AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್​ ಆಗಿದೆ ‘ಸಖತ್’ ಟೀಸರ್​; ಪ್ರೇಕ್ಷಕರ ತಲೆಗೆ ಕುತೂಹಲದ ಹುಳ ಬಿಟ್ಟ ಗಣೇಶ್​, ಸಿಂಪಲ್​ ಸುನಿ

Sakath movie teaser: ‘ಸಖತ್’​ ಸಿನಿಮಾದಲ್ಲಿ ಗಣೇಶ್​ ಜೊತೆ ಸುರಭಿ, ನಿಶ್ವಿಕಾ ನಾಯ್ಡು ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ಗಿರಿ, ಧರ್ಮಣ್ಣ ಮುಂತಾದ ಕಲಾವಿದರು ಪೋಷಕ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಸಖತ್​ ಆಗಿದೆ ‘ಸಖತ್’ ಟೀಸರ್​; ಪ್ರೇಕ್ಷಕರ ತಲೆಗೆ ಕುತೂಹಲದ ಹುಳ ಬಿಟ್ಟ ಗಣೇಶ್​, ಸಿಂಪಲ್​ ಸುನಿ
ಸಿಂಪಲ್​ ಸುನಿ, ಗಣೇಶ್​
TV9 Web
| Edited By: |

Updated on: Oct 24, 2021 | 12:59 PM

Share

ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮತ್ತು ನಿರ್ದೇಶಕ ಸಿಂಪಲ್​ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ‘ಸಖತ್​’ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕೌತುಕ ಮೂಡಿದೆ. ಅದನ್ನು ದುಪ್ಪಟ್ಟು ಮಾಡಲು ಈಗ ಟೀಸರ್​ ರಿಲೀಸ್​ ಆಗಿದೆ. ಇದೇ ಮೊದಲ ಬಾರಿಗೆ ಕುರುಡನ ಪಾತ್ರದಲ್ಲಿ ಗಣೇಶ್​ ಕಾಣಿಸಿಕೊಂಡಿದ್ದಾರೆ. ಆದರೆ ಹೀರೋ ಪಾತ್ರಕ್ಕೆ ನಿಜಕ್ಕೂ ಕಣ್ಣಿಲ್ಲವೋ ಅಥವಾ ಕಣ್ಣಿಲ್ಲದ ರೀತಿಯಲ್ಲಿ ಆತ ನಾಟಕ ಮಾಡುತ್ತಾನೋ ಎಂಬ ಕೌತುಕದ ಪ್ರಶ್ನೆಯನ್ನು ಪ್ರೇಕ್ಷಕರ ಮನದಲ್ಲಿ ಮೂಡಿಸುವಲ್ಲಿ ಈ ಟೀಸರ್ ಯಶಸ್ವಿ ಆಗಿದೆ. ನ.12ಕ್ಕೆ ‘ಸಖತ್​’ ರಿಲೀಸ್​ ಆಗಲಿದೆ.

ಕಾಮಿಡಿ ಜೊತೆಗೆ ಫ್ಯಾಮಿಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ತಾಕತ್ತು ಗಣೇಶ್​ ಅವರಿಗಿದೆ. ಅವರ ಜೊತೆ ಸುನಿ ಕೂಡ ಕೈ ಜೋಡಿಸಿದರೆ ಇಬ್ಬರ ಕಾಂಬಿನೇಷನ್​ಗೆ ಆನೆ ಬಲ ಬಂದಂತಾಗುತ್ತದೆ. ಸದ್ಯ ‘ಸಖತ್​’ ಸಿನಿಮಾದಲ್ಲಿ ಇವರಿಬ್ಬರ ಕಾಂಬಿನೇಷನ್​ ಸೂಪರ್​ ಆಗಿ ವಕೌರ್ಟ್​ ಆಗುವ ಲಕ್ಷಣ ಗೋಚರಿಸುತ್ತಿದೆ. ಚಿಕ್ಕ ಟೀಸರ್​ ಮೂಲಕವೇ ಸುನಿ ಮತ್ತು ಗಣೇಶ್​ ಅವರು ಪ್ರೇಕ್ಷಕರ ಮನ ಗೆಲ್ಲುತ್ತಿದ್ದಾರೆ.

ಇಂದು (ಅ.24) ‘ಸಖತ್​’ ಸಿನಿಮಾದ ಟೀಸರ್​ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇರಲಿದೆ ಎಂಬುದಕ್ಕೆ ಈ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಕಚಗುಳಿ ಇಡುವ ಡೈಲಾಗ್​ಗಳು, ಗಣೇಶ್​ ಅವರ ನಟನೆ, ಜೂಡಾ ಸ್ಯಾಂಡಿ ಸಂಗೀತ ಎಲ್ಲರ ಗಮನ ಸೆಳೆಯುತ್ತಿದೆ. ಗಣೇಶ್​, ಸುನಿ, ಜೂಡಾ ಸ್ಯಾಂಡಿ ಕಾಂಬಿನೇಷನ್​ನಲ್ಲಿ ಈ ಹಿಂದೆ ‘ಚಮಕ್​’ ಚಿತ್ರ ಮೂಡಿಬಂದಿತ್ತು. ಅದು ಕೂಡ ಪ್ರೇಕ್ಷಕರಿಗೆ ತುಂಬ ಇಷ್ಟವಾಗಿತ್ತು. ಈಗ ಮತ್ತೊಮ್ಮೆ ಮೋಡಿ ಮಾಡಲು ಈ ಮೂವರು ಒಂದಾಗಿದ್ದಾರೆ.

(ಸಖತ್​ ಸಿನಿಮಾ ಟೀಸರ್​)

ಸಖತ್​ ಸಿನಿಮಾದಲ್ಲಿ ಗಣೇಶ್​ ಜೊತೆ ಸುರಭಿ, ನಿಶ್ವಿಕಾ ನಾಯ್ಡು ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ಗಿರಿ, ಧರ್ಮಣ್ಣ ಮುಂತಾದ ಕಲಾವಿದರು ಪೋಷಕ ಪಾತ್ರಗಳನ್ನು ನಿಭಾಯಿಸಿದ್ದಾರೆ. ಕೆವಿಎನ್​ ಪ್ರೊಡಕ್ಷನ್ಸ್​ ಬ್ಯಾನರ್​ನಲ್ಲಿ ಈ ಸಿನಿಮಾ ತಯಾರಾಗುತ್ತಿದೆ.​ ನಿಶಾ ವೆಂಕಟ್​ ಕೋನಂಕಿ ಮತ್ತು ಸುಪ್ರಿತ್​ ಬಂಡವಾಳ ಹೂಡಿದ್ದಾರೆ. ಶಾಂತ್​ ಕುಮಾರ್​ ಸಂಕಲನ, ಸಂತೋಷ್​ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ.

ಇದಲ್ಲದೇ ನಿರ್ದೇಶಕ ಸುನಿ ಅವರು ‘ಅವತಾರ ಪುರುಷ’ ಚಿತ್ರದ ಬಿಡುಗಡೆಗೂ ಸಿದ್ಧವಾಗುತ್ತಿದ್ದಾರೆ. ಅತ್ತ ಗಣೇಶ್​ ಅವರು ‘ಗಾಳಿಪಟ 2’, ‘ತ್ರಿಬಲ್​ ರೈಡಿಂಗ್​’ ಮುಂತಾದ ಸಿನಿಮಾಗಳ ಕೆಲಸದಲ್ಲೂ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

Rathnan Prapancha Movie Review: ಸಂಬಂಧಗಳ ಅರ್ಥ ತಿಳಿಯಲು ಪ್ರಪಂಚ ಸುತ್ತಿದ ರತ್ನ; ಧನಂಜಯ ಖಾತೆಗೆ ಇನ್ನೊಂದು ಭಿನ್ನ ಸಿನಿಮಾ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!