‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

ದುನಿಯಾ ವಿಜಯ್​ ನಟನೆಯ ‘ಸಲಗ’ ಸಿನಿಮಾ ಹಲವು ಕಾರಣಗಳಿಂದಾಗಿ ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಳ್ಳುವ ಮೂಲಕ ‘ಪವರ್​​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಸಾಥ್​ ನೀಡಿದ್ದಾರೆ.

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ
ಪುನೀತ್​ ರಾಜ್​ಕುಮಾರ್​, ಕೆಪಿ ಶ್ರೀಕಾಂತ್​, ದುನಿಯಾ ವಿಜಯ್​
Follow us
| Updated By: ಮದನ್​ ಕುಮಾರ್​

Updated on:Oct 07, 2021 | 10:07 AM

ಸ್ಯಾಂಡಲ್​ವುಡ್​ನಲ್ಲಿ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಸಲಗ’ ಚಿತ್ರ ಅ.14ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ದುನಿಯಾ ವಿಜಯ್​ ಮೊದಲ ಬಾರಿಗೆ ನಿರ್ದೇಶನ ಮಾಡಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ರಿಲೀಸ್​ಗೂ ಮುನ್ನವೇ ಸಖತ್​ ಹೈಪ್​ ಸೃಷ್ಟಿ ಮಾಡಿರುವ ‘ಸಲಗ’ ಚಿತ್ರತಂಡಕ್ಕೆ ಈಗ ಪುನೀತ್​ ರಾಜ್​ಕುಮಾರ್​ ಸಾಥ್​ ನೀಡುತ್ತಿದ್ದಾರೆ. ಶೀಘ್ರದಲ್ಲೇ ನಡೆಯಲಿರುವ ಪ್ರೀ-ರಿಲೀಸ್​ ಇವೆಂಟ್​ಗೆ ‘ಪವರ್​ ಸ್ಟಾರ್​’ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

‘ಸಲಗ’ ಚಿತ್ರದ ನಿರ್ಮಾಪಕ ಕೆಪಿ ಶ್ರೀಕಾಂತ್​ ಅವರು ಈಗಾಗಲೇ ಪುನೀತ್​ ರಾಜ್​ಕುಮಾರ್​ ಅವರನ್ನು ಭೇಟಿಯಾಗಿ, ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದಕ್ಕೆ ಪುನೀತ್​ ಕಡೆಯಿಂದ ಒಪ್ಪಿಗೆ ಕೂಡ ಸಿಕ್ಕಿದೆ. ಆ ಖುಷಿಯನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಮೊದಲ ದಿನದಿಂದಲೂ ನಮ್ಮ ತಂಡಕ್ಕೆ ಬೆಂಬಲ ನೀಡುತ್ತಿರುವ ಪುನೀತ್ ರಾಜ್​ಕುಮಾರ್ ಅವರು ಪ್ರೀ-ರಿಲೀಸ್​ ಇವೆಂಟ್​ಗೆ ಬರಲಿದ್ದಾರೆ’ ಎಂದು ಶ್ರೀಕಾಂತ್​ ಹೇಳಿದ್ದಾರೆ.

ಈ ಸಿನಿಮಾದಲ್ಲಿ ದುನಿಯಾ ವಿಜಯ್​ಗೆ ಜೋಡಿಯಾಗಿ ಸಂಜನಾ ಆನಂದ್​ ನಟಿಸಿದ್ದಾರೆ. ಡಾಲಿ ಧನಂಜಯ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಸೂಪರ್​ ಹಿಟ್​ ಆಗಿವೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಈಗ ಪುನೀತ್​ ಕೂಡ ಸಾಥ್​ ನೀಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇತ್ತೀಚೆಗಷ್ಟೇ ‘ಸಲಗ’ ಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದರು. ‘ಅಕ್ಟೋಬರ್ 14ರಂದು ತೆರೆ ಕಾಣಲಿರುವ ಸಲಗ ಚಿತ್ರದ ತಂಡದವರು ನಾಯಕ ನಟ ದುನಿಯಾ ವಿಜಯ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿದರು. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ಹಾಜರಿದ್ದರು. ದುನಿಯಾ ವಿಜಯ್ ಒಬ್ಬ ಪ್ರತಿಭಾನ್ವಿತ ನಟ, ಹೆಚ್ಚಿನ ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದರು.

ಪ್ರಿ-ರಿಲೀಸ್​ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ

ತೆಲುಗಿನ ‘ಭೀಮ್ಲಾ ನಾಯಕ್’​ ಸಿನಿಮಾಗೆ ಪುನೀತ್​ ರಾಜ್​ಕುಮಾರ್​ ಬೆಂಬಲ; ಧನ್ಯವಾದ ಹೇಳಿದ ಪವನ್ ​ಕಲ್ಯಾಣ್​ ಫ್ಯಾನ್ಸ್

Published On - 9:41 am, Thu, 7 October 21

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ