AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​
ಸಲಾರ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 1:06 PM

Share

ಪ್ರಭಾಸ್ (Prabhas) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲು ‘ಹೊಂಬಾಳೆ ಫಿಲ್ಮ್ಸ್​’ ರೆಡಿ ಆಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ನೀಡಲಾಗುತ್ತಿದೆ. ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಎರಡು ಸೂಪರ್ ಸುದ್ದಿ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಟ್ರೇಲರ್ ರಿಲೀಸ್

ಡಿಸೆಂಬರ್ 1ರಂದು ‘ಸಲಾರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಇಂದು ಅಧಿಕೃತ ಮಾಡಿದೆ. ‘ಸಲಾರ್ ಸೀಸ್​ಫೈರ್ ಟ್ರೇಲರ್ ಡಿಸೆಂಬರ್ 1ರ ಸಂಜೆ 7:19ಕ್ಕೆ ರಿಲೀಸ್ ಆಗಲಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಹಂಚಿಕೆ ವಿಚಾರ

‘ಸಲಾರ್’ ಸಿನಿಮಾದ ಕಾರ್ನಾಟಕದ ಹಂಚಿಕೆಯನ್ನು ತಾವೇ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭವ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ ಸಲಾರ್‌’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಐದು ಭಾಷೆ

‘ಸಲಾರ್’ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್ ಆಗುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುವ ಸಾಧ್ಯತೆ ಇದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ