AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Salaga: ಎಲ್ಲ ಕಡೆಗಳಲ್ಲೂ ‘ಸಲಗ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​
ದುನಿಯಾ ವಿಜಯ್​
TV9 Web
| Edited By: |

Updated on: Nov 07, 2021 | 2:04 PM

Share

ನಟ ದುನಿಯಾ ವಿಜಯ್​ ಅವರು ಆರಂಭದ ದಿನಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.​ ‘ದುನಿಯಾ’ ಸಿನಿಮಾದಿಂದ ಹೀರೋ ಆದ ಬಳಿಕ ಅವರು ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಇತ್ತೀಚೆಗೆ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡ ‘ಸಲಗ’ ಸಿನಿಮಾ ಮೂಲಕ ಅವರು ನಿರ್ದೇಶಕನಾಗಿಯೂ ಬಡ್ತಿ ಪಡೆದುಕೊಂಡರು. ಇಷ್ಟೆಲ್ಲ ಆದ ಬಳಿಕ ದುನಿಯಾ ವಿಜಯ್​ ಮತ್ತೆ ವಿಲನ್​ ಆಗುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ತೆಲುಗಿನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್​ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಮೂಲಗಳ ಪ್ರಕಾರ ದುನಿಯಾ ವಿಜಯ್​ ಅವರಿಗೆ ವಿಲನ್​ ಪಾತ್ರಕ್ಕಾಗಿ ಬುಲಾವ್​ ಬಂದಿದೆ.

ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದುನಿಯಾ ವಿಜಯ್​ ಆಯ್ಕೆ ಆಗಿರುವ ಬಗ್ಗೆ ನಿರ್ಮಾಪಕರೇ ಅಧಿಕೃತವಾಗಿ ಅನೌನ್ಸ್​ ಮಾಡಬೇಕಿದೆ ಎಂದು ತೆಲುಗು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಸುದ್ದಿ ಕೇಳಿ ದುನಿಯಾ ವಿಜಯ್​ ಫ್ಯಾನ್ಸ್​ ಎಗ್ಸೈಟ್​ ಆಗುವುದು ಗ್ಯಾರಂಟಿ. ಖ್ಯಾತ ಕಲಾವಿದರ ಬೇರೆ ಭಾಷೆಯ ಚಿತ್ರರಂಗದಲ್ಲಿ ವಿಲನ್​ ರೋಲ್​ ಮಾಡುವ ಟ್ರೆಂಡ್​ ಜೋರಾಗಿದೆ. ಡಾಲಿ ಧನಂಜಯ ಅವರು ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಖಳನಾಗಿ ಕಾಣಿಸಿಕೊಳ್ಳಲಿರುವುದರಿಂದ ಆ ಸಿನಿಮಾದ ಮೇಲಿನ ಹೈಪ್​ ಹೆಚ್ಚಲು ಕಾರಣ ಆಗಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಹೀರೋ ಆಗಿ ಅವರು ಒಪ್ಪಿಕೊಳ್ಳಲಿರುವ ಹೊಸ ಸಿನಿಮಾ ಯಾವುದು? ನಿರ್ದೇಶಕನಾಗಿ ಅವರ ಮುಂದಿನ ಪ್ರಾಜೆಕ್ಟ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಅದರ ನಡುವೆಯೇ ಅವರು ಬಾಲಕೃಷ್ಣ ನಟನೆಯ ಸಿನಿಮಾದಲ್ಲಿ ವಿಲನ್​ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದ್ದು, ಅಧಿಕೃತ ಘೋಷಣೆಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ

‘ಸಲಗ ಚಿತ್ರವನ್ನು ತುಳಿಯೋಕೆ ಆಗಲ್ಲ, ಸುಮ್ಮನೆ ಸಣ್ಣತನ ತೋರಿಸಬೇಡಿ’: ದುನಿಯಾ ವಿಜಯ್​ ಎಚ್ಚರಿಕೆ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ