AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​
ಸಲಾರ್
Follow us
ರಾಜೇಶ್ ದುಗ್ಗುಮನೆ
|

Updated on: Nov 12, 2023 | 1:06 PM

ಪ್ರಭಾಸ್ (Prabhas) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲು ‘ಹೊಂಬಾಳೆ ಫಿಲ್ಮ್ಸ್​’ ರೆಡಿ ಆಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ನೀಡಲಾಗುತ್ತಿದೆ. ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಎರಡು ಸೂಪರ್ ಸುದ್ದಿ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಟ್ರೇಲರ್ ರಿಲೀಸ್

ಡಿಸೆಂಬರ್ 1ರಂದು ‘ಸಲಾರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಇಂದು ಅಧಿಕೃತ ಮಾಡಿದೆ. ‘ಸಲಾರ್ ಸೀಸ್​ಫೈರ್ ಟ್ರೇಲರ್ ಡಿಸೆಂಬರ್ 1ರ ಸಂಜೆ 7:19ಕ್ಕೆ ರಿಲೀಸ್ ಆಗಲಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಹಂಚಿಕೆ ವಿಚಾರ

‘ಸಲಾರ್’ ಸಿನಿಮಾದ ಕಾರ್ನಾಟಕದ ಹಂಚಿಕೆಯನ್ನು ತಾವೇ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭವ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ ಸಲಾರ್‌’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಐದು ಭಾಷೆ

‘ಸಲಾರ್’ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್ ಆಗುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುವ ಸಾಧ್ಯತೆ ಇದೆ.

ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ