AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ

ಪ್ರಶಾಂತ್​ ನೀಲ್​ ನಿರ್ದೇಶನದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ಶ್ರೀಮುರಳಿಗೆ ದೊಡ್ಡ ಬ್ರೇಕ್​ ಕೂಡ ನೀಡಿತ್ತು.

Salaar Movie: ಬಜೆಟ್​ ವಿಚಾರದಲ್ಲಿ ಭಾರೀ ಟ್ರೋಲ್​ ಆದ ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ
ಸಲಾರ್​-ಉಗ್ರಂ ಸಿನಿಮಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 01, 2021 | 3:08 PM

Share

ಪ್ರಭಾಸ್​ ನಟನೆಯ ಸಲಾರ್​ ಸಿನಿಮಾ 2022ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಪ್ರಭಾಸ ಸಿನಿಮಾ ಕೆರಿಯರ್​ನಲ್ಲಿ ಚಿತ್ರ ಮತ್ತೊಂದು ದೊಡ್ಡ ಬ್ರೇಕ್​ ನೀಡಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಬಜೆಟ್​ ವಿಚಾರಕ್ಕೆ ಸಲಾರ್​ ಸಿನಿಮಾ ತುಂಬಾನೇ ದೊಡ್ಡ ಮಟ್ಟಕ್ಕೆ ಟ್ರೋಲ್​ ಆಗುತ್ತಿದೆ. ಸಲಾರ್​ ಸಿನಿಮಾವನ್ನು ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಸಲಾರ್​ ಸಿನಿಮಾ 2014ರಲ್ಲಿ ತೆರೆಕಂಡ ಉಗ್ರಂ ಚಿತ್ರದ ರಿಮೇಕ್​ ಎಂದು ಹೇಳಲಾಗಿತ್ತು. ಇದನ್ನು ಸಂಗೀತ ನಿರ್ದೇಶಕ ರವಿ ಬಸ್ರೂಸ್​ ಖಚಿತಪಡಿಸಿದ್ದರು. ಆದರೂ ಅಭಿಮಾನಿಗಳಲ್ಲಿ ಒಂದು ಅನುಮಾನ ಇದ್ದೇ ಇತ್ತು. 

ನಿನ್ನೆ ಸಲಾರ್​ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಈ ವೇಳೆ ಚಿತ್ರತಂಡ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಿತ್ತು. ಇದರಲ್ಲಿ ಸೇಮ್​ ಟು ಸೇಮ್ ಶ್ರೀಮುರಳಿ ಉಗ್ರಂ ಲುಕ್​ನಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಲಾರ್​, ಉಗ್ರಂನ ರಿಮೇಕ್​ ಎನ್ನುವುದು ಖಚಿತವಾಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ಉಗ್ರಂ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ಶ್ರೀಮುರಳಿಗೆ ದೊಡ್ಡ ಬ್ರೇಕ್​ ಕೂಡ ನೀಡಿತ್ತು. ಪ್ರಶಾಂತ್​ ನೀಲ್​ ಬಗ್ಗೆ ದೊಡ್ಡಮಟ್ಟದಲ್ಲಿ ನಿರೀಕ್ಷೆ ಹುಟ್ಟಲು ಇದೇ ಸಿನಿಮಾ ಕಾರಣವಾಗಿತ್ತು. ಉಗ್ರಂ ಸಿನಿಮಾ ತೆರೆಕಂಡಿದ್ದು 2014ರಲ್ಲಿ. ಅಂದು ಈ ಸಿನಿಮಾದ ಬಜೆಟ್​ ಕೇವಲ 5 ಕೋಟಿ ರೂಪಾಯಿ!

ಇದೇ ಕತೆ ಇಟ್ಟುಕೊಂಡು ಸಿದ್ಧಗೊಳ್ಳುತ್ತಿರುವ ಸಿನಿಮಾ ಸಲಾರ್. ಆದರೆ, ಈ ಚಿತ್ರದ​ ಬಜೆಟ್​ 150 ಕೋಟಿ ರೂಪಾಯಿ. ಅಂದರೆ ಚಿತ್ರತಂಡ ಹೆಚ್ಚುವರಿಯಾಗಿ 145 ಕೋಟಿ ರೂಪಾಯಿಯನ್ನು ಖರ್ಚು ಮಾಡುತ್ತಿದೆ! ಈ ಬಗ್ಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ಟ್ರೋಲ್​ ಕೂಡ ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ ಸಲಾರ್​ ಸಿನಿಮಾ ತುಂಬಾನೇ ಅದ್ದೂರಿಯಾಗಿ ಸಿದ್ಧಗೊಳ್ಳುತ್ತಿದೆಯಂತೆ. ಇದೇ ಕಾರಣಕ್ಕೆ, ಸಿನಿಮಾದ ಬಜೆಟ್​ 150 ಕೋಟಿ ರೂಪಾಯಿ ತಲುಪಿದೆ. ಅಲ್ಲದೆ, ಕೆಜಿಎಫ್​ನಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಸಲಾರ್​ ಸಿನಿಮಾದಲ್ಲಿ ಕೆಲಸ ಮಾಡುತ್ತಿರುವುದರಿಂದ ಇವರು ದೊಡ್ಡ ಮೊತ್ತದೆ ಸಂಭಾವನೆ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸಿನಿಮಾ ಬಜೆಟ್​ ಹಿರಿದಾಗಿದೆ.

ಇದನ್ನೂ ಓದಿ: ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ