AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​
ಸಲಾರ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 1:06 PM

Share

ಪ್ರಭಾಸ್ (Prabhas) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲು ‘ಹೊಂಬಾಳೆ ಫಿಲ್ಮ್ಸ್​’ ರೆಡಿ ಆಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ನೀಡಲಾಗುತ್ತಿದೆ. ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಎರಡು ಸೂಪರ್ ಸುದ್ದಿ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಟ್ರೇಲರ್ ರಿಲೀಸ್

ಡಿಸೆಂಬರ್ 1ರಂದು ‘ಸಲಾರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಇಂದು ಅಧಿಕೃತ ಮಾಡಿದೆ. ‘ಸಲಾರ್ ಸೀಸ್​ಫೈರ್ ಟ್ರೇಲರ್ ಡಿಸೆಂಬರ್ 1ರ ಸಂಜೆ 7:19ಕ್ಕೆ ರಿಲೀಸ್ ಆಗಲಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಹಂಚಿಕೆ ವಿಚಾರ

‘ಸಲಾರ್’ ಸಿನಿಮಾದ ಕಾರ್ನಾಟಕದ ಹಂಚಿಕೆಯನ್ನು ತಾವೇ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭವ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ ಸಲಾರ್‌’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಐದು ಭಾಷೆ

‘ಸಲಾರ್’ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್ ಆಗುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುವ ಸಾಧ್ಯತೆ ಇದೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ