AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Teaser: ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದ ‘ಸಲಾರ್’ ಟೀಸರ್; ಸಾಮ್ಯತೆಗಳೇನು?

ಪ್ರಶಾಂತ್ ನೀಲ್ ನಿರ್ದೇಶನ, ರವಿ ಬಸ್ರೂರ್ ಸಂಗೀತ ನಿರ್ದೇಶನ, ಭುವನ್ ಗೌಡ ಛಾಯಾಗ್ರಹಣ ‘ಸಲಾರ್’ನಲ್ಲೂ ಮುಂದುವರಿದಿದೆ. ಈ ಕಾರಣಕ್ಕೆ ಹಲವು ಸಾಮ್ಯತೆಗಳು ಕಾಣುತ್ತಿವೆ.

Salaar Teaser: ‘ಕೆಜಿಎಫ್ 2’ ಚಿತ್ರವನ್ನು ನೆನಪಿಸಿದ ‘ಸಲಾರ್’ ಟೀಸರ್; ಸಾಮ್ಯತೆಗಳೇನು?
ಪ್ರಭಾಸ್-ಯಶ್
ರಾಜೇಶ್ ದುಗ್ಗುಮನೆ
|

Updated on:Jul 06, 2023 | 8:20 AM

Share

‘ಕೆಜಿಎಫ್ 2’ ಸಿನಿಮಾ ಧೂಳೆಬ್ಬಿಸಿತ್ತು. ಪ್ರಶಾಂತ್ ನೀಲ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಬಹುತೇಕ ಅದೇ ತಾಂತ್ರಿಕವರ್ಗದೊಂದಿಗೆ ‘ಸಲಾರ್’ ಸಿನಿಮಾ (Salaar Movie) ಸಿದ್ಧವಾಗುತ್ತಿದೆ. ‘ಕೆಜಿಎಫ್​ 2’ ನಿರ್ಮಾಣ ಮಾಡಿದ ಹೊಂಬಾಳೆ ಫಿಲ್ಮ್ಸ್​ ಪ್ರಭಾಸ್ ಚಿತ್ರಕ್ಕೂ ಬಂಡವಾಳ ಹೂಡುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನ, ರವಿ ಬಸ್ರೂರ್ ಸಂಗೀತ ನಿರ್ದೇಶನ, ಭುವನ್ ಗೌಡ ಛಾಯಾಗ್ರಹಣ ಇಲ್ಲಿಯೂ ಮುಂದುವರಿದಿದೆ. ಈ ಕಾರಣಕ್ಕೆ ಹಲವು ಸಾಮ್ಯತೆಗಳು ಕಾಣುತ್ತಿವೆ. ಆ ಬಗ್ಗೆ ಇಲ್ಲಿದೆ ವಿವರ.

  1. ‘ಕೆಜಿಎಫ್ 2’ ಚಿತ್ರದ ಸೆಟ್​ಗಳು ಈಗಲೂ ಪ್ರೇಕ್ಷಕರ ಕಣ್ಣಿಗೆ ಕಟ್ಟುವಂತಿದೆ. ‘ಸಲಾರ್’ ಟೀಸರ್ ನೋಡಿದ ಅನೇಕರಿಗೆ ಯಶ್ ಸಿನಿಮಾದ ಸೆಟ್​​ಗಳು ನೆನಪಿಗೆ ಬಂದಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಹುಟ್ಟಿದೆ.
  2. ಟೀನೂ ಆನಂದ್ ಅವರ ನಿರೂಪಣೆಯಲ್ಲಿ ‘ಸಲಾರ್’ ಟೀಸರ್ ಮೂಡಿ ಬಂದಿದೆ. ಇಂಗ್ಲಿಷ್ ವಿವರಣೆಯಲ್ಲಿ ಟೀಸರ್ ಮೂಡಿಬಂದಿದೆ. ‘ಕೆಜಿಎಫ್’ ಚಿತ್ರದಲ್ಲಿ ಅನಂತ್ ನಾಗ್ ಹಾಗೂ ‘ಕೆಜಿಎಫ್ 2’ ಚಿತ್ರದಲ್ಲಿ ಪ್ರಕಾಶ್ ರಾಜ್ ವಿವರಣೆ ಇತ್ತು.
  3. ‘ಸಲಾರ್’ ಸಿನಿಮಾ ಕೂಡ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ. ‘ಕೆಜಿಎಫ್’ ಸಿನಿಮಾ ಕೂಡ ಇದೇ ಶೈಲಿಯಲ್ಲಿ ಸಿದ್ಧಗೊಂಡಿತ್ತು.
  4. ‘ಕೆಜಿಎಫ್​ 2’ ಗಣಿಯ ಸೆಟ್​ ಒಂದು ಬರುತ್ತವೆ. ಚಿತ್ರದುದ್ದಕ್ಕೂ ಇದೇ ಹೈಲೈಟ್ ಆಗಿತ್ತು. ಇದೇ ಮಾದರಿಯ ಸೆಟ್​ ‘ಸಲಾರ್’ ಚಿತ್ರದಲ್ಲೂ ಇದೆ. ಇವೆರಡರ ಮಧ್ಯೆ ಹೋಲಿಕೆ ಇದೆ.
  5. ಮೇಕಿಂಗ್ ವಿಚಾರದಲ್ಲೂ ಪ್ರಶಾಂತ್ ನೀಲ್​ ‘ಕೆಜಿಎಫ್ 2’ ತಂತ್ರವನ್ನೇ ಬಳಸಿದಂತಿದೆ. ಹೀಗಾಗಿ, ಈ ಚಿತ್ರವನ್ನು ಪ್ರೇಕ್ಷಕರು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.
  6. ‘ಕೆಜಿಎಫ್’ ಎರಡು ಪಾರ್ಟ್​ಗಳಲ್ಲಿ ಮೂಡಿ ಬಂದಿತ್ತು. ಮೂರನೇ ಪಾರ್ಟ್ ಬರೋಕೆ ಸಿದ್ಧವಾಗಿದೆ. ‘ಸಲಾರ್’ ಚಿತ್ರ ಕೂಡ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ. ಮೊದಲ ಪಾರ್ಟ್​ಗೆ ‘ಸಲಾರ್​: ಸೀಸ್​ಫೈರ್’ ಎಂದು ಶೀರ್ಷಿಕೆ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Thu, 6 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?