AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್, ‘ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್
TV9 Web
| Edited By: |

Updated on: Oct 15, 2021 | 10:25 PM

Share

ಸ್ಟಾರ್​ ನಟರ ಸಿನಿಮಾಗಳಿಗೆ ಪೈರಸಿ ಸಮಸ್ಯೆ ಬಹಳ ಗಂಭೀರವಾಗಿ ಕಾಡುತ್ತಿದೆ. ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಕಾಪಿ ಬಿಡುಗಡೆ ಆಗುತ್ತಿದೆ. ಈಗ ಬಿಡುಗಡೆಯಾದ ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗೂ ಪೈರಸಿ ಕಾಟ ತಟ್ಟಿದೆ.

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ. ಕನ್ನಡ ರಾಕರ್ಸ್ ಹೆಸರಲ್ಲಿ ಕನ್ನಡದ ಹೊಚ್ಚಹೊಸ ಚಿತ್ರಗಳು ಪೈರಸಿ ಆಗಿದೆ. ಎರಡೂ ಚಿತ್ರಗಳನ್ನು ಪೈರಸಿ ಮಾಡಿ ಟೆಲಿಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಯಾವ ರೀತಿಯ ಕ್ರಮ ಕೈಗೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡಿತ್ತು. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿತ್ತು.

ಪೈರಸಿ ತಡೆಯುವ ಉದ್ದೇಶದಿಂದ ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಇತ್ತೀಚೆಗೆ ಪೈರಸಿ ಬಗ್ಗೆ ಮಾತನಾಡಿದ್ದರು. ‘ಅವರ ಬಗ್ಗೆ ಏನು ಮಾತಾಡೋಣ? ಕೋವಿಡ್​ಗೆ ಭಯ ಬೀಳದೇ ಬದುಕಿ ಬಂದಿದ್ದೇನೆ. ಇದ್ಯಾವುದು ಕಿತ್ತೋಗಿರೋ ಪೈರಸಿಗೆ ಏಕೆ ಭಯ ಬೀಳಲಿ? ಪೈರಸಿ ಮಾಡಲಿ ಬಿಡಿ. ಅದಕ್ಕೆಲ್ಲ ನಾನು ಹೆದರಲ್ಲ. ಮನೆಯವರೇ ಕಳ್ಳರನ್ನು ಒಳಗೆ ಬಿಟ್ಟಾಗ ನಾವು ಕಳ್ಳರಿಗೆ ಬಯ್ಯೋದು ತಪ್ಪಾಗುತ್ತದೆ’ ಎಂದು ಮಾರ್ಮಿಕವಾಗಿ ಮಾತನಾಡಿದ್ದರು.

ಇದನ್ನೂ ಓದಿ: ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

‘ಕೊವಿಡ್​ಗೆ ಹೆದರಲಿಲ್ಲ, ಕಿತ್ತೋಗಿರೋ ಪೈರಸಿಗೆ ಏಕೆ ಹೆದರಲಿ?’ ಸುದೀಪ್​

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ