Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Salaga: ಎಲ್ಲ ಕಡೆಗಳಲ್ಲೂ ‘ಸಲಗ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​
ದುನಿಯಾ ವಿಜಯ್​
Follow us
| Updated By: ಮದನ್​ ಕುಮಾರ್​

Updated on: Nov 07, 2021 | 2:04 PM

ನಟ ದುನಿಯಾ ವಿಜಯ್​ ಅವರು ಆರಂಭದ ದಿನಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.​ ‘ದುನಿಯಾ’ ಸಿನಿಮಾದಿಂದ ಹೀರೋ ಆದ ಬಳಿಕ ಅವರು ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಇತ್ತೀಚೆಗೆ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡ ‘ಸಲಗ’ ಸಿನಿಮಾ ಮೂಲಕ ಅವರು ನಿರ್ದೇಶಕನಾಗಿಯೂ ಬಡ್ತಿ ಪಡೆದುಕೊಂಡರು. ಇಷ್ಟೆಲ್ಲ ಆದ ಬಳಿಕ ದುನಿಯಾ ವಿಜಯ್​ ಮತ್ತೆ ವಿಲನ್​ ಆಗುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ತೆಲುಗಿನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್​ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಮೂಲಗಳ ಪ್ರಕಾರ ದುನಿಯಾ ವಿಜಯ್​ ಅವರಿಗೆ ವಿಲನ್​ ಪಾತ್ರಕ್ಕಾಗಿ ಬುಲಾವ್​ ಬಂದಿದೆ.

ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದುನಿಯಾ ವಿಜಯ್​ ಆಯ್ಕೆ ಆಗಿರುವ ಬಗ್ಗೆ ನಿರ್ಮಾಪಕರೇ ಅಧಿಕೃತವಾಗಿ ಅನೌನ್ಸ್​ ಮಾಡಬೇಕಿದೆ ಎಂದು ತೆಲುಗು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಸುದ್ದಿ ಕೇಳಿ ದುನಿಯಾ ವಿಜಯ್​ ಫ್ಯಾನ್ಸ್​ ಎಗ್ಸೈಟ್​ ಆಗುವುದು ಗ್ಯಾರಂಟಿ. ಖ್ಯಾತ ಕಲಾವಿದರ ಬೇರೆ ಭಾಷೆಯ ಚಿತ್ರರಂಗದಲ್ಲಿ ವಿಲನ್​ ರೋಲ್​ ಮಾಡುವ ಟ್ರೆಂಡ್​ ಜೋರಾಗಿದೆ. ಡಾಲಿ ಧನಂಜಯ ಅವರು ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಖಳನಾಗಿ ಕಾಣಿಸಿಕೊಳ್ಳಲಿರುವುದರಿಂದ ಆ ಸಿನಿಮಾದ ಮೇಲಿನ ಹೈಪ್​ ಹೆಚ್ಚಲು ಕಾರಣ ಆಗಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಹೀರೋ ಆಗಿ ಅವರು ಒಪ್ಪಿಕೊಳ್ಳಲಿರುವ ಹೊಸ ಸಿನಿಮಾ ಯಾವುದು? ನಿರ್ದೇಶಕನಾಗಿ ಅವರ ಮುಂದಿನ ಪ್ರಾಜೆಕ್ಟ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಅದರ ನಡುವೆಯೇ ಅವರು ಬಾಲಕೃಷ್ಣ ನಟನೆಯ ಸಿನಿಮಾದಲ್ಲಿ ವಿಲನ್​ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದ್ದು, ಅಧಿಕೃತ ಘೋಷಣೆಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ

‘ಸಲಗ ಚಿತ್ರವನ್ನು ತುಳಿಯೋಕೆ ಆಗಲ್ಲ, ಸುಮ್ಮನೆ ಸಣ್ಣತನ ತೋರಿಸಬೇಡಿ’: ದುನಿಯಾ ವಿಜಯ್​ ಎಚ್ಚರಿಕೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ