AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?

Salaar | Prabhas: ‘ಸಲಾರ್​’ ಸಿನಿಮಾದ ಕಥೆ ಬಗ್ಗೆ ಜನರಿಗೆ ಎಲ್ಲಿಲ್ಲದ ಕುತೂಹಲ ಇದೆ. ಕೆಲವು ವರದಿಗಳ ಪ್ರಕಾರ ಈ ಚಿತ್ರದಲ್ಲಿ ಪ್ರಭಾಸ್​ ಅವರಿಗೆ ದ್ವಿಪಾತ್ರ ಇದೆ ಎನ್ನಲಾಗುತ್ತಿದೆ.

ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
ಪ್ರಭಾಸ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 18, 2022 | 1:03 PM

ಖ್ಯಾತ ನಿರ್ದೇಶಕ ಪ್ರಶಾಂತ್​ ನೀಲ್ (Prashanth Neel) ಅವರ ಮುಂದಿನ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆದ ನಂತರ ಅವರ ಜನಪ್ರಿಯತೆ ವಿಶ್ವಾದ್ಯಂತ ಹಬ್ಬಿದೆ. ಪ್ರಸ್ತುತ ಅವರು ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಬಳಿಕ ಜ್ಯೂ. ಎನ್​ಟಿಆರ್​ ನಟನೆಯ ಸಿನಿಮಾದ ಶೂಟಿಂಗ್​  ಶುರುಮಾಡಲಿದ್ದಾರೆ. ಪ್ರಭಾಸ್​ (Prabhas) ಅವರಿಗೆ ‘ಸಲಾರ್​’ ಚಿತ್ರ ತುಂಬ ಮಹತ್ವದ್ದಾಗಿದೆ. ಯಾಕೆಂದರೆ, ‘ಬಾಹುಬಲಿ 2’ ಬಳಿಕ ಅವರ ಯಾವ ಸಿನಿಮಾವೂ ಗೆದ್ದಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್​’ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಸೋತವು. ಈಗ ಅವರಿಗೆ ತುರ್ತಾಗಿ ಒಂದು ಗೆಲುವಿನ ಅನಿವಾರ್ಯತೆ ಇದೆ. ಅದಕ್ಕಾಗಿ ಅವರು ‘ಸಲಾರ್​’ (Salaar) ಮೇಲೆ ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

‘ಸಲಾರ್​’ ಸಿನಿಮಾದ ಕಥೆ ಬಗ್ಗೆ ಜನರಿಗೆ ಎಲ್ಲಿಲ್ಲದ ಕುತೂಹಲ ಇದೆ. ಕೆಲವರು ಇದನ್ನು ‘ಉಗ್ರಂ’ ಸಿನಿಮಾದ ರಿಮೇಕ್​ ಎಂದು ಊಹಿಸಿದ್ದಾರೆ. ಇನ್ನೂ ಕೆಲವರು ಕೇಳುವ ಪ್ರಕಾರ ಈ ಚಿತ್ರದಲ್ಲಿ ಪ್ರಭಾಸ್​ ಅವರಿಗೆ ದ್ವಿಪಾತ್ರ ಇದೆಯಂತೆ! ಇಂಥದ್ದೊಂದು ಗಾಸಿಪ್​ ಈಗ ಎಲ್ಲೆಡೆ ಹರಡಿದೆ. ಅದು ನಿಜವೋ ಸುಳ್ಳೋ ಎಂಬ ಬಗ್ಗೆ ಚಿತ್ರತಂಡದಿಂದ ಸ್ಪಷ್ಟನೆ ಸಿಕ್ಕಿಲ್ಲ. ಅದಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್​ 2’ ಚಿತ್ರದ ಮುಂದುವರಿದ ಭಾಗವೇ ‘ಸಲಾರ್​’? ‘ಕೆಜಿಎಫ್​ 3’ ಪ್ರಶ್ನೆಗೆ ಉತ್ತರ ಹುಡುಕಿದ ಫ್ಯಾನ್ಸ್​

ಇದನ್ನೂ ಓದಿ
Image
Prashanth Neel Birthday: ಬೆಂಗಳೂರಿಗೆ ಬಂದು ಪ್ರಶಾಂತ್​ ನೀಲ್​ ಬರ್ತ್​ಡೇ ಪಾರ್ಟಿಯಲ್ಲಿ ಭಾಗಿಯಾದ ಪ್ರಭಾಸ್​
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?
Image
‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಆದ ದೊಡ್ಡ ನಷ್ಟ ಏನು? ಅಂತೂ ಬಾಯ್ಬಿಟ್ಟ ಪ್ಯಾನ್​ ಇಂಡಿಯಾ ಸ್ಟಾರ್​
Image
ಕಿಸ್​ ಮತ್ತು ಶರ್ಟ್​ ಲೆಸ್​ ದೃಶ್ಯದಲ್ಲಿ ಪ್ರಭಾಸ್​ಗೆ ಕಿರಿಕಿರಿ; ಈ ವಿಚಾರದಲ್ಲಿ ಅವರದ್ದು ಒಂದೇ ಒಂದು ಕಂಡೀಷನ್​

ದ್ವಿಪಾತ್ರ ಎಂದರೆ ಇದು ಸಾಮಾನ್ಯವಾದದ್ದಲ್ಲ. ಎರಡರಲ್ಲಿ ಒಂದು ಪಾತ್ರಕ್ಕಾಗಿ ಪ್ರಭಾ​ಸ್​ ಅವರು 22 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ. ಇನ್ನೊಂದು ಪಾತ್ರಕ್ಕಾಗಿ ಅವರೀಗ ತೂಕ ಇಳಿಸಿಕೊಳ್ಳುತ್ತಿದ್ದಾರೆ. ಈ ಎರಡು ಪಾತ್ರಗಳು ಸಿನಿಮಾದಲ್ಲಿ ಮುಖಾಮುಖಿ ಆಗಲಿವೆ. ಇಬ್ಬರ ನಡುವೆ ಕಾಳಗ ನಡೆಯಲಿದೆ. ಪ್ರಭಾಸ್​ ವರ್ಸಸ್​ ಪ್ರಭಾಸ್​ ಫೈಟ್​ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ ಎಂದೆಲ್ಲ ವರದಿ ಆಗಿದೆ. ಆದರೆ ಅಧಿಕೃತವಾಗಿ ಚಿತ್ರತಂಡದಿಂದ ಯಾರೊಬ್ಬರೂ ಈ ಕುರಿತು ಬಾಯಿ ಬಿಟ್ಟಿಲ್ಲದ ಕಾರಣ ಗಾಸಿಪ್​ಗೆ ಕಿವಿ ಕೊಡಬೇಕಾ ಅಥವಾ ಬಿಡಬೇಕಾ ಎಂಬುದು ಅಭಿಮಾನಿಗಳ ಆಯ್ಕೆಗೆ ಬಿಟ್ಟ ವಿಚಾರ.

ಇದನ್ನೂ ಓದಿ: ‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ವಿಜಯ್​ ಕಿರಗಂದೂರು ಅವರು ‘ಸಲಾರ್​’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಬಳಗದ ಬಹುತೇಕ ತಂತ್ರಜ್ಞರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಭುವನ್​ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:52 pm, Sat, 18 June 22

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್