AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ವ್ಯಯಿಸಲಿದ್ದಾರೆ ಪ್ರಭಾಸ್?

ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಸೋಲು ಕಂಡಿದ್ದಾರೆ. ಇದರಿಂದ ಅವರು ಚಿಂತೆಗೆ ಒಳಗಾಗಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸೋಲಿನಿಂದ ಅವರು ಚೇತರಿಸಿಕೊಳ್ಳಬೇಕಿದೆ. ಇದಕ್ಕಾಗಿ ‘ಸಲಾರ್’ ಗೆಲುವು ಅವರಿಗೆ ತುಂಬಾನೇ ಮುಖ್ಯ ಎನಿಸಿಕೊಂಡಿದೆ.

‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ವ್ಯಯಿಸಲಿದ್ದಾರೆ ಪ್ರಭಾಸ್?
ಪ್ರಭಾಸ್​
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 28, 2023 | 3:24 PM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಈಗಾಗಲೇ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 22ಕ್ಕೆ ಮುಂದೂಡಿಕೆ ಆಯಿತು. ಕ್ರಿಸ್​ಮಸ್ ಸಂದರ್ಭದಲ್ಲಿ ‘ಸಲಾರ್’ ರಿಲೀಸ್ ಆಗುತ್ತಿರುವುದರಿಂದ ಈ ಚಿತ್ರ ಭರ್ಜರಿ ಗಳಿಕೆ ಮಾಡುವ ಸಾಧ್ಯತೆ ಇದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಹೀಗಾಗಿ ಪ್ರಭಾಸ್ ಅವರು ‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ಮೀಸಲಿಡಲಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಬೇಕಿರುವ ಎಲ್ಲಾ ತಯಾರಿಯನ್ನು ನಿರ್ದೇಶಕ ಪ್ರಶಾಂತ್ ನೀಲ್ ಅವರು ಮಾಡಿಕೊಂಡಿದ್ದಾರೆ.

ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಸೋಲು ಕಂಡಿದ್ದಾರೆ. ಇದರಿಂದ ಅವರು ಚಿಂತೆಗೆ ಒಳಗಾಗಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸೋಲಿನಿಂದ ಅವರು ಚೇತರಿಸಿಕೊಳ್ಳಬೇಕಿದೆ. ಇದಕ್ಕಾಗಿ ‘ಸಲಾರ್’ ಗೆಲುವು ಅವರಿಗೆ ತುಂಬಾನೇ ಮುಖ್ಯ ಎನಿಸಿಕೊಂಡಿದೆ.

ಪ್ರಭಾಸ್ ಅವರು ಕಳೆದ ತಿಂಗಳ ಆರಂಭದಲ್ಲಿ ಯುರೋಪ್​ಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ. ಸದ್ಯ ಅವರು ಸಂಪೂರ್ಣ ಚೇತರಿಕೆ ಕಂಡಿದ್ದಾರೆ. ನವೆಂಬರ್ 6ಕ್ಕೆ ಅವರು ಭಾರತಕ್ಕೆ ಮರಳಲಿದ್ದಾರಂತೆ. ಆ ಬಳಿಕ ‘ಸಲಾರ್’ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಅವರು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಅಕ್ಟೋಬರ್ 23 ಪ್ರಭಾಸ್ ಅವರ ಜನ್ಮದಿನ. ಅಂದು ಅವರು ಎಲ್ಲರ ಎದುರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಮಾಧ್ಯಮದ ಎದುರು ಬಂದಿಲ್ಲ. ಅವರು ಇನ್ನೂ ವಿದೇಶದಲ್ಲೇ ಇದ್ದಾರೆ ಎನ್ನುತ್ತಿವೆ ಮೂಲಗಳು. ಶೀಘ್ರವೇ ಅವರು ಭಾರತಕ್ಕೆ ಆಗಮಿಸಿ, ಸಿನಿಮಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಶಾಂತ್ ನೀಲ್ ಅವರು ಸಿನಿಮಾ ಪ್ರಚಾರಕ್ಕೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ‘ಕೆಜಿಎಫ್ 2’ ಚಿತ್ರಕ್ಕೆ ಅವರು ಭರ್ಜರಿ ಪ್ರಚಾರ ನೀಡಿದ್ದರು. ‘ಸಲಾರ್’ ಸಿನಿಮಾಗೂ ದೊಡ್ಡ ಪ್ರಮೋಷನ್ ಮಾಡಲು ಪ್ಲಾನ್ ನಡೆದಿದೆ. ‘ಸಲಾರ್’ ಸಿನಿಮಾ ಬಗ್ಗೆ ಹಿಂದಿ ಮಂದಿಗೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಶಾರುಖ್ ಖಾನ್ ನಟನೆಯ ‘ಡಂಕಿ’ ಕೂಡ ರಿಲೀಸ್ ಆಗುತ್ತಿದೆ. ಈ ಎಲ್ಲಾ ಕಾರಣದಿಂದ ಹಿಂದಿ ಬೆಲ್ಟ್​ನಲ್ಲಿ ಚಿತ್ರಕ್ಕೆ ದೊಡ್ಡ ಪ್ರಮೋಷನ್​ನ ಅಗತ್ಯತೆ ಇದೆ. ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು ಕನ್ನಡದವರು. ಹೀಗಾಗಿ, ಕರ್ನಾಟಕದಲ್ಲೂ ಸಿನಿಮಾಗೆ ಪ್ರಚಾರ ಬೇಕು.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್​ ಸುಕುಮಾರನ್ ಸೇರಿ ಅನೇಕರು ನಟಿಸಿದ್ದಾರೆ. ರವಿ ಬಸ್ರೂರು ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಭುವನ್ ಗೌಡ ಅವರ ಛಾಯಾಗ್ರಹಣ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:23 pm, Sat, 28 October 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು