AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಖತ್​’ ಸಿನಿಮಾದಿಂದ ಅಚಾತುರ್ಯ; ಅಂಧ ಸಮುದಾಯಕ್ಕೆ ಕ್ಷಮೆ ಕೋರಿದ ನಿರ್ದೇಶಕ‌ ಸಿಂಪಲ್ ಸುನಿ‌

ಅಂಧ‌ ಸಮುದಾಯಕ್ಕೆ ನಿರ್ದೇಶಕ ಸುನಿ ಸಿನಿಮಾ ತೋರುಸುತ್ತಿದ್ದಾರೆ. ಇದರ ಜತೆ ಆ ಸಮುದಾಯಕ್ಕೆ ಪತ್ರದ ಮೂಲಕ ಕ್ಷಮಾಪಣೆ ಕೋರಿದ್ದಾರೆ. ‘ಸಿನಿಮಾ ನೋಡಿದ ಮೇಲೆ ಹೇಳುವ ತಪ್ಪುಗಳನ್ನ ತಿದ್ದುಕೊಳ್ಳುವುದಾಗಿ’ ಸುನಿ ಪತ್ರದಲ್ಲಿ ತಿಳಿಸಿದ್ದಾರೆ.  

‘ಸಖತ್​’ ಸಿನಿಮಾದಿಂದ ಅಚಾತುರ್ಯ; ಅಂಧ ಸಮುದಾಯಕ್ಕೆ ಕ್ಷಮೆ ಕೋರಿದ ನಿರ್ದೇಶಕ‌ ಸಿಂಪಲ್ ಸುನಿ‌
ಸಿಂಪಲ್​ ಸುನಿ, ಗಣೇಶ್​
TV9 Web
| Edited By: |

Updated on:Nov 26, 2021 | 7:30 PM

Share

ನಿರ್ದೇಶಕ ಸಿಂಪಲ್​ ಸುನಿ ಹಾಗೂ ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಎರಡನೇ ಬಾರಿಗೆ ಒಂದಾಗಿದ್ದಾರೆ. ‘ಚಮಕ್​’ ಮೂಲಕ ಹಿಟ್​ ಎನಿಸಿಕೊಂಡಿದ್ದ ಈ ಜೋಡಿ ಈಗ ಮತ್ತೆ ಒಂದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಂತೆಯೇ ಸಿನಿಮಾವನ್ನು ಎಂಟರ್​​ಟೇನಿಂಗ್​ ಆಗಿ ಕಟ್ಟಿಕೊಟ್ಟಿದ್ದಾರೆ ಸುನಿ. ಆದರೆ, ಒಂದು ವಿಚಾರದಲ್ಲಿ ಎಡವಟ್ಟು ನಡೆದು ಹೋಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅವರು ಅಂಧರಿಗೆ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

ಕಣ್ಣು ಕಾಣದವರಿಗೆ ಕುರುಡರು ಎನ್ನುವ ಶಬ್ದ ಬಳಕೆ ಮಾಡಬಾರದು. ಈ ಕಾರಣಕ್ಕೆ ‘ಸಖತ್’ ಸಿನಿಮಾಗೆ ಸ್ಟೇ ತರಲು ಅಂಧ ಸಮುದಾಯದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಂಧ‌ ಸಮುದಾಯಕ್ಕೆ ನಿರ್ದೇಶಕ ಸುನಿ ಸಿನಿಮಾ ತೋರಿಸುತ್ತಿದ್ದಾರೆ. ಇದರ ಜತೆ ಆ ಸಮುದಾಯಕ್ಕೆ ಪತ್ರದ ಮೂಲಕ ಕ್ಷಮಾಪಣೆ ಕೋರಿದ್ದಾರೆ. ‘ಸಿನಿಮಾ ನೋಡಿದ ಮೇಲೆ ಹೇಳುವ ತಪ್ಪುಗಳನ್ನ ತಿದ್ದುಕೊಳ್ಳುವುದಾಗಿ’ ಸುನಿ ಪತ್ರದಲ್ಲಿ ತಿಳಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಇತ್ತೀಚೆಗೆ ನಿಧನ ಹೊಂದಿದ್ದರು. ಅವರ ನಿಧನದ ನಂತರ ಎರಡೂ ಕಣ್ಣುಗಳನ್ನು ದಾನ ಮಾಡಿದ್ದರು. ಇದರಿಂದ ಒಂದಷ್ಟು ಅಂಧರ ಬಾಳಲ್ಲಿ ಬೆಳಕು ಮೂಡಿತ್ತು. ಇದರಿಂದ ಸಾಕಷ್ಟು ಜನರು ಕಣ್ಣುಗಳನ್ನು ದಾನ ಮಾಡೋಕೆ ಮುಂದೆ ಬಂದಿದ್ದಾರೆ. ನಿರ್ದೇಶಕ ಸಿಂಪಲ್​ ಸುನಿ ಹಾಗೂ ನಟ ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ಎರಡನೇ ಚಿತ್ರ ‘ಸಖತ್​’ ಕೂಡ ಇದೇ ಸಂದೇಶದೊಂದಿಗೆ ಬಂದಿದೆ ಅನ್ನೋದು ವಿಶೇಷ.

ಗಣೇಶ್​ ಇದೇ ಮೊದಲ ಬಾರಿಗೆ ಅಂಧನ ರೀತಿಯಲ್ಲಿ ನಟಿಸಿದ್ದಾರೆ. ಕೊಟ್ಟ ಪಾತ್ರವನ್ನು ಅವರು ಉತ್ತಮವಾಗಿ ನಿರ್ವಹಿಸಿದ್ದಾರೆ. ಇಡೀ ಸಿನಿಮಾದಲ್ಲಿ ಬಾಲು ಪಾತ್ರವೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ನಿಶ್ವಿಕಾ ಕೂಡ ಅಂಧೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮೆಚ್ಚುಗೆ ಪಡೆಯುತ್ತಾರೆ. ನಟಿ ಸುರಭಿ ಉತ್ತಮವಾಗಿ ನಟಿಸಿದ್ದಾರೆ. ಗಣೇಶ್​ ಮಗ ವಿಹಾನ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾನೆ. ಮೊದಲ ಚಿತ್ರದಲ್ಲೇ ಅವನು ಎಲ್ಲರ ಗಮನ ಸೆಳೆದಿದ್ದಾನೆ.

ಇದನ್ನೂ ಓದಿ: Sakath Movie Review: ‘ಸಖತ್’​ ಮನರಂಜನೆ, ‘ಸಖತ್’​ ಸಂದೇಶ; ಇದು ಗಣೇಶ್​-ಸುನಿ ಪಂಚ್​

Published On - 7:30 pm, Fri, 26 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ