AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Salaga: ಎಲ್ಲ ಕಡೆಗಳಲ್ಲೂ ‘ಸಲಗ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​
ದುನಿಯಾ ವಿಜಯ್​
TV9 Web
| Updated By: ಮದನ್​ ಕುಮಾರ್​|

Updated on: Nov 07, 2021 | 2:04 PM

Share

ನಟ ದುನಿಯಾ ವಿಜಯ್​ ಅವರು ಆರಂಭದ ದಿನಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.​ ‘ದುನಿಯಾ’ ಸಿನಿಮಾದಿಂದ ಹೀರೋ ಆದ ಬಳಿಕ ಅವರು ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಇತ್ತೀಚೆಗೆ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡ ‘ಸಲಗ’ ಸಿನಿಮಾ ಮೂಲಕ ಅವರು ನಿರ್ದೇಶಕನಾಗಿಯೂ ಬಡ್ತಿ ಪಡೆದುಕೊಂಡರು. ಇಷ್ಟೆಲ್ಲ ಆದ ಬಳಿಕ ದುನಿಯಾ ವಿಜಯ್​ ಮತ್ತೆ ವಿಲನ್​ ಆಗುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ತೆಲುಗಿನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್​ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಮೂಲಗಳ ಪ್ರಕಾರ ದುನಿಯಾ ವಿಜಯ್​ ಅವರಿಗೆ ವಿಲನ್​ ಪಾತ್ರಕ್ಕಾಗಿ ಬುಲಾವ್​ ಬಂದಿದೆ.

ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದುನಿಯಾ ವಿಜಯ್​ ಆಯ್ಕೆ ಆಗಿರುವ ಬಗ್ಗೆ ನಿರ್ಮಾಪಕರೇ ಅಧಿಕೃತವಾಗಿ ಅನೌನ್ಸ್​ ಮಾಡಬೇಕಿದೆ ಎಂದು ತೆಲುಗು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಸುದ್ದಿ ಕೇಳಿ ದುನಿಯಾ ವಿಜಯ್​ ಫ್ಯಾನ್ಸ್​ ಎಗ್ಸೈಟ್​ ಆಗುವುದು ಗ್ಯಾರಂಟಿ. ಖ್ಯಾತ ಕಲಾವಿದರ ಬೇರೆ ಭಾಷೆಯ ಚಿತ್ರರಂಗದಲ್ಲಿ ವಿಲನ್​ ರೋಲ್​ ಮಾಡುವ ಟ್ರೆಂಡ್​ ಜೋರಾಗಿದೆ. ಡಾಲಿ ಧನಂಜಯ ಅವರು ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಖಳನಾಗಿ ಕಾಣಿಸಿಕೊಳ್ಳಲಿರುವುದರಿಂದ ಆ ಸಿನಿಮಾದ ಮೇಲಿನ ಹೈಪ್​ ಹೆಚ್ಚಲು ಕಾರಣ ಆಗಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಹೀರೋ ಆಗಿ ಅವರು ಒಪ್ಪಿಕೊಳ್ಳಲಿರುವ ಹೊಸ ಸಿನಿಮಾ ಯಾವುದು? ನಿರ್ದೇಶಕನಾಗಿ ಅವರ ಮುಂದಿನ ಪ್ರಾಜೆಕ್ಟ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಅದರ ನಡುವೆಯೇ ಅವರು ಬಾಲಕೃಷ್ಣ ನಟನೆಯ ಸಿನಿಮಾದಲ್ಲಿ ವಿಲನ್​ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದ್ದು, ಅಧಿಕೃತ ಘೋಷಣೆಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ

‘ಸಲಗ ಚಿತ್ರವನ್ನು ತುಳಿಯೋಕೆ ಆಗಲ್ಲ, ಸುಮ್ಮನೆ ಸಣ್ಣತನ ತೋರಿಸಬೇಡಿ’: ದುನಿಯಾ ವಿಜಯ್​ ಎಚ್ಚರಿಕೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​