AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಸಲಾರ್​​’ ಜೊತೆ ಕೇಳಿಬಂತು ಜ್ಯೋತಿಕಾ ಹೆಸರು; ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತು ಏನು?

Salaar: ಹಲವು ಭಾಷೆಯಲ್ಲಿ ಸಲಾರ್ ಚಿತ್ರ ಸಿದ್ಧವಾಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಹಾಗಾಗಿ ಎಲ್ಲ ಭಾಷೆಯ ಕಲಾವಿದರು ನಟಿಸಿದರೆ ಅದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

Prabhas: ‘ಸಲಾರ್​​’ ಜೊತೆ ಕೇಳಿಬಂತು ಜ್ಯೋತಿಕಾ ಹೆಸರು; ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತು ಏನು?
ಪ್ರಭಾಸ್​, ಜ್ಯೋತಿಕಾ, ಸೂರ್ಯ
ಮದನ್​ ಕುಮಾರ್​
|

Updated on: May 24, 2021 | 8:51 AM

Share

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕಿಂತ ಮುನ್ನವೇ ನಿರ್ದೇಶಕ ಪ್ರಶಾಂತ್​ ನೀಲ್​ ಅವರು ‘ಸಲಾರ್​’ ಸಿನಿಮಾ ಕೈಗೆತ್ತಿಕೊಂಡರು. ಈ ಚಿತ್ರಕ್ಕೆ ಪ್ರಭಾಸ್​ ಹೀರೋ ಎಂದು ತಿಳಿದ ತಕ್ಷಣ ಅಭಿಮಾನಿಗಳ ನಿರೀಕ್ಷೆ ನೂರು ಪಟ್ಟು ಹೆಚ್ಚಿತು. ನಾಯಕಿಯಾಗಿ ಶ್ರುತಿ ಹಾಸನ್​ ಆಯ್ಕೆ ಆದ ಬಳಿಕ ಇನ್ನಷ್ಟು ಹೈಪ್​ ಪಡೆದುಕೊಂಡಿತು. ಈ ಸಿನಿಮಾದ ಪಾತ್ರವರ್ಗದಲ್ಲಿ ಇನ್ನೂ ಅನೇಕ ಸ್ಟಾರ್​ ಕಲಾವಿದರು ನಟಿಸಲಿದ್ದಾರೆ. ಆ ಬಗ್ಗೆ ಚಿತ್ರತಂಡವೇ ಅಧಿಕೃತವಾಗಿ ಮಾಹಿತಿ ನೀಡಬೇಕಿದೆ. ಆದರೆ ಅದಕ್ಕೂ ಮುನ್ನ ಹಲವು ಸುದ್ದಿಗಳು ಹರಿದಾಡುತ್ತಿವೆ. ಕಾಲಿವುಡ್​ನ ಸ್ಟಾರ್​ ನಟಿ ಜ್ಯೋತಿಕಾ ಹೆಸರು ಕೂಡ ಕೇಳಿಬಂದಿದೆ.

ಸಲಾರ್​ ಬಹುನಿರೀಕ್ಷಿತ ಚಿತ್ರವಾದ್ದರಿಂದ ಅದರ ಬಗ್ಗೆ ಅನೇಕ ಅಂತೆ-ಕಂತೆಗಳು ಹರಿದಾಡುತ್ತಿವೆ. ಪ್ರಭಾಸ್​ ಮತ್ತು ಶ್ರುತಿ ಹಾಸನ್​ ಪಾತ್ರದ ಬಗ್ಗೆಯೂ ಗುಸುಗುಸು ಕೇಳಿಬಂದಿದೆ. ಅದೇ ರೀತಿ, ಈ ಚಿತ್ರದಲ್ಲಿ ಪ್ರಭಾಸ್​ ಜೊತೆ ಜ್ಯೋತಿಕಾ ಅಭಿನಯಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ಪ್ರಭಾಸ್​ಗೆ ಅಕ್ಕನಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬುದು ಗಾಸಿಪ್​. ಆದರೆ ಅವರು ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬುದು ಮತ್ತೊಂದು ಮೂಲದ ಮಾಹಿತಿ.

ಜ್ಯೋತಿಕಾ ‘ಸಲಾರ್​’ ಚಿತ್ರದಲ್ಲಿ ನಟಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಸದ್ಯ ಚಿತ್ರತಂಡ ಪ್ರತಿಕ್ರಿಯೆ ನೀಡಿಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಲವು ಭಾಷೆಯಲ್ಲಿ ಚಿತ್ರ ಸಿದ್ಧವಾಗುತ್ತಿದೆ. ಹಾಗಾಗಿ ಎಲ್ಲ ಭಾಷೆಯ ಕಲಾವಿದರು ನಟಿಸಿದರೆ ಅದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ. ಆ ದೃಷ್ಟಿಯಿಂದ ನೋಡಿದರೆ ಇದರಲ್ಲಿ ಪರಭಾಷೆಯ ಹಲವು ಕಲಾವಿದರು ಬಣ್ಣ ಹಚ್ಚುವುದು ಖಚಿತ. ಅದೇನೇ ಇದ್ದರೂ ನಿರ್ದೇಶಕ ಪ್ರಶಾಂತ್​ ನೀಲ್​ ಅಥವಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ತಿಳಿಸಿದ ಮೇಲಷ್ಟೇ ಅಧಿಕೃತ ಆಗಲಿದೆ.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ಪ್ರಭಾಸ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.2022ರ ಏ.14ರಂದು ಸಲಾರ್​ ತೆರೆಕಾಣಲಿದೆ. ಅಂದಾಜು 150 ಕೋಟಿ ರೂ. ಬಜೆಟ್​ನಲ್ಲಿ ಚಿತ್ರ ತಯಾರಾಗಲಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಭಾಸ್​ ಫಸ್ಟ್​ಲುಕ್​ ಪೋಸ್ಟರ್​ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

ಇದನ್ನೂ ಓದಿ:

ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ

ಕೆಜಿಎಫ್ 2-ಸಲಾರ್​ಗೂ ಇದೆ ಲಿಂಕ್​; ವಿಶೇಷ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ನೀಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ