AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ವ್ಯಯಿಸಲಿದ್ದಾರೆ ಪ್ರಭಾಸ್?

ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಸೋಲು ಕಂಡಿದ್ದಾರೆ. ಇದರಿಂದ ಅವರು ಚಿಂತೆಗೆ ಒಳಗಾಗಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸೋಲಿನಿಂದ ಅವರು ಚೇತರಿಸಿಕೊಳ್ಳಬೇಕಿದೆ. ಇದಕ್ಕಾಗಿ ‘ಸಲಾರ್’ ಗೆಲುವು ಅವರಿಗೆ ತುಂಬಾನೇ ಮುಖ್ಯ ಎನಿಸಿಕೊಂಡಿದೆ.

‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ವ್ಯಯಿಸಲಿದ್ದಾರೆ ಪ್ರಭಾಸ್?
ಪ್ರಭಾಸ್​
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Oct 28, 2023 | 3:24 PM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಈಗಾಗಲೇ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕ ಡಿಸೆಂಬರ್ 22ಕ್ಕೆ ಮುಂದೂಡಿಕೆ ಆಯಿತು. ಕ್ರಿಸ್​ಮಸ್ ಸಂದರ್ಭದಲ್ಲಿ ‘ಸಲಾರ್’ ರಿಲೀಸ್ ಆಗುತ್ತಿರುವುದರಿಂದ ಈ ಚಿತ್ರ ಭರ್ಜರಿ ಗಳಿಕೆ ಮಾಡುವ ಸಾಧ್ಯತೆ ಇದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಹೀಗಾಗಿ ಪ್ರಭಾಸ್ ಅವರು ‘ಸಲಾರ್’ ಸಿನಿಮಾ ಪ್ರಚಾರಕ್ಕೆ ಒಂದು ತಿಂಗಳು ಮೀಸಲಿಡಲಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಬೇಕಿರುವ ಎಲ್ಲಾ ತಯಾರಿಯನ್ನು ನಿರ್ದೇಶಕ ಪ್ರಶಾಂತ್ ನೀಲ್ ಅವರು ಮಾಡಿಕೊಂಡಿದ್ದಾರೆ.

ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಮೂರು ಸೋಲು ಕಂಡಿದ್ದಾರೆ. ಇದರಿಂದ ಅವರು ಚಿಂತೆಗೆ ಒಳಗಾಗಿದ್ದಾರೆ. ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸೋಲಿನಿಂದ ಅವರು ಚೇತರಿಸಿಕೊಳ್ಳಬೇಕಿದೆ. ಇದಕ್ಕಾಗಿ ‘ಸಲಾರ್’ ಗೆಲುವು ಅವರಿಗೆ ತುಂಬಾನೇ ಮುಖ್ಯ ಎನಿಸಿಕೊಂಡಿದೆ.

ಪ್ರಭಾಸ್ ಅವರು ಕಳೆದ ತಿಂಗಳ ಆರಂಭದಲ್ಲಿ ಯುರೋಪ್​ಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ. ಸದ್ಯ ಅವರು ಸಂಪೂರ್ಣ ಚೇತರಿಕೆ ಕಂಡಿದ್ದಾರೆ. ನವೆಂಬರ್ 6ಕ್ಕೆ ಅವರು ಭಾರತಕ್ಕೆ ಮರಳಲಿದ್ದಾರಂತೆ. ಆ ಬಳಿಕ ‘ಸಲಾರ್’ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಅವರು ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ಅಕ್ಟೋಬರ್ 23 ಪ್ರಭಾಸ್ ಅವರ ಜನ್ಮದಿನ. ಅಂದು ಅವರು ಎಲ್ಲರ ಎದುರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಮಾಧ್ಯಮದ ಎದುರು ಬಂದಿಲ್ಲ. ಅವರು ಇನ್ನೂ ವಿದೇಶದಲ್ಲೇ ಇದ್ದಾರೆ ಎನ್ನುತ್ತಿವೆ ಮೂಲಗಳು. ಶೀಘ್ರವೇ ಅವರು ಭಾರತಕ್ಕೆ ಆಗಮಿಸಿ, ಸಿನಿಮಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಶಾಂತ್ ನೀಲ್ ಅವರು ಸಿನಿಮಾ ಪ್ರಚಾರಕ್ಕೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ‘ಕೆಜಿಎಫ್ 2’ ಚಿತ್ರಕ್ಕೆ ಅವರು ಭರ್ಜರಿ ಪ್ರಚಾರ ನೀಡಿದ್ದರು. ‘ಸಲಾರ್’ ಸಿನಿಮಾಗೂ ದೊಡ್ಡ ಪ್ರಮೋಷನ್ ಮಾಡಲು ಪ್ಲಾನ್ ನಡೆದಿದೆ. ‘ಸಲಾರ್’ ಸಿನಿಮಾ ಬಗ್ಗೆ ಹಿಂದಿ ಮಂದಿಗೂ ಕುತೂಹಲ ಇದೆ. ಇದೇ ಸಂದರ್ಭದಲ್ಲಿ ಶಾರುಖ್ ಖಾನ್ ನಟನೆಯ ‘ಡಂಕಿ’ ಕೂಡ ರಿಲೀಸ್ ಆಗುತ್ತಿದೆ. ಈ ಎಲ್ಲಾ ಕಾರಣದಿಂದ ಹಿಂದಿ ಬೆಲ್ಟ್​ನಲ್ಲಿ ಚಿತ್ರಕ್ಕೆ ದೊಡ್ಡ ಪ್ರಮೋಷನ್​ನ ಅಗತ್ಯತೆ ಇದೆ. ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು ಕನ್ನಡದವರು. ಹೀಗಾಗಿ, ಕರ್ನಾಟಕದಲ್ಲೂ ಸಿನಿಮಾಗೆ ಪ್ರಚಾರ ಬೇಕು.

ಇದನ್ನೂ ಓದಿ: ‘ಡಂಕಿ’ Vs ‘ಸಲಾರ್’ ಫೈಟ್​ಗೆ ಹೆದರಿ ಕಾಲ್ಕಿತ್ತ ಸಿನಿಮಾಗಳು; ಎದ್ದಿದೆ ದೊಡ್ಡ ಅಲೆ

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್​ ಸುಕುಮಾರನ್ ಸೇರಿ ಅನೇಕರು ನಟಿಸಿದ್ದಾರೆ. ರವಿ ಬಸ್ರೂರು ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಭುವನ್ ಗೌಡ ಅವರ ಛಾಯಾಗ್ರಹಣ ಮಾಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:23 pm, Sat, 28 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ