AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಪ್ರಶಾಂತ್​ ನೀಲ್​ ನಿರ್ದೇಶನದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ಶ್ರೀಮುರಳಿಗೆ ದೊಡ್ಡ ಬ್ರೇಕ್​ ಕೂಡ ನೀಡಿತ್ತು.

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ
ಸಲಾರ್​-ಉಗ್ರಂ ಸಿನಿಮಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 01, 2021 | 3:08 PM

Share

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್​ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್​ ವಿಚಾರಕ್ಕೆ ಸಲಾರ್​ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್​ ಆಗುತ್ತಿದೆ. ಸಲಾರ್​ ಸಿನಿಮಾವನ್ನು ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಸಲಾರ್​ ಸಿನಿಮಾ 2014ರಲ್ಲಿ ತೆರೆಕಂಡ ಉಗ್ರಂ ಚಿತ್ರದ ರಿಮೇಕ್​ ಎಂದು ಹೇಳಲಾಗಿತ್ತು. ಇದನ್ನು ಸಂಗೀತ ನಿರ್ದೇಶಕ ರವಿ ಬಸ್ರೂಸ್​ ಖಚಿತಪಡಿಸಿದ್ದರು. ಆದರೂ ಅಭಿಮಾನಿಗಳಲ್ಲಿ ಒಂದು ಅನುಮಾನ ಇದ್ದೇ ಇತ್ತು. 

ನಿನ್ನೆ ಸಲಾರ್​ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಈ ವೇಳೆ ಚಿತ್ರತಂಡ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಿತ್ತು. ಇದರಲ್ಲಿ ಸೇಮ್​ ಟು ಸೇಮ್ ಶ್ರೀಮುರಳಿ ಉಗ್ರಂ ಲುಕ್​ನಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಲಾರ್​, ಉಗ್ರಂನ ರಿಮೇಕ್​ ಎನ್ನುವುದು ಖಚಿತವಾಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ಶ್ರೀಮುರಳಿಗೆ ದೊಡ್ಡ ಬ್ರೇಕ್​ ಕೂಡ ನೀಡಿತ್ತು. ಪ್ರಶಾಂತ್​ ನೀಲ್​ ಬಗ್ಗೆ ದೊಡ್ಡಮಟ್ಟದಲ್ಲಿ ನಿರೀಕ್ಷೆ ಹುಟ್ಟಲು ಇದೇ ಸಿನಿಮಾ ಕಾರಣವಾಗಿತ್ತು. ಉಗ್ರಂ ಸಿನಿಮಾ ತೆರೆಕಂಡಿದ್ದು 2014ರಲ್ಲಿ. ಅಂದು ಈ ಸಿನಿಮಾದ ಬಜೆಟ್​ ಕೇವಲ 5 ಕೋಟಿ ರೂಪಾಯಿ!

ಇದೇ ಕತೆ ಇಟ್ಟುಕೊಂಡು ಸಿದ್ಧಗೊಳ್ಳುತ್ತಿರುವ ಸಿನಿಮಾ ಸಲಾರ್. ಆದರೆ, ಈ ಚಿತ್ರದ​ ಬಜೆಟ್​ 150 ಕೋಟಿ ರೂಪಾಯಿ. ಅಂದರೆ ಚಿತ್ರತಂಡ ಹೆಚ್ಚುವರಿಯಾಗಿ 145 ಕೋಟಿ ರೂಪಾಯಿಯನ್ನು ಖರ್ಚು ಮಾಡುತ್ತಿದೆ! ಈ ಬಗ್ಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ಟ್ರೋಲ್​ ಕೂಡ ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ ಸಲಾರ್​ ಸಿನಿಮಾ ತುಂಬಾನೇ ಅದ್ದೂರಿಯಾಗಿ ಸಿದ್ಧಗೊಳ್ಳುತ್ತಿದೆಯಂತೆ. ಇದೇ ಕಾರಣಕ್ಕೆ, ಸಿನಿಮಾದ ಬಜೆಟ್​ 150 ಕೋಟಿ ರೂಪಾಯಿ ತಲುಪಿದೆ. ಅಲ್ಲದೆ, ಕೆಜಿಎಫ್​ನಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಸಲಾರ್​ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದರಿಂದ ಇವರು ದೊಡ್ಡ ಮೊತ್ತದೆ ಸಂಭಾವನೆ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸಿನಿಮಾ ಬಜೆಟ್​ ಹಿರಿದಾಗಿದೆ.

ಇದನ್ನೂ ಓದಿ: ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ