AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಕ್ಕೆ ಹೋಯ್ತು ‘ಸಲಾರ್’ ಸಿನಿಮಾ ರಿಲೀಸ್ ದಿನಾಂಕ; ಟ್ವೀಟ್ ಮಾಡಿದ ತರಣ್ ಆದರ್ಶ್

‘ಸಲಾರ್’ ಚಿತ್ರ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಯಿತು. ‘ಕೆಜಿಎಫ್ 2’ ಕೆಲಸದಲ್ಲಿ ಪ್ರಶಾಂತ್ ನೀಲ್ ತೊಡಗಿಕೊಂಡರು. ಜೊತೆಗೆ ಪ್ರಭಾಸ್ ಸೆಟ್​ನಲ್ಲಿ ಗಾಯಕ್ಕೆ ಒಳಗಾಗಿ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಗುತ್ತಲೇ ಇತ್ತು.

ಮುಂದಕ್ಕೆ ಹೋಯ್ತು ‘ಸಲಾರ್’ ಸಿನಿಮಾ ರಿಲೀಸ್ ದಿನಾಂಕ; ಟ್ವೀಟ್ ಮಾಡಿದ ತರಣ್ ಆದರ್ಶ್
ಸಲಾರ್
ರಾಜೇಶ್ ದುಗ್ಗುಮನೆ
|

Updated on: Sep 02, 2023 | 12:46 PM

Share

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಈ ಚಿತ್ರ ರಿಲೀಸ್ ಆಗೋಕೆ ಇನ್ನು ಒಂದು ತಿಂಗಳು ಕೂಡ ಬಾಕಿ ಇಲ್ಲ. ಹೀಗಿರುವಾಗಲೇ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಬಾಲಿವುಡ್ ಬಾಕ್ಸ್ ಆಫೀಸ್ ಟ್ರೇಡ್ ವಿಷ್ಲೇಶಕ ತರಣ್ ಆದರ್ಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಂದೊಮ್ಮೆ ಈ ವಿಚಾರ ನಿಜವಾದಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಲಿದೆ.

‘ಸಲಾರ್’ ಚಿತ್ರ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಯಿತು. ‘ಕೆಜಿಎಫ್ 2’ ಕೆಲಸದಲ್ಲಿ ಪ್ರಶಾಂತ್ ನೀಲ್ ತೊಡಗಿಕೊಂಡರು. ಜೊತೆಗೆ ಪ್ರಭಾಸ್ ಸೆಟ್​ನಲ್ಲಿ ಗಾಯಕ್ಕೆ ಒಳಗಾಗಿ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಗುತ್ತಲೇ ಇತ್ತು. ಚಿತ್ರ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿತ್ತು. ಆದರೆ, ಸಿನಿಮಾನ ಅಂದುಕೊಂಡ ದಿನಾಂಕದಂದು ತೆರೆಗೆ ತರೋಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ತರಣ್ ಆದರ್ಶ್ ಅವರು, ‘ಸಲಾರ್ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿರುವುದು ಹೌದು’ ಎಂದಿದ್ದಾರೆ. ಇದಕ್ಕೆ ಕಮೆಂಟ್ ಮಾಡಿರುವ ಪ್ರಭಾಸ್ ಅಭಿಮಾನಿಗಳು ಅಳುತ್ತಿರುವ ಎಮೋಜಿಗಳನ್ನು ಹಾಕಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಸಲಾರ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಗ್ರಾಫಿಕ್ಸ್ ಕೆಲಸಗಳು ಇನ್ನು ಬಾಕಿ ಇವೆ ಎನ್ನಲಾಗಿದೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಕೂಡ ನೀಡಬೇಕಿದೆ. ಪ್ಯಾನ್ ಇಂಡಿಯಾ ಸಿನಿಮಾ ಆದ್ದರಿಂದ ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಮೋಷನ್ ಮಾಡಬೇಕಿದೆ. ಇದಕ್ಕೆ ಒಂದು ತಿಂಗಳು ಸಮಯ ಸಾಲುವುದಿಲ್ಲ. ಈ ಕಾರಣದಿಂದಲೇ ‘ಸಲಾರ್’ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಶೂಟಿಂಗ್​ನಲ್ಲೂ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ. ಭರ್ಜರಿ ಸೆಟ್ ಹಾಕಿ ಚಿತ್ರೀಕರಿಸಲಾಗುತ್ತಿದೆ. ನಾಗ್ ಅಶ್ವಿನ್ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು