ಯಾಸ ಎಲ್ಲಿದೆ? ನಾವು ಒಳ್ಳೆಯ ಮನುಷ್ಯರಾಗಿರಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

ಇದನ್ನೂ ಓದಿ
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
Image
ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ಈ ಕುರಿತು ಪ್ರಕಟ ಆಗಿರುವ ಒಂದು ವರದಿಯನ್ನು ರಮ್ಯಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಶೋಷಣೆಗೆ ಒಳಗಾದವರನ್ನು ರಕ್ಷಿಸಬೇಕು’ ಎಂದು ಸಾಯಿ ಪಲ್ಲವಿ ಹೇಳಿರುವ ಮಾತನ್ನು ರಮ್ಯಾ ಪುನಃ ಬರೆದುಕೊಂಡಿದ್ದಾರೆ. ಸತ್ಯ ನುಡಿಯುವ ಧೈರ್ಯ ತೋರಿದ್ದಕ್ಕೆ ತಮ್ಮ ಪ್ರಶಂಸೆ ಇದೆ ಎಂಬರ್ಥದಲ್ಲಿ ಅವರು ಟ್ವೀಟ್​ ಮಾಡಿದ್ದಾರೆ.

ಸಾಯಿ ಪಲ್ಲವಿ ನೀಡಿದ ಹೇಳಿಕೆ ಅನೇಕರ ಗಮನ ಸೆಳೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವು ನೆಟ್ಟಿಗರು ಸಾಯಿ ಪಲ್ಲವಿ ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:23 pm, Thu, 16 June 22

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ