AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ.

‘ಸಲಗ’ ಮತ್ತು ‘ಕೋಟಿಗೊಬ್ಬ 3’ಗೆ ಕಾಡಿದ ಪೈರಸಿ ಕಾಟ; ರಿಲೀಸ್​ ಆದ ದಿನವೇ ಅಪ್ಲೋಡ್​ ಆಯ್ತು ಸಿನಿಮಾ ಕಾಪಿ
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್, ‘ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್
TV9 Web
| Edited By: |

Updated on: Oct 15, 2021 | 10:25 PM

Share

ಸ್ಟಾರ್​ ನಟರ ಸಿನಿಮಾಗಳಿಗೆ ಪೈರಸಿ ಸಮಸ್ಯೆ ಬಹಳ ಗಂಭೀರವಾಗಿ ಕಾಡುತ್ತಿದೆ. ಸಿನಿಮಾ ರಿಲೀಸ್ ಆದ ದಿನವೇ ಪೈರಸಿ ಕಾಪಿ ಬಿಡುಗಡೆ ಆಗುತ್ತಿದೆ. ಈಗ ಬಿಡುಗಡೆಯಾದ ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾಗೂ ಪೈರಸಿ ಕಾಟ ತಟ್ಟಿದೆ.

ಅಕ್ಟೋಬರ್​ 14ರಂದು ರಿಲೀಸ್​ ಆದ ‘ಸಲಗ’ ಮತ್ತು ಇಂದು (ಅಕ್ಟೋಬರ್ 15) ರಿಲೀಸ್ ಆದ ‘ಕೋಟಿಗೊಬ್ಬ 3’ಗೆ ಭಾರೀ ಹೊಡೆತ ಕೊಟ್ಟಿದೆ. ಕನ್ನಡ ರಾಕರ್ಸ್ ಹೆಸರಲ್ಲಿ ಕನ್ನಡದ ಹೊಚ್ಚಹೊಸ ಚಿತ್ರಗಳು ಪೈರಸಿ ಆಗಿದೆ. ಎರಡೂ ಚಿತ್ರಗಳನ್ನು ಪೈರಸಿ ಮಾಡಿ ಟೆಲಿಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಯಾವ ರೀತಿಯ ಕ್ರಮ ಕೈಗೊಳ್ಳುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡಿತ್ತು. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿತ್ತು.

ಪೈರಸಿ ತಡೆಯುವ ಉದ್ದೇಶದಿಂದ ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ.

ಇತ್ತೀಚೆಗೆ ಪೈರಸಿ ಬಗ್ಗೆ ಮಾತನಾಡಿದ್ದರು. ‘ಅವರ ಬಗ್ಗೆ ಏನು ಮಾತಾಡೋಣ? ಕೋವಿಡ್​ಗೆ ಭಯ ಬೀಳದೇ ಬದುಕಿ ಬಂದಿದ್ದೇನೆ. ಇದ್ಯಾವುದು ಕಿತ್ತೋಗಿರೋ ಪೈರಸಿಗೆ ಏಕೆ ಭಯ ಬೀಳಲಿ? ಪೈರಸಿ ಮಾಡಲಿ ಬಿಡಿ. ಅದಕ್ಕೆಲ್ಲ ನಾನು ಹೆದರಲ್ಲ. ಮನೆಯವರೇ ಕಳ್ಳರನ್ನು ಒಳಗೆ ಬಿಟ್ಟಾಗ ನಾವು ಕಳ್ಳರಿಗೆ ಬಯ್ಯೋದು ತಪ್ಪಾಗುತ್ತದೆ’ ಎಂದು ಮಾರ್ಮಿಕವಾಗಿ ಮಾತನಾಡಿದ್ದರು.

ಇದನ್ನೂ ಓದಿ: ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

‘ಕೊವಿಡ್​ಗೆ ಹೆದರಲಿಲ್ಲ, ಕಿತ್ತೋಗಿರೋ ಪೈರಸಿಗೆ ಏಕೆ ಹೆದರಲಿ?’ ಸುದೀಪ್​

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ