AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್, ‘ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್
TV9 Web
| Edited By: |

Updated on: Oct 15, 2021 | 10:25 PM

Share

ಸ್ಟಾರ್​ ನಟರ ಸಿನಿಮಾಗಳಿಗೆ ಪೈರಸಿ ಸಮಸ್ಯೆ ಬಹಳ ಗಂಭೀರವಾಗಿ ಕಾಡುತ್ತಿದೆ. ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಕಾಪಿ ಬಿಡುಗಡೆ ಆಗುತ್ತಿದೆ. ಈಗ ಬಿಡುಗಡೆಯಾದ ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗೂ ಪೈರಸಿ ಕಾಟ ತಟ್ಟಿದೆ.

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ. ಕನ್ನಡ ರಾಕರ್ಸ್ ಹೆಸರಲ್ಲಿ ಕನ್ನಡದ ಹೊಚ್ಚಹೊಸ ಚಿತ್ರಗಳು ಪೈರಸಿ ಆಗಿದೆ. ಎರಡೂ ಚಿತ್ರಗಳನ್ನು ಪೈರಸಿ ಮಾಡಿ ಟೆಲಿಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಯಾವ ರೀತಿಯ ಕ್ರಮ ಕೈಗೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡಿತ್ತು. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿತ್ತು.

ಪೈರಸಿ ತಡೆಯುವ ಉದ್ದೇಶದಿಂದ ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಇತ್ತೀಚೆಗೆ ಪೈರಸಿ ಬಗ್ಗೆ ಮಾತನಾಡಿದ್ದರು. ‘ಅವರ ಬಗ್ಗೆ ಏನು ಮಾತಾಡೋಣ? ಕೋವಿಡ್​ಗೆ ಭಯ ಬೀಳದೇ ಬದುಕಿ ಬಂದಿದ್ದೇನೆ. ಇದ್ಯಾವುದು ಕಿತ್ತೋಗಿರೋ ಪೈರಸಿಗೆ ಏಕೆ ಭಯ ಬೀಳಲಿ? ಪೈರಸಿ ಮಾಡಲಿ ಬಿಡಿ. ಅದಕ್ಕೆಲ್ಲ ನಾನು ಹೆದರಲ್ಲ. ಮನೆಯವರೇ ಕಳ್ಳರನ್ನು ಒಳಗೆ ಬಿಟ್ಟಾಗ ನಾವು ಕಳ್ಳರಿಗೆ ಬಯ್ಯೋದು ತಪ್ಪಾಗುತ್ತದೆ’ ಎಂದು ಮಾರ್ಮಿಕವಾಗಿ ಮಾತನಾಡಿದ್ದರು.

ಇದನ್ನೂ ಓದಿ: ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

‘ಕೊವಿಡ್​ಗೆ ಹೆದರಲಿಲ್ಲ, ಕಿತ್ತೋಗಿರೋ ಪೈರಸಿಗೆ ಏಕೆ ಹೆದರಲಿ?’ ಸುದೀಪ್​

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ